ಕೆರೆ ಕಟ್ಟೆಗೆ ಬಿಟ್ಟ ಕಬಿನಿ ನೀರು ಕಾವೇರಿ ಪಾಲು
Team Udayavani, Feb 14, 2018, 4:08 PM IST
ಸಂತೆಮರಹಳ್ಳಿ: ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿವ ನೀರಿಗೆ ಯಾವುದೇ ಸಮಸ್ಯೆಯಾಗಬಾರದು ಮತ್ತು ಅಂತರ್ಜಲ ಹೆಚ್ಚಿಸುವ ಸಲುವಾಗಿ ಕಬಿನಿ ಜಲಾಶಯದಿಂದ ನಾಲೆಗಳ ಮೂಲಕ ಕೆರೆಕಟ್ಟೆಗಳಿಗೆ ನೀರು ಹರಿಸಲಾಗುತ್ತಿದೆ. ಆದರೆ, ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನೀರು ಕಾವೇರಿ ನದಿ ಸೇರುತ್ತಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಸಂತೆಮರಹಳ್ಳಿ ಗ್ರಾಮ ಸೇರಿದಂತೆ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳು, ಯಳಂದೂರು ತಾಲೂಕಿನ ಕಬಿನಿ ಬಲದಂಡೆ ನಾಲೆಗಳಿಗೆ ತಾತ್ಕಾಲಿಕವಾಗಿ ಹೊಸ ನಿಯಮದ ಪ್ರಕಾರ 10 ದಿನಗಳ ಕಾಲ ಕಬಿನಿ ಡ್ಯಾಂನಿಂದ ನೀರು ಬಿಡಲಾಗಿದೆ.
ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿವ ನೀರು ಒದಗಿಸುವುದು, ಅಂತರ್ಜಲ ವೃದ್ಧಿಗೆ ಅನುಕೂಲ ವಾಗುವ ಉದ್ದೇಶದಿಂದ ನೀರು ಹರಿಸಲಾಗುತ್ತಿದೆ. ಇದು ಈ ಭಾಗದ ಕೃಷಿಕರಲ್ಲಿ ಮಂದಹಾಸ ಮೂಡಿಸಿತ್ತು. ಆದರೆ, ನೀರು ಮಾತ್ರ ಕೆರೆ ಕಟ್ಟೆಗಳಿಗೆ ಹರಿಯಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ.
ನಾಲೆಯಲ್ಲಿ ಹರಿಯುವ ನೀರು ಹೆಚ್ಚಿನ ಪ್ರಮಾಣದಲ್ಲಿ ಮುಳ್ಳೂರಿನ ಸಮೀಪದಲ್ಲಿರುವ ಕಾವೇರಿ ನದಿಗೆ ಸೇರುತ್ತಿದೆ ಎಂದು ಇರಸವಾಡಿ ಗ್ರಾಮದ ರೈತ ಮಹಾದೇವಶೆಟ್ಟಿ, ನಂಜುಂಡಸ್ವಾಮಿ ಆರೋಪಿಸಿದ್ದಾರೆ.
ಇಳುವರಿ ಹೆಚ್ಚಿಸಿಕೊಳ್ಳಲು ನೆರವು: ಚಾಮರಾ ಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ಅಚ್ಚುಕಟ್ಟು ಪ್ರದೇಶದ ಹತ್ತಾರು ಕೆರೆಗಳು ಇದರ ವ್ಯಾಪ್ತಿಗೆ ಒಳಪಡುತ್ತದೆ. ಈ ಭಾಗದ ರೈತರು ಹೆಚ್ಚಾಗಿ ಮುಸುಕಿನ ಜೋಳ, ರಾಗಿ, ದ್ವಿದಳ ಧಾನ್ಯ ಹಾಗೂ ಕಬ್ಬು ಬೆಳೆದಿದ್ದಾರೆ. ಇಳುವರಿ ಹೆಚ್ಚಿಸಿಕೊಳ್ಳಲು ನೆರವಾಗುವ ಉದ್ದೇಶದಿಂದ ಕಬಿನಿ ಬಲದಂಡೆ ನಾಲೆಯಲ್ಲಿ ನೀರು ಬಿಡಲಾಗಿದೆ.
ಸಂತೆಮರಹಳ್ಳಿ, ಯಳಂದೂರು ಮೂಲಕ ಕೊಳ್ಳೇಗಾಲ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುತ್ತದೆ. ಆದರೆ, ಈ ನೀರು ಕರೆ ಕಟ್ಟೆಗಳಿಗೆ ಸೇರದೆ ನದಿಗೆ ವ್ಯರ್ಥವಾಗಿ ಹರಿದು ಹೋಗುತ್ತಿದೆ.
ಕೆರೆಗಳಿಗೆ ನೀರೇ ಹೋಗುತ್ತಿಲ್ಲ: ಕಬಿನಿ ನಾಲೆಯ ಅಚ್ಚುಕಟ್ಟು ವ್ಯಾಪ್ತಿಗೆ ಒಳಪಡುವ ಅನೇಕ ಕೆರೆಗಳಲ್ಲಿ ಹೂಳು ತುಂಬಿದೆ. ನೀರು ಸಂಗ್ರಹಕ್ಕೆ ನಿರ್ಮಾಣವಾಗಿರುವ ಕಾಲುವೆಗಳು ದುರಸ್ತಿಯಲ್ಲಿದೆ. ಇದು ನೀರು ಸಂಗ್ರಹಕ್ಕೆ ಅಡ್ಡಿಯಾಗಿದೆ. ಅನೇಕ ಕಡೆಗಳಲ್ಲಿ ನಾಲೆಯ ತೂಬುಗಳು ದುರಸ್ತಿಯಾ ಗಬೇಕಿದೆ. ಅನೇಕ ಕಡೆ ನೀರು ವ್ಯರ್ಥವಾಗಿ ನದಿ ಸೇರಿ ತಮಿಳುನಾಡಿನ ಜನತೆಗೆ ಅನುಕೂಲವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಅನುಕೂಲ ಕಲ್ಪಿಸುವತ್ತ ಗಮನ ಹರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ