ಕನ್ನಡಮಯ ವಾತಾವರಣ ನಿರ್ಮಿಸಿ
Team Udayavani, Dec 1, 2017, 4:51 PM IST
ಗುಂಡ್ಲುಪೇಟೆ: ಕನ್ನಡಮಯ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಕರವೇ ಯುವಸೇನೆಯ ಗ್ರಾಮಶಾಖೆ ಅಧ್ಯಕ್ಷ ಸಿದ್ದನಾಯಕ್ ಹೇಳಿದರು.
ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೇನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತ, ಕನ್ನಡೇತರರಿಗೂ ಕನ್ನಡ ಭಾಷೆಯನ್ನು ಕಲಿಸುವ ಮೂಲಕ ನಾಡಿನಲ್ಲಿ ಕನ್ನಡಮಯ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ವಿವರಿಸಿದರು.
ಯುವಸೇನೆಯ ತಾಲೂಕು ಅಧ್ಯಕ್ಷ ಚಂದ್ರು ಮಾತನಾಡಿ, ಕನ್ನಡ ಭಾಷೆಯ ಅಭಿವೃದ್ಧಿಗೆ ಅನೇಕ ಸವಾಲುಗಳಿವೆ. ಡಾ.ಸರೋಜಿನಿ ಮಹಿಷಿ ವರದಿ ಜಾರಿ, ಕಾವೇರಿ ನೀರು ಹಂಚಿಕೆ ಸಮಸ್ಯೆ, ಮಹದಾಯಿ ನದಿ ನೀರು ಬಳಕೆ ಕನ್ನಡಿಗರಿಗೆ ಮರೀಚಿಕೆಯಾಗಿದೆ.
ಸರ್ಕಾರ ಆಡಳಿತದಲ್ಲಿ ಹೆಚ್ಚಿನ ಸ್ಥಾನಮಾನ ನೀಡುವ ಜೊತೆಗೆ ಕೋರ್ಟ್ ತೀರ್ಪು ಕನ್ನಡದಲ್ಲಿ ಬರೆಯುವಂತಾಗಬೇಕು. ಬೇರೆ ಭಾಷೆ ಕಲಿಯಲಿ. ಆದರೆ, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ. ಅವರ ಹಿತಕಾಪಾಡುವಲ್ಲಿ ಎಲ್ಲರೂ ಸ್ನೇಹಕ್ಕೆ ಬದ್ಧರಾಗಬೇಕು ಎಂದು ವಿವರಿಸಿದರು.
ಹಿಂದೆ ಹೈದ್ರಾಬಾದ್, ಮದ್ರಾಸ್, ಮುಂಬೈ, ಕೊಡಗು ಎಂಬ 5 ಪ್ರಾಂತ್ಯಗಳು ಸೇರಿ ರಾಜ್ಯವಾಗಿದ್ದ ಮೈಸೂರು, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಫಲವಾಗಿ 1973ರಂದು ಡಿ.ದೇವರಾಜ ಅರಸು ಅವರು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದರು.
ಬ್ರಿಟಿಷರ ನಿರಂತರ ಹಾವಳಿಯನ್ನು ತಪ್ಪಿಸಲು ಹಾಗೂ ರಾಜ್ಯದ ಉಳಿವಿಗಾಗಿ ಮಹಿಳೆಯರೂ ಕಂಕಣ ಬದ್ಧರಾಗಿದ್ದರು. ಕಿತ್ತೂರುರಾಣಿ ಚೆನ್ನಮ್ಮ, ಓನಕೆ ಓಬವ್ವರಂತೆ ಕನ್ನಡನಾಡು ಕಟ್ಟಲು ಹಲವು ಮಹನೀಯರ ತ್ಯಾಗ ಬಲಿದಾನ ಅವಿಸ್ಮರಣೀಯ. ಕರ್ನಾಟಕ ಎಲ್ಲಾ ರಂಗದಲ್ಲೂ ಯಶಸ್ವಿಯಾಗಿದ್ದು, ಹಲಿಡಿ ಶಾಸನ ಉಪನಿಷತ್ತುಗಳಲ್ಲೂ ಕನ್ನಡದ ಬಗ್ಗೆ ಉಲ್ಲೇಖವಿದೆ ಎಂದು ವಿವರಿಸಿದರು.
ಕನ್ನಡ ನಾಡು ಕೃಷಿ, ಕ್ರೀಡೆ, ಕೈಗಾರಿಕೆ, ವಿಜಾnನ ಕ್ಷೇತ್ರದಲ್ಲಿ 8 ಜಾnನಪೀಠ ಪ್ರಶಸ್ತಿಗಳು ಭಾರತರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಷಯವಾಗಿದ್ದು, ಕನ್ನಡ ಬೆಳೆಸುವ ಮತ್ತು ಉಳಿಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಮಂಜುನಾಥ್, ಭಾಸ್ಕರನಾಯ್ಕ, ರಂಗನಾಯ್ಕ, ಜ್ಯೋತಿನಾಯ್ಕ, ಮಂಜು, ಮಣಿ, ರಂಗಶಿವ, ಗಣೇಶ್, ಮಹೇಶ್, ಮಹದೇವನಾಯ್ಕ, ಸುರೇಶ್, ರಾಜೇಶ್, ಶಾಂತರಾಜು, ಗೋವಿಂದ, ದೊಡ್ಡನಾಯ್ಕ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ