ಮೌಲ್ಯವರ್ಧಿತ ಉತ್ಪನ್ನ ಬೆಳೆಸಿ ಸ್ವಾವಲಂಬಿಗಳಾಗಿ


Team Udayavani, Feb 14, 2020, 12:32 PM IST

cn-tdy-1

ಚಾಮರಾಜನಗರ: ಮೌಲ್ಯವರ್ಧಿತ ಉತ್ಪನ್ನಗಳನ್ನು ಬೆಳೆಯಲು ಮುಂದಾದರೆ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ಹೇಳಿದರು.

ತಾಲೂಕಿನ ಹೊಂಡರಬಾಳುದಲ್ಲಿರುವ ಪ್ರೊ. ಎಂಡಿಎನ್‌ ಸ್ಮಾರಕ ಅಮೃತಭೂಮಿಯಲ್ಲಿ ಜಿಲ್ಲಾ ರೈತ ಸಂಘದಿಂದ ನಡೆದ ವಿಶ್ವ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ 84ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಮಾತನಾಡಿದ ಅವರು, ಇಂದು ಭಾರತದ ದೆಹಲಿ ಸೇರಿದಂತೆ ಆಸ್ಟ್ರೇಲಿಯಾ, ಕೆನಡಾದೇಶಗಳಲ್ಲಿ ಕೆಲವು ಕಂಪೆನಿಗಳು ನಾವು ಉಸಿರಾಡುವ ಆಮ್ಲಜನಕವನ್ನು ಮಾರಾಟ ಮಾಡುತ್ತಿವೆ. ಇದನ್ನು ಪ್ರೊ.ಎಂ.ಡಿ.ಎನ್‌. ಅನೇಕ ಬಾರಿ ಒತ್ತಿ ಹೇಳುತ್ತಿದ್ದರು. ಕುಡಿಯುವ ನೀರಿಗೂ ದುಡ್ಡು ಕೊಡಬೇಕಾಗುತ್ತದೆ ಎಂಬ ಅವರ ಮಾತು ಆಗಲೇ ನಿಜವಾಗಿದೆ. ಈ ಹಿನ್ನೆಲೆಯಲ್ಲಿ ಪ್ರೊ.ಎಂಡಿಎನ್‌ ಅವರು ಕಂಡ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎನ್ನುವ ಕನಸನ್ನು ನನಸು ಮಾಡಬೇಕಿದೆ. ಯಾರೇ ಆದರೂ ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ಸಂಘಟನೆ ಮಾಡಲು ಮುಂದಾಗಬೇಕು ಎಂದು ಹೇಳಿದರು.

ಬೆಳೆಗೆ ಸಮರ್ಪಕ ಬೆಲೆ ಸಿಗದೇ ಕಂಗಾಲು: ಮೌಲ್ಯವರ್ಧಿತ ಉತ್ಪನ್ನಗಳನ್ನು ಬೆಳೆಯಲು ಮುಂದಾದರೆ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು. ಇಂದಿನ ದಿನಗಳಲ್ಲಿ ನಮ್ಮ ರೈತರು ಏಕ ಬೆಳೆಗೆ ಒಗ್ಗಿಕೊಂ ಡಿರುವ ಕಾರಣ ಬೆಳೆದ ಬೆಳೆಗೆ ಸಮರ್ಪಕ ಬೆಲೆ ಸಿಗದೇ ಕಂಗಾಲಾಗಿ ಆತ್ಮಹತ್ಯೆಗೆ ಈಡಾಗುವ ಸಂದರ್ಭವನ್ನು ತಂದುಕೊಂಡಿದ್ದಾರೆ. ಇದರಿಂದ ಪಾರಾಗಬೇಕಾದರೆ ಮೌಲ್ಯವರ್ಧಿತ ಉತ್ಪನ್ನಗಳಾದ ಸಾವಯವದಿಂದ ತಯಾರಾದ ಬೆಲ್ಲ, ಹಾಲಿನ ಉತ್ಪನ್ನಗಳನ್ನು ತಯಾರಿಸುಬೇಕು. ಸೊಪ್ಪಿನ ಬೆಳೆಗಳನ್ನು ಬೆಳೆಯಬೇಕು, ಅರ್ಧಎಕರೆಯಲ್ಲಿ 10 ಲಕ್ಷ ರೂ.ಗಳವರೆಗೂ ಸಂಪಾದಿಸುವ ಅವಕಾಶವಿದೆ ಎಂದು ತಿಳಿಸಿದರು.

ಸಾವಯವ ಕೃಷಿಕರ ಸಂಘ ಸ್ಥಾಪನೆಗೆ ಕ್ರಮ: ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್‌ ಮಾತನಡಿ, ಕೇಂದ್ರ ಸರ್ಕಾರ ಬೀಜವಿಧೇಯಕ ಮಂಡನೆ ಮಾಡಲು ಮುಂದಾಗಿದ್ದು, ಇದು ಜಾರಿಯಾದರೆ ರೈತರು ವಿದೇಶಿ ಕಂಪನಿಗಳ ಮುಂದೆ ಬೀಜಕ್ಕಾಗಿ ಕೈಒಡ್ಡಿ ನಿಲ್ಲುವ ಪರಿಸ್ಥಿತಿ ಉಂಟಾಗಲಿದೆ. ಇದರ ವಿರುದ್ಧ ಧ್ವನಿ ಎತ್ತಬೇಕಾದರೆ ರೈತ ಸಂಘಗಳು ಸಂಘಟನಾ ಮನೋಭಾವ ಪ್ರದರ್ಶನ ಮಾಡಬೇಕು. ಅಲ್ಲದೆ, ಜಿಲ್ಲೆಯ ಹಲವೆಡೆ ಸಾವಯವ ಕೃಷಿಕರ ಸಂಘಗಳ ಸ್ಥಾಪನೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತ ಸಂಘದ ಕಾರ್ಯಕರ್ತರು ಪ್ರೊ.ಎಂಡಿಎನ್‌ ಅವರನ್ನು ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ವೇಳೆ ‘ವಿಷಮುಕ್ತ ಚಾಮರಾಜನಗರ’ ಘೋಷಣೆ ಮಾಡಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಟೊಮೆಟೋ, ಬದನೆ, ಮೆಣಸಿನಕಾಯಿ ಹೊಸ ತಳಿಗಳ ಪ್ರದರ್ಶನ ಜನರ ಗಮನಸೆಳೆಯಿತು.

ರೈತಸಂಘದ ಪದಾಧಿಕಾರಿಗಳಾದ ಹೊನ್ನೂರು ಬಸವಣ್ಣ, ಅಂಬಳೆ ಮಹದೇವಸ್ವಾಮಿ, ಮಾಡ್ರಳ್ಳಿ ಮಹದೇವಪ್ಪ, ಗುಂಡ್ಲುಪೇಟೆ ಸಂಪತ್‌, ಹೆಗ್ಗವಾಡಿಪುರ ಮಹೇಶ್‌ ಕುಮಾರ್‌ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.