ಚಾ.ನಗರ, ಮೈಸೂರಿನಲ್ಲಿ ಬಿಎಸ್ಪಿ ಪ್ರಬಲ ಅಭ್ಯರ್ಥಿ ಕಣಕ್ಕೆ 


Team Udayavani, Mar 6, 2019, 7:25 AM IST

chamaraja.jpg

ಚಾಮರಾಜನಗರ: ಪಕ್ಷದ ವರಿಷ್ಠೆ ಮಾಯಾವತಿ ಆದೇಶದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಎನ್‌.ಮಹೇಶ್‌ ತಿಳಿಸಿದರು.

ನಗರದ ವರ್ತಕರ ಭವನದಲ್ಲಿ ಬಹುಜನ ಸಮಾಜ ಪಕ್ಷದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಚುನಾವಣೆಯ ಕಣಕ್ಕಿಳಿಸಲಾಗುವುದು.

ಕಳೆದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾದರಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ಮಾಡಿ ಗೆಲ್ಲುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅದಕ್ಕಾಗಿ ಇಂದಿನಿಂದ ಕಾರ್ಯಕರ್ತರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಚಾಮರಾಜನಗರ ಕ್ಷೇತ್ರದಲ್ಲಿ 3 ಲಕ್ಷ ಮತ ಪಡೆದರೆ ಗೆಲುವು ನಮ್ಮದಾಗುತ್ತದೆ ಎಂದರು. 

ಚಾಮರಾಜನಗರ, ಚಿಕ್ಕಬಳ್ಳಾಪುರ, ಬೀದರ್‌, ಕಲಬುರಗಿ, ಮೈಸೂರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಪ್ರಬಲ ಸ್ಪರ್ಧೆವೊಡ್ಡಲಿದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರ ಮತ ಪಡೆಯಬೇಕಿದೆ ಎಂದರು. 

15 ರಂದು ಸಮಾವೇಶ: ಮಾ. 15ರಂದು ಚಾಮರಾಜನಗರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ 32 ಹೋಬಳಿಗಳಿಂದ ತಲಾ 500 ಕಾರ್ಯಕರ್ತರಂತೆ ಒಟ್ಟು 1600 ತರಬೇತಿ ಪಡೆದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದರು. 

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಪಕ್ಷದ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ. ಕಡಿಮೆ ಖರ್ಚಿನಲ್ಲಿ ವಿಭಿನ್ನ ರೀತಿ ಚುನಾವಣಾ ಪ್ರಚಾರ ಕೈಗೊಳ್ಳುವ ತಂತ್ರ ರೂಪಿಸಲಾಗಿದೆ. ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ತನು, ಮನ, ಧನ ಕೊಟ್ಟು  ಶಕ್ತಿ ಪ್ರದರ್ಶನ ತೋರಿಸಬೇಕಿದೆ. ಕಾಂಗ್ರೆಸ್‌, ಬಿಜೆಪಿಯವರು ಪಕ್ಷದ ಕಾರ್ಯಕರ್ತರನ್ನು ಖರೀದಿಸಲು ಸಾಧ್ಯವೇ ಇಲ್ಲ ಎಂದರು.

ತಾಲೂಕು ಅಧ್ಯಕ್ಷ ಆಲೂರುಮಲ್ಲು ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಶಾಸಕ ಮಹೇಶ್‌ ಇದ್ದು, ಉಳಿದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬೂತ್‌ಮಟ್ಟದಿಂದ ಸಂಘಟನೆ ಮಾಡಿದರೆ ಪಕ್ಷದ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಬಹುದು ಎಂದರು.

ಸಭೆಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ರಾಜ್ಯ ಕಾರ್ಯದರ್ಶಿ ಮಾದೇಶ್‌ ಉಪ್ಪಾರ್‌, ಮೈಸೂರು ವಲಯ ಉಸ್ತು¤ವಾರಿ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಮಾದಪ್ಪ, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್‌, ಹಿರಿಯ ಮುಖಂಡ ಕೃಷ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಪ್ರಕಾಶ್‌, ಜಿಲ್ಲಾ ಖಜಾಂಚಿ ರಮೇಶ್‌, ನಗರ ಘಟಕ ಅಧ್ಯಕ್ಷ ಚಿನ್ನಸ್ವಾಮಿ, ಕಣ್ಣೇಗಾಲ ಮಹದೇವನಾಯಕ, ಎಸ್‌.ಪಿ.ಮಹೇಶ್‌, ನಂಜುಂಡಸ್ವಾಮಿ, ಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.