ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ
Team Udayavani, May 9, 2020, 5:13 AM IST
ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ಹಾಗೂ ಅಜಾದ್ ಹಿಂದೂ ಸೇನಾ ಕಾರ್ಯಕರ್ತರು ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಕೋವಿಡ್ 19 ತಡೆಗಟ್ಟುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ ಹಿನ್ನೆಲೆಯಿಂದಾಗಿ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆಯಾಗಿರುವ ರೋಗಿಗಳಿಗೆ ತೊಂದರೆಯಾಗಿತ್ತು. ಇದನ್ನು ಮನಗಂಡು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ಹಾಗೂ ಅಜಾದ್ ಹಿಂದೂ ಸೇನಾ ಕಾರ್ಯಕರ್ತರು ನಗರದಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಪ್ರಶಾಂತ್ ರಕ್ತದಾನ ಮಾಡಿದರು. ಮಂಡಲ ಅಧ್ಯಕ್ಷ ಪ್ರಶಾಂತ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ವಾರಕ್ಕೊಮ್ಮೆ ಪಕ್ಷದ ಕಾರ್ಯಕರ್ತರು, ಅಜಾದ್ ಹಿಂದೂ ಸೇನೆ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲಿದ್ದಾರೆ. ಇಂದು ಸಾಂಕೇತಿಕವಾಗಿ ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ರಾಮಚಂದ್ರ, ಆಜಾದ್ ಹಿಂದೂ ಸೇನೆಯ ಜಿಲ್ಲಾಧ್ಯಕ್ಷ ಎಂ.ಎಸ್.ಪೃಥ್ವಿರಾಜ್ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಅರಕಲವಾಡಿ ಮಹೇಶ್, ಜಿಲ್ಲಾ ರೈತಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಮಿತ್ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಪ್ರಸಾದ್, ರಕ್ತನಿಧಿ ಕೇಂದ್ರಅಧಿಕಾರಿ ಡಾ. ಸುಜಾತಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ