ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಕೇಂದ್ರದಿಂದ ಹೆಚ್ಚಿನ ಅನುದಾನ ತರಲು ಶ್ರಮಿಸುವೆ; ಕ್ಷೇತ್ರದ ಸಮಗ್ರ ಅಭಿವೃದ್ಧಿ ಕನಸು

Team Udayavani, Apr 14, 2024, 6:40 AM IST

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಸಚಿವ ಎಚ್‌.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್‌ ಬೋಸ್‌ 2017 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ತಿ. ನರಸೀಪುರ ಕ್ಷೇತ್ರದಲ್ಲಿ ತಂದೆಯವರ ಕೆಲಸ ಕಾರ್ಯಗಳ ಜವಾಬ್ದಾರಿ ಹೊತ್ತಿದ್ದರು.

ಮೊದಲ ಬಾರಿಗೆ ಚುನಾವಣ ಕಣಕ್ಕಿಳಿದಿದ್ದೀರಿ. ಏನನ್ನಿಸುತ್ತಿದೆ?

ಯಾರಿಗಾದರೂ ರಾಷ್ಟ್ರೀಯ ಪಕ್ಷದಲ್ಲಿ ಚುನಾವಣೆಗೆ ಅವಕಾಶ ಮಾಡಿಕೊಟ್ಟಾಗ ಖುಷಿಗಿಂತ ಹೆಚ್ಚಾಗಿ ಇದೊಂದು ದೊಡ್ಡ ಜವಾಬ್ದಾರಿ ಎನಿಸುತ್ತದೆ. ನಾನು ವಿಧಾನಸಭೆಗೆ ಆಕಾಂಕ್ಷಿಯಾಗಿದ್ದವನು. ಅವಕಾಶ ಸಿಕ್ಕಿರಲಿಲ್ಲ. ಈಗ ಸಿಕ್ಕಿರುವುದು ಸಂತೋಷವಾಗಿದೆ.

ಸ್ಪರ್ಧಿಸಬೇಕೆಂದು ನಿಮಗೆ ಅನ್ನಿಸಿದ್ದು ಯಾವಾಗ, ಯಾಕೆ, ಪ್ರೇರಣೆ ಏನು?
ತಂದೆಯವರು (ಎಚ್‌.ಸಿ. ಮಹದೇವಪ್ಪ) ರಾಜಕೀಯ ಅಧಿಕಾರದಲ್ಲಿದ್ದರಿಂದ ಕ್ಷೇತ್ರದಲ್ಲಿ ಜನರ ಆಗುಹೋಗುಗಳನ್ನು ನೋಡಿಕೊಳ್ಳು ತ್ತಿದ್ದೆ. ಅದರ ಅನುಭವದಲ್ಲಿ ಜನರ ಕೆಲಸ ಮಾಡಲು, ಅಧಿಕಾರ ಎನ್ನುವ ಕೀ ಆವಶ್ಯಕ ಎಂಬುದು ಮನವರಿಕೆ ಆಯಿತು. ಇದು ರಾಜಕೀಯಕ್ಕೆ ಬರಲು ಪ್ರೇರಣೆಯಾಯಿತು.

ರಾಜಕೀಯದಲ್ಲಿ ನಿಮ್ಮ ಗಾಡ್‌ಫಾದರ್‌ ಯಾರು ಮತ್ತು ಯಾಕೆ?
ಮಕ್ಕಳಿಗೆ ತಮ್ಮ ತಂದೆಯೇ ಗಾಡ್‌ಫಾದರ್‌, ರೋಲ್‌ ಮಾಡೆಲ್‌. ಹೀಗಾಗಿ ನನಗೆ ನಮ್ಮ ತಂದೆಯೇ ಗಾಡ್‌ಫಾದರ್‌. ಅವರೇ ನನ್ನ ರೋಲ್‌ ಮಾಡೆಲ್‌.

ಮೊದಲ ಪ್ರಯತ್ನದಲ್ಲೇ ನೀವು ಲೋಕ ಸಭೆಗೆ ಸ್ಪರ್ಧಿಸುತ್ತಿದ್ದೀರಿ, ಕಾರಣವೇನು?
ನಾನು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಅವಕಾಶ ಸಿಗಲಿಲ್ಲ. ಹೀಗಾಗಿ ಲೋಕಸಭೆಗೆ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದೆ. ಪಕ್ಷದ ಮುಖಂಡರು, ಹೈಕಮಾಂಡ್‌ ಎಲ್ಲರೂ ಸೇರಿ ಟಿಕೆಟ್‌ ಕೊಟ್ಟಿದ್ದಾರೆ.

ನಿಮ್ಮ ಕ್ಷೇತ್ರದ ಜನ ನಿಮಗೆ ಯಾವ ಕಾರಣಕ್ಕಾಗಿ ಮತ ಹಾಕಬೇಕು?
ನನ್ನನ್ನು ಹತ್ತಿರದಿಂದ ಬಲ್ಲ ಜನರಿಗೆ, ಎಲ್ಲರನ್ನೂ ಪ್ರೀತಿಸುವ ನನ್ನ ಸ್ವಭಾವ ಗೊತ್ತು. ನನ್ನ ಕ್ಷೇತ್ರಕ್ಕೆ ಒಳ್ಳೆಯ ಕೆಲಸಗಳನ್ನು, ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದೇನೆ. ನಿಸ್ವಾರ್ಥವಾಗಿ ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಕೆಲಸ ಮಾಡಬೇಕೆಂಬ ಆಶಯ ಹೊಂದಿದ್ದೇನೆ. ಹೀಗಾಗಿ ಜನರು ನನಗೆ ಮತ ಹಾಕಬೇಕು.

ಈ ಚುನಾವಣೆಯನ್ನು ನೀವು ಹೇಗೆ ಗೆಲ್ಲುತ್ತೀರಿ? 5 ಕಾರಣ ಹೇಳಿ.
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಗಳು, ಬಿಜೆಪಿ ಸರಕಾರದ ವೈಫ‌ಲ್ಯಗಳು, ಮುಖ್ಯಮಂತ್ರಿಯವರ ಬಜೆಟ್‌, ಧ್ರುವ ನಾರಾಯಣ ಅವರ ಅವಧಿಯಲ್ಲಿ ದೊರೆತ ಕೇಂದ್ರ ಯೋಜನೆಗಳು, ಮತ ದಾರರು ಕಾಂಗ್ರೆಸ್‌ ಬಗ್ಗೆ ಇಟ್ಟಿರುವ ವಿಶ್ವಾಸದಿಂದ ಚುನಾವಣೆಯನ್ನು ಗೆಲ್ಲುತ್ತೇವೆ.

ನಿಮ್ಮ ಕನಸೇನು? ಗೆದ್ದು ದಿಲ್ಲಿಗೆ ಹೋಗಿ ಏನು ಮಾಡಬೇಕು ಎಂದಿದ್ದೀರಿ?
ಚಾಮರಾಜನಗರ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕೆಂಬುದು ನನ್ನ ಕನಸು. ಮತದಾರರು ದಿಲ್ಲಿಗೆ ಆರಿಸಿ ಕಳುಹಿಸಿದರೆ, ಕ್ಷೇತ್ರಕ್ಕೆ ಕೇಂದ್ರದಿಂದ ಬರಬೇಕಾದ ಯೋಜನೆ, ಅನುದಾನ ತಂದು ಕೆಲಸ ಮಾಡುತ್ತೇನೆ.

ಗೆದ್ದರೆ ನಿಮ್ಮ ಲೋಕಸಭಾ ಕ್ಷೇತ್ರಕೆೆR ಮಾಡುವ ಮೊದಲ ಕೆಲಸ ಏನು?
ಕ್ಷೇತ್ರದ ಹಲವಾರು ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕವೇ ಇಲ್ಲ. ಅಂತಹ ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತೇನೆ.

ನಿಮ್ಮ ಕ್ಷೇತ್ರದ ಭವಿಷ್ಯಕ್ಕೆ ಇರುವ 5 ಕನಸುಗಳೇನು? ಅವುಗಳನ್ನು ಹೇಗೆ ಈಡೇರಿಸುತ್ತೀರಿ?
ಕ್ಷೇತ್ರದ ಬಗ್ಗೆ ಹಲವಾರು ಕನಸುಗಳಿವೆ. ಬೆಂಗಳೂರು ಕನಕಪುರ ರೈಲು ಮಾರ್ಗ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಪ್ರವಾಸೋದ್ಯಮ ತಾಣಗಳ ಮೂಲಸೌಲಭ್ಯ ಅಭಿವೃದ್ಧಿ, ಕಾಡಂಚಿನ ಬುಡಕಟ್ಟು ಜನರಿಗೆ ಶಿಕ್ಷಣ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ಜತೆ ಸೇರಿ ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ.

ಅನೇಕ ಹಿರಿಯ ನಾಯಕರನ್ನು ನೀವು ಸಂಭಾಳಿಸಬೇಕಾಗುತ್ತದೆ. ಹೇಗೆ ನಿಭಾಯಿಸುತ್ತೀರಿ?
ನಾನು ಹಿರಿಯರ ಜತೆ ಗೌರವ ಹಾಗೂ ವಿನಯದಿಂದ ನಡೆದುಕೊಳ್ಳುವವನು. ಕ್ಷೇತ್ರದಲ್ಲಿ ನಮ್ಮ ಹಿರಿಯ ಶಾಸಕರಿದ್ದಾರೆ. ಅನೇಕ ಹಿರಿಯರ ಸಲಹೆ-ಸೂಚನೆ ಮಾರ್ಗದರ್ಶನ ಪಡೆಯುತ್ತೇನೆ.

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.