ಪಕ್ಷಿ ಗಣತಿ ಪೂರ್ಣ ! ಹೊಸ ಪ್ರಭೇದದ ಹಕ್ಕಿಗಳು ಗೋಚರ
Team Udayavani, Feb 8, 2021, 1:34 PM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶುಕ್ರವಾರದಿಂದ ನಡೆಯುತ್ತಿದ್ದ ಮೂರು ದಿನಗಳ ಪಕ್ಷಿ ಗಣತಿ ಕಾರ್ಯ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಬಂಡೀಪುರ ಉದ್ಯಾನ ವ್ಯಾಪ್ತಿಯ 13 ವಲಯಗಳಲ್ಲಿ ಗಣತಿಯಲ್ಲಿ ಪಾಲ್ಗೊಂಡ 80 ಸ್ವಯಂಸೇವಕರು ಭಾನುವಾರ ಆಯಾ ವಲಯಗಳಲ್ಲಿ ತಾವು ಗುರುತಿಸಿ ವಲಸೆ ಮತ್ತು ಅಳಿವಿನಂಚಿನಲ್ಲಿರುವ ಪಕ್ಷಿಗಳ ವಿವರಗಳುಳ್ಳ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದರು.
ಪಕ್ಷಿಗಳ ಅಂಕಿ ಅಂಶಗಳ ವಿವರವನ್ನು ಸೋಮವಾರ ಪ್ರಕಟಿಸುವುದಾಗಿ ಅರಣ್ಯ ಇಲಾಖೆ ತಿಳಿಸಿದೆ. ಮದ್ದೂರು ಅರಣ್ಯ ವಲಯದಲ್ಲಿ ಗಣತಿಯಲ್ಲಿ 30 ಪ್ರಭೇದದ ಪಕ್ಷಿಗಳು ಕಂಡು ಬಂದಿವೆ. ಇಲ್ಲಿ ಖ್ಯಾತ ವನ್ಯಜೀವಿ ಛಾಯಾಗ್ರಾಹಕ ಆರ್.ಕೆ.ಮಧು ಚೀನಾದಿಂದ ವಲಸೆ ಬಂದಿರುವ ಬೂಟೆಡ್ ವಾಬ್ಲಿರ್ ಹಕ್ಕಿಯನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಭಾನುವಾರ ಮಧ್ಯಾಹ್ನ ಬಂಡೀಪುರದಲ್ಲಿ ಎಸಿಎಫ್ ಪಾಟೀಲ್, ಗುಂಡ್ಲುಪೇಟೆ ಉಪವಿಭಾಗದ ಎಸಿಎಫ್ ಕೆ.ಪರಮೇಶ್, ಹೆಡಿಯಾಲದಲ್ಲಿ ಎಸಿಎಫ್ ಎಂ.ಎಸ್.ರಕುಮಾರ್ ಗಣತಿದಾರರಿಗೆ ಪ್ರಮಾಣಪತ್ರ ವಿತರಿಸಿದರು.
ಇದನ್ನೂ ಓದಿ: ಕುರುಚಲು ಕಾಡಿಗೆ ಬೆಂಕಿ: ತೋಟಗಳು ಹಾನಿ
ಈ ವೇಳೆ ಆರ್ಎಫ್ಒ ಗಳಾದ ಎನ್.ಪಿ.ನವೀನ್ಕುಮಾರ್, ಗೀತಾನಾಯಕ್, ಮಂಜುನಾಥ್, ಮುನಿರಾಜು, ಡಾ.ಲೋಕೇಶ್ ಸೇರಿದಂತೆ ಹಲವರು ಇದ್ದರು.
ಯಶಸ್ವಿ ಪಕ್ಷಿಗಣತಿ: ಈ ಬಗ್ಗೆ ಪ್ರತಿಕ್ರಿಯಿಸಿರುವ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್, 80 ಜನ ಸ್ವಯಂ ಸೇವಕರು ಮತ್ತು ನಮ್ಮ ಸಿಬ್ಬಂದಿ ಉತ್ತಮ ರೀತಿಯಲ್ಲಿ ಪ್ರಥಮ ಬಾರಿಗೆ ಪಕ್ಷಿಗಣತಿಯನ್ನು ಮಾಡಿ ಯಶಸ್ವಿಯಾಗಿದ್ದಾರೆ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ