ಭಾರತ ಜೋಡೋ ಯಾತ್ರೆ: ಪೇ ಸಿಎಂ ಟೀ ಶರ್ಟ್ ಧರಿಸಿ ಸರಕಾರದ ವಿರುದ್ಧ ಆಕ್ರೋಶ
Team Udayavani, Sep 30, 2022, 6:47 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಯುವಕನೋರ್ವ ಪೇ ಸಿಎಂ ಟೀ ಶರ್ಟ್ ಧರಿಸಿ, ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಪಾಲ್ಗೊಂಡು ಹಜ್ಜೆ ಹಾಕುವ ಮೂಲಕ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.
ವಿಜಯಪುರ ಜಿಲ್ಲೆಯ ಯುವಕ ಅಕ್ಷಯ್ ಕುಮಾರ್ ಸಿಂಧಗಿ ಎಂಬಾತ ಗುಂಡ್ಲುಪೇಟೆಯಿಂದ ಆರಂಭವಾದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಬಿಳಿ ಬಣ್ಣದ ಟೀ ಶರ್ಟ್ ಮೇಲೆ ಪೇ ಸಿಎಂ ಎಂದು ಹಾಕಿಕೊಂಡು ಧ್ವಜ ಹಿಡಿದು ಎಲ್ಲರ ಗಮನ ಸೆಳೆದಿದ್ದಾನೆ.
ಬಿಜೆಪಿ 40% ಸರ್ಕಾರವಾಗಿದ್ದು, ಯುವಕರಿಗೆ ಉದ್ಯೋಗ ಕೊಡದೇ ಬೀದಿಪಾಲು ಮಾಡುತ್ತಿದೆ.ಸರಕಾರದಿಂದ ಆಗಿರುವ ಅನ್ಯಾಯ ಅರಿತು ಜನರು ಅರಿತು ಪ್ರಜ್ಞಾವಂತರಾಗಬೇಕು ಎಂಬ ಉದ್ದೇಶದಿಂದ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದರು.