ಬಂಡೀಪುರ ಅರಣ್ಯದಲ್ಲಿ ಪಕ್ಷಿ ಗಣತಿ ಆರಂಭ
Team Udayavani, Feb 6, 2021, 4:44 PM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ 13 ವಲಯಗಳಲ್ಲಿಯೂ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಪಕ್ಷಿಗಳ ಗಣತಿ ಕಾರ್ಯಕ್ರಮ ಆರಂಭವಾಯಿತು.
ತಾಲೂಕಿನ ಬಂಡೀಪುರ, ಗುಂಡ್ಲುಪೇಟೆ ಹಾಗೂ ಹೆಡಿಯಾಲ ಉಪಭಾಗಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ 700ಕ್ಕೂ ಹೆಚ್ಚು ಜನರ ಪೈಕಿ ಈ ಹಿಂದೆ ವಿವಿಧ ಗಣತಿ ಕಾರ್ಯಗಳಲ್ಲಿ ಪಾಲ್ಗೊಂಡಿದ್ದ 77 ಸ್ವಯಂಸೇವಕರನ್ನು ಮಾತ್ರ ಅಯ್ಕೆ ಮಾಡಲಾಯಿತು. ಅದರಂತೆ ಹೆಡಿಯಾಲ ಉಪವಿಭಾಗದಲ್ಲಿ 24 ಕಳ್ಳಬೇಟೆ ನಿಗ್ರಹ ಶಿಬಿರಗಳಿರುವುದರಿಂದ ಅಲ್ಲಿಗೆ 48, ಬಂಡೀಪುರಕ್ಕೆ 15 ಹಾಗೂ ಗುಂಡ್ಲುಪೇಟೆಗೆ 14 ಗಣತಿದಾರರನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮೊದಲನೇ ದಿನವಾದ ಶುಕ್ರವಾರ ಸ್ವಯಂಸೇವಕರಿಗೆ ಗಣತಿ ಸಂದರ್ಭದಲ್ಲಿ ಪರಿಗಣಿಸಬೇಕಾದ ಅಂಶಗಳ ಬಗ್ಗೆ ಸೂಚನೆ ನೀಡಲಾಯಿತು. ಪ್ರತಿ ತಂಡದಲ್ಲಿ ಇಬ್ಬರು ಗಣತಿದಾರರು ಹಾಗೂ ಒಬ್ಬರು ಅರಣ್ಯ ಸಿಬ್ಬಂದಿ ಇದ್ದು ಇವರು ಸಮೀಪದಲ್ಲಿ ಸಿಗುವ ಕಳ್ಳಬೇಟೆ ನಿಗ್ರಹ ಶಿಬಿರದಲ್ಲಿ ಉಳಿದುಕೊಳ್ಳಲಿದ್ದಾರೆ. ಪಕ್ಷಿ ಗಣತಿಯನ್ನು ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ 6ರಿಂದ 9 ಮಧ್ಯಾಹ್ನ 3ರಿಂದ ಸಂಜೆ 6 ಗಂಟೆವರೆಗೆ ಗಣತಿ ನಡೆಸಲಾಗುವುದು ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ :ಉತ್ತಮ ಶಿಕ್ಷಣ ಪಡೆದು ಪ್ರಗತಿ ಸಾಧಿಸಿ: ಕೊಟ್ರೇಶ್
ಈ ಪಕ್ಷಿ ಗಣತಿ ಕಾರ್ಯದಲ್ಲಿ ಹೆಡಿಯಾಲ ಉಪಭಾಗದ ಎಸಿಎಫ್ ಎಂ.ಎಸ್.ರವಿಕುಮಾರ್ ಗುಂಡ್ಲುಪೇಟೆ ಉಪಭಾಗದ ಎಸಿಎಫ್ ಪರಮೇಶ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ