ನೂರಾರು ಭಕ್ತರಿಂದ ಬಿಳಿಗಿರಿ ರಂಗನ ದರ್ಶನ
Team Udayavani, Jun 14, 2020, 5:00 AM IST
ಯಳಂದೂರು: ತಾಲೂಕಿನ ಪ್ರಸಿದ್ಧ ಬಿಳಿಗಿರಿ ರಂಗನ ಬೆಟ್ಟದ ಬಿಳಿಗಿರಿರಂಗನಾಥ ಸ್ವಾಮಿ ದೇಗುಲಕ್ಕೆ ಶನಿವಾರ ಭಕ್ತರ ದಂಡೇ ಆಗಮಿಸಿತ್ತು. ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು, ಮಕ್ಕಳಿಗೆ ವೃದ್ಧರಿಗೆ ಪ್ರವೇಶವಿಲ್ಲ, ಮುಡಿ ಸೇವೆ ಇಲ್ಲ ಎಂಬುದಕ್ಕೆ ದೇಗುಲದ ಆಡಳಿತ ಮಂಡಳಿ ಜನತೆ ಭಕ್ತರು ವಾಗ್ವಾದಕ್ಕಿಳಿದರು. ಲಾಕ್ಡೌನ್ ತೆರವುಗೊಂಡ ಬಳಿಕ ದೇವಸ್ಥಾನದ ಬಾಗಿಲು ತೆರೆದಿದೆ.
ಶನಿವಾರ ಇಲ್ಲಿಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಕೋವಿಡ್-19ರ ನಿಯಮದಂತೆ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಥರ್ಮಲ್ ಸ್ಕ್ರೀನಿಂಗ್ ಮಾಡುವಂತೆ ಕೈಗಳಿಗೆ ಸ್ಯಾನಿಟೈಸರ್ ಬಳಸಲು ದೇಗುಲದ ವತಿಯಿಂದ ವ್ಯವಸ್ಥೆ ಮಾಡಲಾಗಿತ್ತು.
ಮುಡಿಸೇವೆಗೆ ಪಟ್ಟು: ಸರ್ಕಾರದ ನಿಯಮಗಳ ಪ್ರಕಾರ ಮುಡಿಸೇವೆ ಸ್ಥಗಿತಗೊಳಿಸಲಾಗಿದೆ. ಆದರೆ ಭಕ್ತರು ದೇಗುಲದ ಆಡಳಿತ ಮಂಡಲಿ ಜೊತೆ ಮುಡಿಸೇವೆಗೆ ಪಟ್ಟು ಹಿಡಿದರು. 10 ವರ್ಷದೊಳಗಿನ ಹಾಗೂ 65 ವರ್ಷ ಮೇಲ್ಪಟ್ಟವರಿಗೆ ಪ್ರವೇಶವಿಲ್ಲ ಎಂಬ ಸೂಚನಾ ಫಲಕ ಹಾಕಿದ್ದರೂ ಮಕ್ಕಳು ವೃದ್ಧರಿಗೆ ದರ್ಶನ ನೀಡಲೇಬೇಕು ಎಂದು ಭಕ್ತರು ವಾಗ್ವಾದಕ್ಕಿಳಿದರು.
ದೇಗುಲಕ್ಕೆ ಬರುವ ಭಕ್ತರಿಗೆ ನಿಯಮಾವಳಿಗಳ ಬಗ್ಗೆ ತಿಳಿ ಹೇಳಿದರೂ ಇದಕ್ಕೆ ಸ್ಪಂದಿಸುತ್ತಿಲ್ಲ. ನಿಯಮಗಳನ್ನು ಗಾಳಿಗೆ ತೂರಿದರೆ ಸೋಂಕಿನ ಅಪಾಯ ತಪ್ಪಿದ್ದಲ್ಲ. ಇವೆ ಲ್ಲದರ ನಡುವೆಯೂ ಜನರನ್ನು ಸಂಭಾಳಿಸುವುದು ಕಷ್ಟ ವಾಗಿದೆ. ಈ ಬಗ್ಗೆ ಉನ್ನತ ಅಧಿಕಾರಿಗಳು ಕ್ರಮ ವಹಿಸ ಬೇಕು ಎಂದು ಕೆಲ ಭಕ್ತರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು
ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ