Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ


Team Udayavani, May 30, 2023, 9:01 PM IST

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

ಚಾಮರಾಜನಗರ: ನಗರದ ಬಿ. ರಾಚಯ್ಯ ಜೋಡಿ ರಸ್ತೆಯ ಅವ್ಯವಸ್ಥೆ ಮಂಗಳವಾರ ಮಧ್ಯಾಹ್ನದ ನಂತರ ಸುರಿದ ಮಳೆಯಿಂದ ಮತ್ತೊಮ್ಮೆ ಬಯಲಾಯಿತು. ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಜೋಡಿ ರಸ್ತೆ ಕಾಲುವೆಯಾಯಿತು. ವಾಹನ ಸವಾರರು ಕೆಳಗೆ ಬಿದ್ದರು. ಅನೇಕರು ಪಡಿಪಾಟಲು ಅನುಭವಿಸಿದರು.

ಮಳೆ ಬಂದಾಗ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಾಗುವ ಅವಾಂತರದ ಬಗ್ಗೆ ಮಂಗಳವಾರದ ಉದಯವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಕಾಕತಾಳೀಯವೆಂಬಂತೆ ಮಂಗಳವಾರ ಮಧ್ಯಾಹ್ನದ ಬಳಿಕ ಸುರಿದ ಅರ್ಧ ಗಂಟೆಯ ಮಳೆಗೇ ಜೋಡಿ ರಸ್ತೆಯ ಅವ್ಯವಸ್ಥೆ ಮತ್ತೊಮ್ಮೆ ದರ್ಶನವಾಯಿತು.

ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಗರದಲ್ಲಿ ಮಳೆ ಆರಂಭವಾಗಿ 3.30ರವರೆಗೆ ಜೋರಾಗಿ ಸುರಿಯಿತು. ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ, ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ರಾಜಕಾಲುವೆ ಅವ್ಯವಸ್ಥೆಯಿಂದಾಗಿ ಮಳೆ ನೀರು, ರಾಜಕಾಲುವೆ ನೀರು ಜಿಲ್ಲಾಧಿಕಾರಿ ಕಚೇರಿ ಎದುರು ಕಾಲುವೆಯಂತೆ ಹರಿಯಲಾರಂಭಿಸಿತು. ಮಳೆ ನಿಂತ ಬಳಿಕ ವಾಹನ ಸವಾರರ ಓಡಾಟ ಆರಂಭವಾಯಿತು. ರಸ್ತೆಯ ಎರಡೂ ಕಡೆಯಿಂದ ಬಂದ ವಾಹನ ಸವಾರರು ಜಿಲ್ಲಾಡಳಿತ ಭವನದ ಗೇಟ್ ಬಳಿ ಕೆರೆಯಂತೆ ನಿಂತ ನೀರನ್ನು ನೋಡಿ ಹೌಹಾರಿದರು.

ಈ ನೀರಿನಲ್ಲೇ ತಮ್ಮ ದ್ವಿಚಕ್ರ ವಾಹನಗಳನ್ನು ಓಡಿಸಿಕೊಂಡು ಹೋದ ಕೆಲವರು ವಾಹನಗಳ ಚಕ್ರ ಜಾರಿ ಕೆಳಗೆ ಬಿದ್ದರು. ಮಳೆ ನೀರಾದರೆ ಸರಿ. ಆದರೆ ಚರಂಡಿಯ ಬಗ್ಗಡದ ನೀರು ನಿಂತಿದ್ದರಿಂದಾಗಿ ಜನರು ಫಜೀತಿ ಅನುಭವಿಸಿದರು.

ಜಿಲ್ಲಾಡಳಿತ ಭವನದ ಗೇಟಿನ ಮುಂಭಾಗ ಈ ಮಳೆ ನೀರು ಚರಂಡಿ ಸೇರುವಂತೆ ಕಬ್ಬಿಣದ ಕಂಬಿಗಳನ್ನು ನೆಲಕ್ಕೆ ಹಾಕಲಾಗಿದೆ. ಮಳೆ ನೀರು ಬಂದು ಆ ಕಬ್ಬಿಣದ ಕಂಬಿಗಳು ಮುಚ್ಚಿ ಹೋಗಿ, ದ್ವಿಚಕ್ರ ವಾಹನ ಸವಾರರು ಕಂಬಿಯ ಮೇಲೆ ವಾಹನ ಚಲಾಯಿಸಿ ಕೆಳಗೆ ಬೀಳಬೇಕಾಯಿತು. ಅನೇಕರು ಬಿದ್ದು ಕೈಕಾಲು ಗಾಯ ಮಾಡಿಕೊಂಡರು.

ಸಮಸ್ಯೆ ಬಗೆಹರಿಸಲು ನಾಲ್ಕು ಬಾರಿ ಗೆದ್ದಿರುವ ಶಾಸಕರು ವಿಫಲ ಎಂದು ಸಾಮಾಜಿಕ ಜಾಲತಾಣಗಳಲ್ಲ ಟೀಕೆ: ಪ್ರತಿ ಬಾರಿ ನಗರದಲ್ಲಿ ಮಳೆ ಬಂದಾಗಲೂ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಈ ಅವಾಂತರ ಮಾಮೂಲಿಯಾಗಿದೆ. ಇದನ್ನು ಸರಿಪಡಿಸದ ಜನಪ್ರತಿನಿಧಿಗಳನ್ನು ಜನರು ನಿಂದಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಕಿಡಿಕಾರಿದರು. ಸತತವಾಗಿ ನಾಲ್ಕು ಬಾರಿ ಗೆದ್ದು ಬಂದರೂ ಶಾಸಕ ಪುಟ್ಟರಂಗಶೆಟ್ಟಿಯವರು ಈ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದಾರೆ ಎಂದು ನಾಗರಿಕರು ಜಾಲತಾಣಗಳಲ್ಲಿ ಆಕೊ್ರೀಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.