ಮುರಿದು ಬಿದ್ದ ಮರದ ಕೊಂಬೆ: ತಪ್ಪಿದ ಅನಾಹುತ


Team Udayavani, Feb 11, 2019, 7:23 AM IST

muridu.jpg

ಸಂತೆಮರಹಳ್ಳಿ: ಯಳಂದೂರು ಪಟ್ಟಣದ ಸಂತೆಮಾಳದಲ್ಲಿ ಭಾರೀ ಗಾತ್ರದ ಒಣಗಿದ ಅರಳಿ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ಭಾನುವಾರ ಜರುಗಿದೆ. ಇದರಿಂದ ವ್ಯಾಪಾರಿಯೊಬ್ಬರ ಬೈಕ್‌ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ: ಪಟ್ಟಣದಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತದೆ. ಸುವರ್ಣಾವತಿ ನದಿದಡದಲ್ಲಿ ಇದಕ್ಕಾಗಿ ಸ್ಥಳವನ್ನು ನಿಗದಿ ಮಾಡಲಾಗಿದೆ. ಇದು ತರಕಾರಿ, ಕಾಯಿಪಲ್ಯಗಳ ಪ್ರಮುಖ ಮಾರುಕಟ್ಟೆಯಾಗಿದೆ. ಪ್ರತಿ ವಾರ ನೂರಾರು ವರ್ತಕರು ಹಾಗೂ ಸಾವಿರಾರು ಗ್ರಾಹಕರು ಇಲ್ಲಿ ವಹಿವಾಟು ನಡೆಸುತ್ತಾರೆ.

ಸಂತೆ ಮೈದಾನದ ಸುತ್ತುಗೋಡೆಗೆ ಹೊಂದಿಕೊಂಡಂತೆ ಬೃಹತ್‌ ಗಾತ್ರದ ಅರಳಿಮರವೂ ಇದೆ. ಆದರೆ ಇದರ ಬಹುತೇಕ ದೊಡ್ಡದೊಡ್ಡ ಕೊಂಬೆಗಳು ಒಣಗಿ ನಿಂತಿವೆ. ಈ ಹಿಂದೆಯೂ ಒಂದು ಕೊಂಬೆ ಬಿದ್ದು ಸುತ್ತುಗೋಡೆಯೇ ಜಖಂಗೊಂಡಿತ್ತು. ಆದರೆ ಆಗ ಸಂತೆ ಇಲ್ಲದ್ದರಿಂದ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಆಗಲೇ ಮರ ತೆರವುಗೊಳಿಸಿಕೊಡಬೇಕು ಎಂದು ಇಲ್ಲಿನ ವರ್ತಕರು ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು ಆದರೂ ಇದರ ತೆರವಿಗೆ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು.

ಭಾನುವಾರ ಸಂತೆಯ ಸಮಯದಲ್ಲೇ ನೀರಿನ ತೊಂಬೆಯ ಬಳಿ ಕೊಂಬೆ ಬಿದ್ದಿದೆ. ಪಕ್ಕದಲ್ಲೇ ಬೈಕ್‌ ಮೇಲೆ ಕುಳಿತಿದ್ದ ವ್ಯಾಪಾರಿ ನಿಂಗರಾಜು ಮೇಲೆ ಬಿದ್ದು ಸಣ್ಣ ಗಾಯಗಳಾಗಿದ್ದು, ಬೈಕ್‌ ಜಖಂಗೊಂಡಿದೆ. ಅಲ್ಲದೆ ಇದರ ಪಕ್ಕದಲ್ಲೇ ವಿದ್ಯುತ್‌ ತಂತಿಯೂ ಹಾದುಹೋಗಿದೆ. ಅದೃಷ್ಟವಶಾತ್‌ ತಂತಿಯ ಮೇಲೆ ಇದು ಬಿದ್ದಿದ್ದರೆ ಭಾರಿ ಪ್ರಮಾಣದ ದುರಂತವೊಂದು ಸಂಭವಿಸುವ ಅಪಾಯವೂ ಇತ್ತು ಎಂದು ವರ್ತಕರಾದ ನಾಗರಾಜು ತಿಳಿಸಿದರು.

ಮೂಲ ಸೌಲಭ್ಯಗಳೇ ಇಲ್ಲ: ಪಟ್ಟಣ ಪಂಚಾಯಿತಿ ವತಿಯಿಂದ ನಡೆಯುವ ಈ ಸಂತೆಯಲ್ಲಿ ಪ್ರತಿ ವಾರವೂ ಸುಂಕವನ್ನು ವಸೂಲಿ ಮಾಡಲಾಗುತ್ತದೆ. ಆದರೆ ಇಲ್ಲಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಸೋತಿದೆ. ಸಂತೆಯ ಮಧ್ಯೆ ಹಾದು ಹೋಗಿರುವ ವಿದ್ಯುತ್‌ ಕಂಬವನ್ನು ತೆರವುಗೊಳಿಸಬೇಕು. ಇದರ ಹಿಂಭಾಗ ಸಾಮೂಹಿಕ ಮಲಮೂತ್ರ ವಿಸರ್ಜನಾ ಸ್ಥಳವಾಗಿ ಮಾರ್ಪಟ್ಟಿದ್ದು ಅನೈರ್ಮಲ್ಯ ತಾಂಡವವಾಡುತ್ತಿದೆ. ಇಲ್ಲಿ ಸ್ವಚ್ಛತೆಗೆ ಆದ್ಯತೆ ನಿಡಬೇಕು. ಕುಡಿಯುವ ನೀರಿನ ತೊಂಬೆ ಇದ್ದರು ಕೆಲವು ಸಂದರ್ಭದಲ್ಲಿ ನೀರೆ ಇರುವುದಿಲ್ಲ.

ಇಲ್ಲಿಗೆ ಸಮರ್ಪಕ ನೀರಿನ ವ್ಯವಸ್ಥೆ ಮಾಡಬೇಕು. ಶನಿವಾರ ರಾತ್ರಿ ವೇಳೆಗೆ ವ್ಯಾಪಾರಿಗಳು ಸಾಮಾನು ಸರಂಜಾಮುಗಳನ್ನು ಇಲ್ಲಿ ಇಳಿಸಿಕೊಳ್ಳುತ್ತಾರೆ. ಆದರೆ ಇರುವ ಹೈಮಾಸ್ಟ್‌ ದೀಪ ಸರಿಯಾಗಿ ಉರಿಯುವುದೇ ಇಲ್ಲ ಹಾಗಾಗಿ ಇದನ್ನು ದುರಸ್ತಿಪಡಿಸಬೇಕು. ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲಿನಲ್ಲೇ ಪ್ಲಾಸ್ಟಿಕ್‌ ಪರದೆ ಕಟ್ಟಿಕೊಂಡು ವ್ಯಾಪಾರ ಮಾಡುವ ಸ್ಥಿತಿ ಇದ್ದು ಇದಕ್ಕೆ ಸೂಕ್ತ ಛಾವಣಿಯ ವ್ಯವಸ್ಥೆ ಮಾಡಬೇಕು ಎಂಬುದು ಇಲ್ಲಿನ ವ್ಯಾಪಾರಿಗಳಾದ ಮಹಾದೇವಸ್ವಾಮಿ, ನಿಂಗರಾಜು ಸೇರಿದಂತೆ ಹಲವರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.