ಸಾವರ್ಕರ್, ಮಹಮ್ಮದ್ ಆಲಿ ಜಿನ್ನಾ ಇಬ್ಬರೂ ನಾಸ್ತಿಕರು: ಬಿ.ಕೆ.ಹರಿಪ್ರಸಾದ್
ಇಬ್ಬರೂ ಸೇರಿ ದೇಶವನ್ನು ಈ ಸ್ಥಿತಿ ಮಾಡಿದರು....
Team Udayavani, Aug 25, 2022, 5:04 PM IST
ಗುಂಡ್ಲುಪೇಟೆ(ಚಾಮರಾಜನಗರ): ಸಾವರ್ಕರ್ ಹಾಗೂ ಮಹಮ್ಮದ್ ಆಲಿ ಜಿನ್ನಾ ಇಬ್ಬರೂ ಕೂಡ ನಾಸ್ತಿಕರು. ಅವರಿಬ್ಬರೂ ಸೇರಿ ದೇಶವನ್ನು ಈ ಸ್ಥಿತಿ ಮಾಡಿದರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಾವರ್ಕರ್ ಓರ್ವ ನಾಸ್ತಿಕ ಹಿನ್ನೆಲೆ ದೇವರು-ದಿಂಡಿರು ಬಗ್ಗೆ ನಂಬಿಕೆ ಇರಲಿಲ್ಲ. ಅಂತವರನ್ನು ತೆಗೆದುಕೊಂಡು ಹೋಗಿ ನಂಬಿಕಸ್ಥರ ಜಾಗದಲ್ಲಿ ಇಡುವುದು ಹಾಸ್ಯಾಸ್ಪದ. ಅವರ ಆತ್ಮಕತೆ, ಚರಿತ್ರೆ ಓದದೇ ರಾಜಕೀಯ ಹಿತಾಸಕ್ತಿಗಾಗಿ ಮಾಡಲು ಹೋದವರಿಗೆ ಏನು ಹೇಳಬೇಕೆಂದು ಗೊತ್ತಾಗುವುದಿಲ್ಲ ಎಂದು ಕಿಡಿಕಾರಿದರು.
ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ
ಧರ್ಮ, ಜಾತಿ, ಭಾಷೆ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಿ ದೇಶವನ್ನು ಕಲುಷಿತಗೊಳಿಸುತ್ತಿದೆ. ಬಿಜೆಪಿ ಅವರಂತೆ ಯಾತ್ರೆ ಮಾಡಿ ಧಂಗೆ, ಕೊಲೆ, ಸುಲಿಗೆ ಮಾಡಿಲ್ಲ. ಅವರು ಯಾವಾಗ ಯಾತ್ರೆ ಮಾಡಿದರೂ ಕೋಮುಗಲಭೆ ಆಗಿದೆ. ನಮ್ಮದು ಜೋಡೋ ಯಾತ್ರೆ, ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕೆಲಸ ಮಾಡಲಿದೆ. ಭಾರತ ಕಾವಲು ದಾರಿಯಲ್ಲಿದ್ದು, ಅಸಲಿ ದೇಶಭಕ್ತರು ಒಂದು ಕಡೆಯಾದರೆ, ಸಂಘಿಗಳು ನಕಲಿ ದೇಶ ಭಕ್ತರಾಗಿದ್ದಾರೆ. ದೇಶದ ಏಕತೆ, ಸಮಗ್ರತೆ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.
ಭ್ರಷ್ಟಾಚಾರ ಮರೆ ಮಾಚಲು ಇತಿಹಾಸ ಯಿದ್ದುವ ಕೆಲಸ
ಬೆಲೆ ಏರಿಕೆ, ಶೇ.50 ಕಮಿಷನ್ ನಿಂದ ಜನರು ತತ್ತರಿಸಿ ಹೋಗಿದ್ದು, ಕೇಂದ್ರ ಮತ್ತು ರಾಜ್ಯ ಬಿಜೆಪಿಯ ಭ್ರಷ್ಟಾಚಾರ ಮರೆ ಮಾಚಲು ಇತಿಹಾಸ ತಿದ್ದಿ ಗೊಂದಲ ಎಬ್ಬಿಸುವ ಕೆಲಸ ಮಾಡುವ ಜೊತೆಗೆ ಬೇರೆ ಬೇರೆ ವಿಚಾರ ಎಳೆದು ತರುತ್ತಿದ್ದಾರೆ. ಸರ್ಕಾರಗಳು ಮಹಿಳೆಯರಿಗೆ ರಕ್ಷಣೆ ಕೊಡಲಾಗುತ್ತಿಲ್ಲ, ರೈತರಿಗೆ ಬೆಂಬಲ ಬೆಲೆ ಕೊಡುತ್ತಿಲ್ಲ, ಪ್ರವಾಹ ಹಾನಿಗೆ ಪರಿಹಾರ ಕೊಡುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!