ಚಾಮರಾಜನಗರ ಬಂದ್‌ ಸಂಪೂರ್ಣ ಯಶಸ್ವಿ


Team Udayavani, Jun 26, 2019, 3:00 AM IST

cham-bandh

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಕಟ್ಟೆಯಲ್ಲಿ ನಡೆದ ದಲಿತ ಯುವಕನ ಬೆತ್ತಲೆ ಮೆರವಣಿಗೆ ಹಾಗೂ ಸಂತೆಮರಹಳ್ಳಿ ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎಸ್‌ಐಟಿಗೆ ವಹಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಚಾಮರಾಜನಗರ ಬಂದ್‌ ಸಂಪೂರ್ಣ ಯಶಸ್ವಿಯಾಯಿತು.

ಬಿಕೋ ಎಂದ ರಸ್ತೆಗಳು: ಬೆಳಗ್ಗೆಯಿಂದಲೇ ನಗರದ ಅಂಗಡಿ ಮುಂಗಟು ಹೋಟೆಲ್‌ಗ‌ಳು ಮುಚ್ಚಿದ್ದವು. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ನಗರದ ಒಳ ಬರಲಿಲ್ಲ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ಅನೇಕ ಶಾಲಾ ಕಾಲೇಜುಗಳು ಮೊದಲೇ ರಜೆ ಘೋಷಿಸಿದ್ದವು. ಕೆಲವು ಶಾಲೆಗಳು ವಿದ್ಯಾರ್ಥಿಗಳು ಬಂದ ಬಳಿಕ ರಜೆ ಘೋಷಿಸಿದವು. ಹೀಗಾಗಿ ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಿದರು.

ಮುಚ್ಚಿದ ಪೆಟ್ರೋಲ್‌ ಬಂಕ್‌: ಬ್ಯಾಂಕ್‌ಗಳು ಮುಚ್ಚಿದ್ದವು. ಹಲವಾರು ಸರ್ಕಾರಿ ಕಚೇರಿಗಳು ಬಂದ್‌ ಆಗಿದ್ದವು. ತಹಶೀಲ್ದಾರ್‌ ಕಚೇರಿ ತೆರೆದಿತ್ತಾದರೂ ಬಳಿಕ ಸಂಘಟನೆಗಳ ಮನವಿ ಮೇರೆಗೆ ಮುಚ್ಚಲಾಯಿತು. ಪೆಟ್ರೋಲ್‌ ಬಂಕ್‌ಗಳು ಕಾರ್ಯನಿರ್ವಹಿಸಲಿಲ್ಲ. ಚಿತ್ರಮಂದಿರಗಳು ಎರಡು ಪ್ರದರ್ಶನಗಳನ್ನು ರದ್ದುಗೊಳಿಸಿದ್ದವು.

ಎಸ್‌ಡಿಪಿಐ ಬೆಂಬಲ: ಅನೇಕ ಬಂದ್‌ಗಳು ನಡೆದಾಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಗುಂಡ್ಲುಪೇಟೆ ವೃತ್ತ ಪ್ರದೇಶದಲ್ಲಿ ಅಂಗಡಿ, ಹೋಟೆಲ್‌ಗ‌ಳು ತೆರೆದಿರುತ್ತಿದ್ದವು. ಆದರೆ ಮಂಗಳವಾರದ ಬಂದ್‌ಗೆ ಎಸ್‌ಡಿಪಿಐ ಬೆಂಬಲ ನೀಡಿದ್ದರಿಂದ ಈ ಪ್ರದೇಶಗಳಲ್ಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಊಟಕ್ಕಾಗಿ ಪರದಾಟ: ಬಹಳಷ್ಟು ಮಂದಿ ಸರ್ಕಾರಿ ನೌಕರರು, ವಿದ್ಯಾರ್ಥಿಗಳು, ಸಾರ್ವಜನಿಕರು ನಗರಕ್ಕೆ ಆಗಮಿಸಿ, ಕಚೇರಿ, ಶಾಲೆ ಮುಚ್ಚಿದ ಬಳಿಕ ತಮ್ಮ ಊರು ಹಾಗೂ ಮನೆಗಳಿಗೆ ತೆರಳಲು ಬಹಳ ಪ್ರಯಾಸ ಪಡಬೇಕಾಯಿತು. ಹೋಟೆಲ್‌ಗ‌ಳು ಬಂದ್‌ ಆಗಿದ್ದರಿಂದ ಹೊರ ಊರಿನಿಂದ ಬಂದವರು ಊಟ ತಿಂಡಿಗಾಗಿ ಪರದಾಡಬೇಕಾಯಿತು.

ಬಂದ್‌ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾ ಪೊಲೀಸ್‌ ಅಧೀಕ್ಷಕ ಆನಂದ್‌ಕುಮಾರ್‌, ಡಿವೈಎಸ್‌ಪಿ ಜಯಕುಮಾರ್‌ ಬಂದೋಬಸ್ತ್ ನ ಉಸ್ತುವಾರಿ ವಹಿಸಿದ್ದರು.

ಟೈಯರ್‌ ಸುಟ್ಟು ಆಕ್ರೋಶ: ಯಾವಾಗಲೂ ಜನಜಂಗುಳಿಯಿಂದ ಕೂಡಿರುವ ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ ಬಿಕೋ ಎನ್ನುತ್ತಿದ್ದವು. ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಜನ ಸಂಚಾರ ಕಡಿಮೆಯಾಗಿತ್ತು. ವಾಹನಗಳ ಓಡಾಟ ವಿರಳವಾಗಿತ್ತು. ಬೆಳಗಿನ 7 ಗಂಟೆಯಿಂದಲೇ ದಲಿತ ಸಂಘಟನೆಗಳ ಪ್ರಮುಖರು ರಸ್ತೆಗಳಿದು ಟೈಯರ್‌ ಸುಟ್ಟು ಪ್ರತಿಭಟನೆ ಮಾಡುವ ಜೊತೆಗೆ ಸ್ವಯಂ ಪ್ರೇರಿತ ಬಂದ್‌ಗೆ ಜಿಲ್ಲೆಯ ಜನ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.