ಚಾಮರಾಜೇಶ್ವರ ರಥಕ್ಕೆ ಬೆಂಕಿ: ಆರೋಪಿ ಬಂಧನ


Team Udayavani, Feb 24, 2017, 3:41 PM IST

Gutta-Tweet3-600.jpg

ಚಾಮರಾಜನಗರ: ತೀವ್ರ ಚರ್ಚೆಗೆ ಕಾರಣವಾಗಿದ್ದ, ನಗರದ ಚಾಮರಾಜೇಶ್ವರ ಸ್ವಾಮಿ ದೊಡ್ಡ ರಥಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬುಧವಾರ ರಾತ್ರಿ ನಗರದಲ್ಲಿ ಬಂಧಿಸಿದ್ದಾರೆ.

ನಗರದ ಉಪ್ಪಾರ ಬೀದಿ 2ನೇ ಕ್ರಾಸ್‌ ನಿವಾಸಿ ಮೋಹನ್‌ ಕುಮಾರ್‌ ಅಲಿಯಾಸ್‌ ಕುಮಾರ್‌ (32) ಬಂಧಿತ. ಈತ ಕಂಬಿ ಕಟ್ಟುವ ಕೆಲಸ ಮಾಡುತ್ತಾನೆ. ಚಾಮರಾಜೇಶ್ವರ ದೇವಾಲಯದ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಶಿಥಿಲವಾಗಿರುವ ದೊಡ್ಡ ರಥವನ್ನೂ ಹೊಸದಾಗಿ ನಿರ್ಮಿಸಲಿ ಎಂಬ ಉದ್ದೇಶದಿಂದ ರಥಕ್ಕೆ ಬೆಂಕಿ ಹಚ್ಚಿದೆ ಎಂದು ತಪ್ಪೊಪ್ಪಿಗೆ ನೀಡಿದ್ದಾನೆ ಎಂದು ಎಸ್ಪಿ ಕುಲದೀಪಕುಮಾರ್‌ ಜೈನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣ ಕುರಿತು ಎಸ್ಪಿ ಹೇಳಿದ್ದಿಷ್ಟು: ಫೆ.19ರ ಮುಂಜಾನೆ 1.15ರ ಸುಮಾರಿನಲ್ಲಿ ನಗರದ ದೊಡ್ಡರಥಕ್ಕೆ ಕಿಡಿಗೇಡಿಗಳು ಬೆಂಕಿ ಹೆಚ್ಚಿದ್ದಾರೆಂದು ಫೆ.19ರಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಂಜೇಶ್‌ ದೂರು ನೀಡಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮುತ್ತುರಾಜ್‌ ಅವರ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿದ್ದರು. ಡಿವೈಎಸ್‌ಪಿ ಗಂಗಾಧರಸ್ವಾಮಿ ಈ ತಂಡಗಳ ಉಸ್ತುವಾರಿ ವಹಿಸಿಕೊಂಡಿದ್ದರು. 

ಪ್ರಕರಣದ ಬೆನ್ನತ್ತಿದ ಪೊಲೀಸರಿಗೆ, ರಥದ ಸಮೀಪವಿದ್ದ ಬ್ಯಾಂಕ್‌ಗಳ ಮುಂದೆ ಅಳವಡಿಸಲಾಗಿದ್ದ ಸಿಸಿಟೀವಿಯಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳು ಲಭ್ಯವಾಗಿದ್ದವು. ಇದನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಅಧಿಕಾರಿಗಳು ಅದರ ಆಧಾರದ ಮೇಲೆ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಬುಧವಾರ ಸಂಜೆ ಆರೋಪಿಯನ್ನು ವಶಕ್ಕೆ ಪಡೆದು, ತನಿಖೆಗೆ ಒಳಪಡಿಸಿದಾಗ ಸತ್ಯಾಂಸ ಬೆಳಕಿಗೆ ಬಂದಿದ್ದು, ಆರೋಪಿ ತಾನೇ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೇರೆಯವರ ಕೈವಾಡವಿಲ್ಲ: ಕೃತ್ಯ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಸ್ಪಿ, ನಾವು ಇಲ್ಲಿಯ ತನಕ ನಡೆಸಿರುವ ತನಿಖೆಯ ಪ್ರಕಾರ ಈ ಪ್ರಕರಣದಲ್ಲಿ ಬೇರೆಯವರ ಕೈವಾಡ ಇರುವ ಸಣ್ಣ ಸುಳಿವೂ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಆದಾಗ್ಯೂ ತನಿಖೆ ಇನ್ನೂ ನಡೆಯುತ್ತಿದೆ. ಬೇರೆ ಯಾರಾದರೂ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಡಿವೈಎಸ್ಪಿ ಎಸ್‌.ಇ. ಗಂಗಾಧರಸ್ವಾಮಿ,  ಇನ್ಸ್‌ಪೆಕ್ಟರ್‌ ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆರೋಪಿ ಕುಮಾರ್‌ ಪತ್ತೆಯಾಗಿದ್ದು ಹೀಗೆ   
ರಥ ನಿಲ್ಲಿಸಿದ್ದ ಸುತ್ತಮುತ್ತಲ ಕಟ್ಟಡಗಳಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸಿದ್ದರು. ರಥದ ಪಕ್ಕದಲ್ಲೇ ರಾಷ್ಟ್ರೀಯ ಬ್ಯಾಂಕ್‌ ಹಾಗೂ ಖಾಸಗಿ ಬ್ಯಾಂಕ್‌ಗಳಿದ್ದು, ಅವುಗಳ ಮುಂದೆ ಅಳವಡಿಸಿರುವ ಸಿಸಿಟೀವಿ ಕ್ಯಾಮೆರಾದಲ್ಲಿನ ದೃಶ್ಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದರು. ಅದರಲ್ಲಿ ಶನಿವಾರ ಮಧ್ಯರಾತ್ರಿ 1.10ರ ಸಮಯದಲ್ಲಿ ಬಣ್ಣದ ಪಂಚೆ ಧರಿಸಿದ ವ್ಯಕ್ತಿ ರಥ ನಿಲ್ಲಿಸಿರುವ ಜಾಗಕ್ಕೆ ಹೋಗುವ ದೃಶ್ಯ ದಾಖಲಾಗಿತ್ತು. ಇದರಲ್ಲಿ ವ್ಯಕ್ತಿಯ ಬೆನ್ನು ಮಾತ್ರ ಕಾಣುತ್ತಿತ್ತು. ಇದಕ್ಕೂ 10ರಿಂದ 15 ನಿಮಿಷ ಮುಂಚೆ ಇದೇ ವ್ಯಕ್ತಿ ನಗರದ ಸಂತೆಮರಹಳ್ಳಿ ವೃತ್ತ ದಾಟುತ್ತಿರುವುದು ಅಲ್ಲಿ ಪೊಲೀಸರು ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾಗಿತ್ತು. 

ಅಲ್ಲದೇ ಘಟನೆ ನಡೆದ 4-5 ನಿಮಿಷಗಳ ಬಳಿಕ ಇದೇ ವ್ಯಕ್ತಿ ಭುವನೇಶ್ವರಿ ವೃತ್ತದಲ್ಲಿ ಆಟೋ ಚಾಲಕನೊಬ್ಬನ ಬಳಿ ಮಾತನಾಡುವುದು ಕಂಡು ಬಂದಿತ್ತು.. ಇದರ ಬೆನ್ನುಹತ್ತಿ ಹೋದ ಪೊಲೀಸರು ಆಟೋ ಚಾಲಕರನ್ನು ವಿಚಾರ ಮಾಡಿದ್ದಾರೆ. ಅಂದು ಮಧ್ಯರಾತ್ರಿ ಆರೋಪಿ ಕುಮಾರ್‌ ತನ್ನ ಬಳಿ ಬಂದು ರಥಕ್ಕೆ ಬೆಂಕಿ ಬಿದ್ದಿದೆ ಎಂದು ತಿಳಿಸಿದ ಎಂದು ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. 

ಇದರ ಆಧಾರದ ಮೇಲೆ ಆರೋಪಿ ಕುಮಾರ್‌ನನ್ನು ಬುಧವಾರ ಸಂಜೆ ಆತನ ಮನೆಯಲ್ಲೇ ಪೊಲೀಸರು ಬಂಧಿಸಿದರು. ಬಳಿಕ ವಿಚಾರಣೆಗೊಳಪಡಿಸಿದಾಗ ಕುಮಾರ್‌ ತಾನೇ ಈ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಿಸಿ ಕ್ಯಾಮೆರಾದಲ್ಲಿನ ದೃಶ್ಯಗಳು, ಆಟೋ ಚಾಲಕನ ಹೇಳಿಕೆ, ಇನ್ನು ಆರೋಪಿಯೇ ತಪ್ಪನ್ನು ಒಪ್ಪಿಕೊಂಡಿದ್ದು ಕುಮಾರನೇ ಈ ಕೃತ್ಯ ಎಸಗಿರುವುದು ಖಚಿತವಾಗಿದೆ ಎಂದು ಎಸ್ಪಿ ಕುಲದೀಪ್‌ಕುಮಾರ್‌ ವಿವರಿಸಿದರು.

ತನಿಖಾ ತಂಡದ ವಿವರ
1ನೇ ತಂಡ:
ಪಟ್ಟಣ ಠಾಣೆ ಇನ್ಸ್‌ಪೆಕ್ಟರ್‌ ಮಹದೇವಯ್ಯ, ಸಿಬ್ಬಂದಿ ಮಂಜುನಾಥ, ವೀರಭದ್ರಪ್ಪ, ಕೃಷ್ಣಮೂರ್ತಿ.
2ನೇ ತಂಡ: ಗ್ರಾಮಾಂತರ ಎಸ್‌ಐ ಲೋಹಿತ್‌ಕುಮಾರ್‌, ಸಿಬ್ಬಂದಿ ಕುಮರೇಶ್‌, ಪ್ರಭುಸ್ವಾಮಿ, ಚಿನ್ನಸ್ವಾಮಿ.
3ನೇ ತಂಡ: ಸಂಚಾರಿ ಠಾಣೆ ಎಸ್‌ಐ ದೀಪಕ್‌, ಸಿಬ್ಬಂದಿ ಸುರೇಶ್‌, ಮಹೇಶ್‌, ವಿನಯ್‌ ಕುಮಾರ್‌. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.