ಬಿಎಸ್‌ಪಿ ನಮಗೆ ಎದುರಾಳಿಯಲ್ಲ: ಸಚಿವ ಪುಟ್ಟರಂಗಶೆಟ್ಟಿ


Team Udayavani, May 8, 2019, 3:00 AM IST

bsp

ಯಳಂದೂರು: ಮುಂದೆ ನಡೆಯುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷವು ನಮಗೆ ಎದುರಾಳಿಯಲ್ಲ ಬಿಜೆಪಿ ಪಕ್ಷವುವೇ ನಮಗೆ ನೇರ ಎದುರಾಳಿ ಎಂದು ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ಪಟ್ಟಣ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ನಡೆದ ಪಟ್ಟಣ ಪಂಚಾಯಿತಿ ಚುನಾವಣೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಳಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 11 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವು ಗೆಲ್ಲುವ ವಿಶ್ವಾಸವಿದೆ. ಪಕ್ಷಕ್ಕೆ ಪ್ರಮಾಣಿಕವಾಗಿ ದುಡಿಯುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದರು.

ಅಭ್ಯರ್ಥಿ ಪರ ದುಡಿಯಿರಿ: ಪಕ್ಷದಿಂದ ಎಲ್ಲಾತರಹ ಸಹಕಾರವನ್ನು ಪಡೆದು ಪಕ್ಷಕ್ಕೆ ದ್ರೋಹ ಮಾಡಿರುವ ಉದಾರಣೆಗಳು ಇದೆ. ಇಂತಹ ಕೀಳು ಮಟ್ಟದ ರಾಜಕೀಯ ನಿಲ್ಲಬೇಕು, ಪಕ್ಷ ತಂದೆ ತಾಯಿ ಇದ್ದಾಗೆ ಪಕ್ಷಕ್ಕೆ ದ್ರೋಹ ಮಾಡಿದರೆ ತಂದೆ ತಾಯಿಗೆ ದ್ರೋಹ ಮಾಡಿದಾಗೆ ಹಾಗುತ್ತದೆ. ಎಲ್ಲಾ ಕಾರ್ಯಕರ್ತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತಗೆದುಕೊಂಡು ಒಗ್ಗಟ್ಟಿನಿಂದ ಪಕ್ಷ ಅಭ್ಯರ್ಥಿಗಳ ಪರ ದುಡಿಯಬೇಕು ಎಂದು ಸಲಹೆ ನೀಡಿದರು.

ಜನಾಭಿಪ್ರಾಯ ಸಂಗ್ರಹ: ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಟ್ಟಣ 11 ವಾರ್ಡ್‌ಗಳಲ್ಲಿ ಜನಾಭಿಪ್ರಾಯಗಳನ್ನು ಪಡೆದುಕೊಂಡು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಜನರ ನಡುವೆ ಉತ್ತಮ ಕೆಲಸಗಳನ್ನು ಸಾರ್ವಜನಿಕರ ಸೇವೆ ಸಲ್ಲಿಸುವ ವ್ಯಕ್ತಿಗಳಿಗೆ ಈ ಬಾರಿ ಕಾಂಗ್ರೆಸ್‌ ಟಿಕೆಟ್‌ನ್ನು ನೀಡಲಾಗವುದು. ಅವಕಾಶ ವಂಚಿತ ಸಮುದಾಯಗಳನ್ನು ಪರಿಗಣಿಸಿ ಅಧಿಕಾರ ಸಿಗುವಂತೆ ಗಮನ ಹರಿಸಲಾಗುವುದು ಎಂದರು.

ಅಧಿಕಾರ ಪಡೆಯುವ ವಿಶ್ವಾವಿದೆ: ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕಡೇ ಚುನಾವಣೆಯು ದಿನಾಂಕ ನಿಗದಿಯಾಗಿದೆ. ಪಟ್ಟಣ ಪಂಚಾಯಿತಿಗಳಾದ, ಯಳಂದೂರು, ಹನೂರು ಹಾಗೂ ಪುರಸಭೆ ಬನ್ನೂರು, ಗುಂಡ್ಲುಪೇಟೆ ಹಾಗೂ ನಗರಸಭೆಯಾದ ನಂಜನಗೂಡು ಕ್ಷೇತ್ರ 5 ನಗರ ಪ್ರದೇಶಗಳಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ ಈ ಬಾರಿಯ ಸ್ಥಳೀಯ ಸಂಸ್ಥೆಯಲ್ಲಿ ಹೆಚ್ಚಿನ ಅಧಿಕಾರಿವನ್ನು ಪಡೆಯವು ವಿಶ್ವಾಸವಿದೆ ಎಂದು ಹೇಳಿದರು.

ಮಾಜಿ ಶಾಸಕರಾದ ಎ.ಆರ್‌.ಕೃಷ್ಣಮೂರ್ತಿ, ಎಸ್‌.ಜಯಣ್ಣ, ಬಾಲರಾಜು, ಜಿಲ್ಲಾಧ್ಯಕ್ಷ ಮರಿಸ್ವಾಮಿ, ಚುನಾವಣೆ ಉಸ್ತುವಾರಿ ಬಸವರಾಜು, ವಡಗೆರೆ ದಾಸ, ಕೊಪ್ಪಾಳಿ ಮಹದೇವನಾಯಕ, ಶಿವಕುಮಾರ್‌, ಆರ್‌.ಮಹದೇವ್‌, ಕೊಳ್ಳೇಗಾಲ ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರು, ತಾಪಂ ಅಧ್ಯಕ್ಷ ನಿರಂಜನ್‌, ಕಾಂಗ್ರೆಸ್‌ ಪಕ್ಷ ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಪ್ರಭುಪ್ರಸಾದ್‌, ಸೇರಿದಂತೆ ಟಿಕೆಟ್‌ ಅಕಾಂಕ್ಷಿಗಳು ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.