ಈ ವರ್ಷವೇ ಕಾನೂನು ಕಾಲೇಜು ಆರಂಭಿಸಿ


Team Udayavani, Dec 29, 2020, 2:54 PM IST

ಈ ವರ್ಷವೇ ಕಾನೂನು ಕಾಲೇಜು ಆರಂಭಿಸಿ

ಚಾಮರಾಜನಗರ: ತಾವು ಸಂಸದರಾಗಿದ್ದಾಗ ಶ್ರಮ ವಹಿಸಿ ಮಂಜೂರು ಮಾಡಿಸಿದ್ದ ಸರ್ಕಾರಿ ಕಾನೂನು ಕಾಲೇಜನ್ನು ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ತಮ್ಮ ಎಡೆ  ಬಿಡದ ಪ್ರಯತ್ನದಿಂದಾಗಿ ಸಿದ್ದರಾ ಮಯ್ಯ ಅವರು ಮುಖ್ಯಮಂತಿ ಸಂದರ್ಭದಲ್ಲಿ 2017-18ನೇ ಸಾಲಿನಲ್ಲಿ ಚಾಮರಾಜನಗರ ಸರ್ಕಾರಿ ಕಾನೂನು ಕಾಲೇಜು ಮಂಜೂರಾಯಿತು. ಇದಕ್ಕಾಗಿ ಸಿದ್ದರಾಮಯ್ಯಅವರು ಬಜೆಟ್‌ನಲ್ಲಿ 1 ಕೋಟಿ ರೂ.ನೀಡಿದ್ದರು. ಇನ್ನೇನು ಲಾ ಕಾಲೇಜು ಆರಂಭವಾಗುವ ಹಂತದಲ್ಲಿತ್ತು. ಆದರೆ, ಬಾರ್‌ ಕೌನಿಲ್ಸ್ ಆಫ್ ಇಂಡಿಯಾ ದೇಶದಲ್ಲಿ 3 ವರ್ಷಗಳ ಕಾಲ ಯಾವುದೇ ಹೊಸ ಕಾನೂನು ಕಾಲೇಜು ಸ್ಥಾಪನೆ ಬೇಡ ಎಂದು ನಿರ್ಧಾರ ಕೈಗೊಂಡಿತ್ತು. ಹೀಗಾಗಿ ಇದುವರೆಗೆ ಕಾನೂನು ಕಾಲೇಜು ಆರಂಭಿಸಲು ಸಾಧ್ಯವಿರಲಿಲ್ಲ. ಆದರೆ ಇತ್ತೀಚಿಗಷ್ಟೇ ಬಾರ್‌ ಕೌನ್ಸಿಲ್‌ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಆದ್ದರಿಂದ ಕಾನೂನು ಕಾಲೇಜು ಆರಂಭಿಸಲು ಇದ್ದ ತಡೆ ನಿವಾರಣೆಯಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಮುಂಬರುವ2021ರ ಸಾಲಿನಲ್ಲಿಯೇ ಚಾಮರಾಜನಗರ ದಲ್ಲಿ ಕಾನೂನು ಕಾಲೇಜು ಪ್ರಾರಂಭ ಮಾಡಬೇಕು ಎಂದರು.

ರಾಜ್ಯದಲ್ಲಿ ಹಾಸನ, ಹೊಳೆನರಸೀಪುರ, ರಾಮನಗರ, ಕಲುಬುರಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಾತ್ರ ಸರ್ಕಾರಿ ಕಾನೂನು ಕಾಲೇಜು ಇದ್ದು, ಚಾಮರಾಜ ನಗರ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಾನೂನು ಕಾಲೇಜು ಇರಲಿಲ್ಲ. ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಕಾನೂನು ಕಾಲೇಜು ಸಹಕಾರಿ ಆಗಲಿದೆ ಎಂಬ ಕಾರಣಕ್ಕೆ ನಾನುಸಂಸದನಾಗಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಜಿ.ಟಿ.ಜಯಚಂದ್ರ ಅವರ ಮೇಲೆ ತೀವ್ರಒತ್ತಡ ತಂದ ಪರಿಣಾಮ ಚಾಮರಾಜನಗರಕ್ಕೆಸರ್ಕಾರಿ ಕಾಲೇಜು ಸ್ಥಾಪನೆಗೆ ಮಂಜೂರಾತಿದೊರೆಯಿತು. ಚಾಮರಾಜನಗರದ ಹಳೇ ಕೇಂದ್ರಿಯ ವಿದ್ಯಾಲಯದ ಕಟ್ಟಡದಲ್ಲಿ ಕಾನೂನು ಕಾಲೇಜು ಸ್ಥಾಪನೆಗಾಗಿ 17 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡವನ್ನು ದುರಸ್ತಿ ಗೊಳಿಸಲಾಯಿತು. ಕಾನೂನು ಕಾಲೇಜು ಸ್ಥಾಪನೆಗಿದ್ದ ತಡೆ ನಿವಾರಣೆಯಾಗಿರುವ ವಿಷಯವನ್ನು ಸುತ್ತೂರು ಶ್ರೀಗಳಿಗೆ ತಿಳಿಸಿದೆ. ಅವರುಕಾನೂನು ಸಚಿವ ಮಾಧುಸ್ವಾಮಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದರು. ಮಾಧುಸ್ವಾಮಿ ಅವರು ನನ್ನನ್ನು ಭೇಟಿ ಮಾಡುವಂತೆ ತಿಳಿಸಿದ್ದಾರೆ. ನಾನು ನಾಳೆಯೇ (ಮಂಗಳವಾರ) ಮಾಧುಸ್ವಾಮಿ ಅವರನ್ನು ಭೇಟಿ ಮಾಡಲಿದ್ದೇನೆ ಎಂದರು.

ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರಿ ಕಾನೂನು ಕಾಲೇಜು ತುಂಬಾ ಅವಶ್ಯಕತೆ ಇರುವುದರಿಂದ ಈ ಪ್ರಸಕ್ತ ಶೈಕ್ಷಣಿಕ ವರ್ಷ ದಿಂದಲೇ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಕಾನೂನು ಸಚಿವರು ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು ಇತರರಿದ್ದರು.

ಕೃಷಿ ಕಾಲೇಜಿಗೆ 25 ಕೋಟಿ ಬಳಕೆಗೆ ಸಮ್ಮತಿಸಿ :

ಚಾಮರಾಜನಗರದಲ್ಲಿ ಆರಂಭವಾಗಿರುವ ಕೃಷಿ ಕಾಲೇಜಿನ ಸ್ವಂತ ಕಟ್ಟಡ ನಿರ್ಮಾಣಕ್ಕೆ ನರ್ಬಾರ್ಡ್‌ ಅನುದಾನ 25 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಹಣವನ್ನು ಕಾಮಗಾರಿಗೆ ನೀಡಲು ಸಚಿವ ಸಂಪುಟ ಸಮ್ಮತಿ ನೀಡಬೇಕು ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ ಒತ್ತಾಯಿಸಿದರು.

ಚಾಮರಾಜನಗರಕ್ಕೆ ಕೃಷಿ ಕಾಲೇಜು ಮಂಜೂರಾಗಿ 3 ವರ್ಷವಾಗಿದೆ. ಕಾಲೇಜು ಪ್ರಸ್ತುತ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿದೆ. ಯಡಬೆಟ್ಟದ ತಪ್ಪಲಿನಲ್ಲಿ 75 ಎಕರೆ ಜಾಗದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗಗುರುತಿಸಲಾಗಿದ್ದು, ನರ್ಬಾರ್ಡ್‌ನಿಂದ 25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯ ಅನುಮತಿ ನೀಡಬೇಕು ಎಂದು ತಿಳಿಸಿದರು.ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಈಗಾಗಲೇ 5

ಕೋಟಿ ರೂ. ಬಿಡುಗಡೆ ಮಾಡಿದೆ. ಈ ಹಣದಲ್ಲಿ ಕಾಲೇಜು ಕಟ್ಟಡದ ಆರಂಭದ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಹಾಗೆಯೇ ಡಾ. ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.