ಚಾ.ನಗರ ಆಕ್ಸಿಜನ್ ದುರಂತ: 20 ದಿನವಾದರೂ ಶಿಸ್ತುಕ್ರಮವಿಲ್ಲ, 2 ಬಾರಿ ಡಿಸಿ ವರ್ಗಾವಣೆ ರದ್ದು!


Team Udayavani, May 22, 2021, 9:25 AM IST

ಚಾ.ನಗರ ಆಕ್ಸಿಜನ್ ದುರಂತ: 20 ದಿನವಾದರೂ ಶಿಸ್ತು ಕ್ರಮವಿಲ್ಲ, 2ಬಾರಿ ಡಿಸಿ ವರ್ಗವಾಣೆ ರದ್ದು!

ಚಾಮರಾಜನಗರ: ನಗರದ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಮುಗಿದು ರೋಗಿಗಳು ಮೃತಪಟ್ಟ ದುರಂತ ಸಂಭವಿಸಿ 20 ದಿನಗಳು ಕಳೆದರೂ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ವರದಿ ನೀಡಿ ತಪ್ಪಿತಸ್ಥರ ವಿವರ ನೀಡಿದ್ದರೂ, ರಾಜ್ಯ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಳ್ಳದೇ ಮೌನ ತಾಳಿರುವುದಕ್ಕೆ ಜಿಲ್ಲಾದ್ಯಂತ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಮೇ 2ರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಸ್ಥಗಿತದ ತಕ್ಷಣದ ಪರಿಣಾಮ ಮತ್ತು ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಪೂರೈಕೆಯೇ ಸ್ಥಗಿತವಾದ ಸಂದರ್ಭದಲ್ಲಿ ಉಂಟಾದ ದುಷ್ಪರಿಣಾಮದಿಂದ ಮಾರನೆಯ ದಿನವೂ ರೋಗಿಗಳು ಸತ್ತಿದ್ದಾರೆಂದುಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಹೈಕೋರ್ಟ್‌ಗೆ ಮೇ 13ರಂದೇ ವರದಿ ಸಲ್ಲಿಸಿತ್ತು. ಒಟ್ಟಾರೆ ಇದರಿಂದ 36 ಮಂದಿ ಮೃತಪಟ್ಟಿದ್ದಾರೆಂದು ವರದಿ ತಿಳಿಸಿತ್ತು.

ಅಲ್ಲದೇ ಆಮ್ಲಜನಕ ಕೊರತೆಯಂತಹ ದೊಡ್ಡ ಪ್ರಮಾದ ನಡೆಯುವ ಮೊದಲೇ ಈ ಬಗ್ಗೆ ಮುಂಜಾಗ್ರತೆ ವಹಿಸದೇ ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸಿದ್ದಾರೆ. ಹಾಗೂ ಸಿಮ್ಸ್‌ ಡೀನ್‌, ಜಿಲ್ಲಾಸ್ಪತ್ರೆಯ ಪ್ರಭಾರ ಜಿಲ್ಲಾ ಸರ್ಜನ್‌ ಅವರ ಕರ್ತವ್ಯ ಲೋಪವೂ ಇದೆಯೆಂದು ವರದಿಯಲ್ಲಿ ಬೊಟ್ಟು ಮಾಡಲಾಗಿತ್ತು. ಈ ವರದಿಯನ್ನಾಧರಿಸಿ ರಾಜ್ಯ ಸರ್ಕಾರ ತಪ್ಪಿತಸ್ಥರ ಕ್ರಮ ಕೈಗೊಳ್ಳುತ್ತದೆಂದೇ ಜಿಲ್ಲೆಯ ಜನರು ಭಾವಿಸಿದ್ದರು.ಆದರೆ,ಘಟನೆ ನಡೆದು ದಿನಗಳಾದರೂ, ವೈಫ‌ಲ್ಯಕ್ಕೆ ಕಾರಣರಾದವರ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಿಲ್ಲ. ರಾಜ್ಯ ಸರ್ಕಾರದ ಈ ನಡೆಗೆ ಜಿಲ್ಲಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:ಸೈಬರ್ ದಾಳಿ: ಏರ್ ಇಂಡಿಯಾ ಸರ್ವರ್ ನಿಂದ 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆ!

ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಳ ಹಂತದ ನೌಕರ ಸಣ್ಣ ಕರ್ತವ್ಯ ಲೋಪ ಎಸಗಿದರೂ ಸಸ್ಪೆಂಡ್‌ ಮಾಡುವ ಸರ್ಕಾರ, ಇಂಥ ದೊಡ್ಡದೊಂದು ದುರಂತ ನಡೆದರೂ, ಇದಕ್ಕೆ ಯಾರನ್ನೂ ಹೊಣೆ ಮಾಡದೇ, ಶಿಸ್ತು ಕ್ರಮ ಜರುಗಿಸದೇ ಮೌನವಾಗಿರುವುದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ವರದಿ ಪ್ರಕಾರ ತಪ್ಪಿತಸ್ಥರು ಯಾರು?:  ಆಮ್ಲಜನಕಕೊರತೆಯಂಥ ಗಂಭೀರ ಪರಿಸ್ಥಿತಿಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ತನ್ನಕ್ರಿಯಾಶೀಲತೆ ಮತ್ತು ನಾಯಕತ್ವ ಗುಣವನ್ನು ತೋರಿಲ್ಲ. ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು, ಆಮ್ಲಜನಕ ಸರಬರಾಜುಕೊರತೆಯಂಥ ಗಂಭೀರ ಸನ್ನಿವೇಶವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ ಎಂದುಕಾನೂನು ಪ್ರಾಧಿಕಾರಗಳ ಸಮಿತಿ ತಿಳಿಸಿದೆ. ಸಿಮ್ಸ್‌ ಡೀನ್‌ ಮತ್ತು ಪ್ರಭಾರ ಜಿಲ್ಲಾ ಸರ್ಜನ್‌ ಅವರು ತಮ್ಮ ಸಾಮರ್ಥ್ಯ ತೋರಿಲ್ಲ. ರೋಗಿಗಳ ಜೀವ ಕಾಪಾಡಲು ವಿಫ‌ಲರಾಗಿದ್ದಾರೆ ಎಂದು ಸಮಿತಿ ವರದಿ ನೀಡಿತ್ತು.

ಎರಡು ಬಾರಿ ಜಿಲ್ಲಾಧಿಕಾರಿ ವರ್ಗಾವಣೆ ರದ್ದು: ಇದೆಲ್ಲದರ ನಡುವೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ವರ್ಗಾವಣೆಯಾಗಿ ಆ ಜಾಗಕ್ಕೆ ಡಾ. ಸತೀಶ್‌ ಬರುತ್ತಿದ್ದಾರೆ ಎಂದು ಹೇಳಲಾಗಿತ್ತು. ಗುರುವಾರ ತಾವು ಚಾ.ನಗರಕ್ಕೆ ವರದಿ ಮಾಡಿಕೊಳ್ಳಲು ತೆರಳುತ್ತಿದ್ದೆ. ಆದರೆ ವರ್ಗಾವಣೆ ರದ್ದಾಗಿದೆ ಎಂದು ಆದೇಶ ಬಂತು ಎಂದು ಡಾ. ಸತೀಶ್‌ ಮಾಧ್ಯಮಗಳಿಗೆ ತಿಳಿಸಿದ್ದರು.ಕೆಲ ತಿಂಗಳ ಹಿಂದೆಯೂ ಸತೀಶ್‌ ಅವರನ್ನು ಚಾ.ನಗರಕ್ಕೆ ವರ್ಗಾವಣೆ ಮಾಡಿ ತಕ್ಷಣ ರದ್ದು ಮಾಡಲಾಗಿತ್ತು. ಈಗ ಎರಡನೇ ಬಾರಿಯೂ ಅವರ ವರ್ಗಾವಣೆ ರದ್ದಾಗಿದೆ. ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಹಾಗೂ ಪ್ರಭಾವಿ ರಾಜಕೀಯ ವ್ಯಕ್ತಿಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಕೋವಿಡ್ ಪೀಡಿತ ಸ್ತ್ರೀಯರಿಗೆ ಸರಕಾರಿ ಸಂಜೀವಿನಿ : 171 ಗರ್ಭಿಣಿಯರಿಗೆ ಕೋವಿಡ್‌ ಆರೈಕೆ

ಈ ಘಟನೆಯ ಬಗ್ಗೆ ಇನ್ನೂ ಸಮಗ್ರ ತನಿಖೆ ನಡೆಯಬೇಕು. ಸರ್ಕಾರವೇ ಈ ಘಟನೆಯನ್ನು ಮುಚ್ಚಿ ಹಾಕುತ್ತಿದೆ. ಸರ್ಕಾರ ಮನಸ್ಸು ಮಾಡಿದ್ದರೆ ತಕ್ಷಣ ಕ್ರಮ ಕೈಗೊಳ್ಳಬಹುದಿತ್ತು. ಮುಖ್ಯಮಂತ್ರಿಯವರು ಸೌಜನ್ಯಕ್ಕೂ ಭೇಟಿ ನೀಡಲಿಲ್ಲ. ಜಿಲ್ಲಾಧಿಕಾರಿ, ಸಿಮ್ಸ್‌ ಡೀನ್‌, ಜಿಲ್ಲಾ ಸರ್ಜನ್‌ರ ವೈಫ‌ಲ್ಯವನ್ನು ವರದಿ ತಿಳಿಸಿದೆ. ಈ ಘಟನೆಗೆ ಯಾರೇ ಕಾರಣರಾಗಲಿ, ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. -ಚಾ.ರಂ.ಶ್ರೀನಿವಾಸಗೌಡ, ಅಧ್ಯಕ್ಷ, ಕರ್ನಾಟಕ ಸೇನಾ ಪಡೆ

ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನ್ಯಾಯಾಲಯ ವರದಿ ಸಲ್ಲಿಸಿದ್ದರೂ ಆ ಬಗ್ಗೆಕ್ರಮ ಕೈಗೊಳ್ಳುತ್ತಿಲ್ಲ.ಕಾರ್ಯಾಂಗ, ಶಾಸಕಾಂಗದ ಕೆಲಸವನ್ನೂ ಸರ್ಕಾರ ಮಾಡುತ್ತಿಲ್ಲ. ನ್ಯಾಯಾಂಗ ಆದೇಶ ನೀಡಿದರೂ ಅದನ್ನೂ ಪಾಲಿಸುತ್ತಿಲ್ಲ. ಇದು ಖಂಡನೀಯ.- ಎ.ಎಂ.ಮಹೇಶಪ್ರಭು, ರಾಜ್ಯ ಉಪಾಧ್ಯಕ್ಷ, ರೈತ ಸಂಘ

ಆಮ್ಲಜನಕ ದುರಂತಕ್ಕೆ ಜಿಲ್ಲಾಧಿಕಾರಿ ಹೊಣೆಗಾರರಲ್ಲ. ಜಿಲ್ಲಾಧಿಕಾರಿಯವರಿಗೆ ಜಿಲ್ಲೆಯ  ಎಲ್ಲ ಇಲಾಖೆಗಳೂ ಬರುತ್ತವೆ.ಕೆಳ ಹಂತದ ಅಧಿಕಾರಿಗಳು ವೈದ್ಯರು ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿಲ್ಲ. ಡೀನ್‌, ಡಿಎಚ್‌ಒ, ಜಿಲ್ಲಾ ಸರ್ಜನ್‌, ಕೋವಿಡ್‌ ನೋಡೆಲ್‌ ಅಧಿಕಾರಿ ಇವರೆಲ್ಲರೂ ಆರೋಪಿಗಳು.ಕೊನೆಯ ಸ್ಥಾನದ ಆರೋಪಿ ಜಿಲ್ಲಾಧಿಕಾರಿ. ಎಲ್ಲರ ಮೇಲೆಯೂ ಕ್ರಮಕೈಗೊಳ್ಳಲಿ.- ಸಿ.ಎಂ.ಕೃಷ್ಣಮೂರ್ತಿ, ಸಂಚಾಲಕ, ಪ್ರಗತಿಪರ ಸಂಘಟನೆಗಳ ಒಕ್ಕೂಟ

ಹೈಕೋರ್ಟ್‌ ಆದೇಶದ ಮೇರೆಗೆ ತನಿಖೆಯಾಗಿದೆ. ಆ ವರದಿಯಲ್ಲಿಯಾರು ತಪ್ಪಿತಸ್ಥರು ಎಂದು ಹೇಳಲಾಗಿದೆ. ನ್ಯಾಯಾಲಯ ಕ್ರಮಕೈಗೊಂಡು ಮುಜುಗರಕ್ಕೀಡಾಗುವ ಮುನ್ನ ಸರ್ಕಾರ ತಪ್ಪಿತಸ್ಥರ ವಿರುದ್ಧಕ್ರಮ ಕೈಗೊಳ್ಳಬೇಕು. -ನಿಜಗುಣರಾಜು, ಬಿಜೆಪಿ ರಾಜ್ಯ ಪದಾಧಿಕಾರಿ

 

ವರದಿ: ಕೆ.ಎಸ್.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.