ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಕನ್ನಡ ಮಂತ್ರ ವಿಧಿ ವಿಧಾನಗಳ ಕುರಿತ ವಿಶಿಷ್ಟ ಕಾರ್ಯಾಗಾರ

Team Udayavani, Nov 30, 2020, 8:48 PM IST

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಉದ್ಘಾಟಿಸಿದರು.

ಚಾಮರಾಜನಗರ: ಜಿಲ್ಲೆಯ ದೇವಾಲಯಗಳಲ್ಲಿ ಕನ್ನಡದಲ್ಲೇ ಮಂತ್ರಘೋಷ ಮಾಡುವ ಸಲುವಾಗಿ ಅರ್ಚಕರಿಗೆ ಕನ್ನಡ ಮಂತ್ರಗಳನ್ನು ಹೇಳಿಕೊಡುವ ವಿಶಿಷ್ಟ ಕಾರ್ಯಾಗಾರ ನಗರದಲ್ಲಿ ಸೋಮವಾರ ನಡೆಯಿತು. ತನ್ಮೂಲಕ ಇನ್ನು ಮುಂದೆ ಜಿಲ್ಲೆಯ ದೇವಾಲಯಗಳಲ್ಲಿ ಸಂಸ್ಕೃತದೊಂದಿಗೆ ಕನ್ನಡ ಮಂತ್ರ ಘೋಷಗಳು ಮೊಳಗಲಿವೆ.

ಜಿಲ್ಲಾಡಳಿತ, ಮುಜರಾಯಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅರ್ಚಕರಿಗೆ ಕನ್ನಡದಲ್ಲೇ ದೇವರ ಪೂಜೆ, ಮಂತ್ರಘೋಷ, ವಿಧಿ ವಿಧಾನಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಚಾಲನೆ ನೀಡಿದರು.

ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಅರ್ಥವಾಗುವ ಕನ್ನಡ ಭಾಷೆಯಲ್ಲಿ ಮಂತೊ್ರೀಚ್ಛಾರ ನಡೆಯಬೇಕೆಂಬುದು, ಸಾಹಿತಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರ ಇಚ್ಛೆಯಾಗಿತ್ತು. ಇದನ್ನು ಜಾರಿಗೊಳಿಸುವ ಸಲುವಾಗಿ ಜಿಲ್ಲೆಯ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಕನ್ನಡದಲ್ಲಿ ಮಂತ್ರ ಹೇಳುವ ವಿಧಾನಗಳನ್ನು ತಿಳಿಸಿಕೊಡುವ ಸಲುವಾಗಿ ಈ ಕಾರ್ಯಾಗಾರವನ್ನು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಆಯೋಜಿಸಲಾಗಿತ್ತು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಭಕ್ತರ ಒಳಿತಿಗಾಗಿ, ಸಮಸ್ಯೆ ಪರಿಹಾರಕ್ಕಾಗಿ ಪೂಜೆ, ಮಂತ್ರ ಘೋಷ ಮಾಡುವ ಪ್ರಕ್ರಿಯೆ ಕನ್ನಡದಲ್ಲೇ ನಡೆದರೆ ಭಕ್ತರ ಮನಸ್ಸಿಗೆ ಪರಿಣಾಮಕಾರಿಯಾಗಿ ತಲುಪುತ್ತದೆ ಎಂಬ ಆಶಯದೊಂದಿಗೆ ಅರ್ಚಕರಿಗಾಗಿ ಹಿರೇಮಗಳೂರು ಕಣ್ಣನ್ ಅವರಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದರು.

ಮಂತ್ರ ಪಠಣ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ವೇಳೆ ಸಂಸ್ಕೃತದೊಂದಿಗೆ ಕನ್ನಡವೂ ಸೇರಿದರೆ ಅರ್ಥಪೂರ್ಣವಾಗಲಿದೆ. ಸರ್ವಜನರ ಒಳಿತಿಗಾಗಿ ನೆರವೇರುವ ಪೂಜಾ ಕೈಂಕರ್ಯ, ಮಂತ್ರಘೋಷಗಳು, ಪ್ರಾರ್ಥನೆ ಸರಳವಾಗಿ ಕನ್ನಡದಲ್ಲಿಯೂ ಆಗುವ ಮೂಲಕ ಜನರಿಗೆ ಮುಟ್ಟುವಂತಾಗಲಿ. ಸಂಸ್ಕೃತವನ್ನು ಉಳಿಸಿಕೊಂಡು ಮೂಲ ಉದ್ದೇಶಕ್ಕೆ ಯಾವುದೇ ಧಕ್ಕೆ ಬಾರದ ಹಾಗೇ ಮಾರ್ಗದರ್ಶನ ಮಾಡಿಸುವ ಉದ್ದೇಶದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಡಾ. ರವಿ ತಿಳಿಸಿದರು.

ಜಿಲ್ಲೆಯ ಜನರು ಪ್ರಬುದ್ದರಾಗಿದ್ದಾರೆ. ಯಾವುದೇ ಉತ್ತಮ ಕಾರ್ಯಗಳಿಗೆ ಜಿಲ್ಲಾಡಳಿತದ ಜೊತೆಗೆ ಟೊಂಕ ಕಟ್ಟಿ ನಿಲ್ಲುತ್ತಾರೆ. ಕೊರೊನಾ ವಿರುದ್ದದ ಹೋರಾಟದಲ್ಲಿಯೂ ಸಹಕರಿಸಿ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆ ಗಮನಸೆಳೆಯಲು ಕಾರಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಕಾರ್ಯಾಗಾರದಲ್ಲಿ ಕನ್ನಡ ಭಾಷೆಯಲ್ಲೇ ಅರ್ಚನೆ, ರಾಷ್ಟ್ರಾಶೀರ್ವಾದ, ಮಂಗಳಾರತಿ, ಮತ್ತಿತ್ತರ ಕನ್ನಡ ಮಂತ್ರಗಳನ್ನು ಅರ್ಚಕರಿಗೆ ಬೋಧಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎಸ್.ವಿನಯ್, ಹಿರಿಯ ಸಾಹಿತಿ ಕೆ.ವೆಂಕಟರಾಜು, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಾಲಯದ ಅರ್ಚಕ ಗೋಪಿ, ಚಾಮರಾಜೇಶ್ವರ ದೇವಾಸ್ಥಾನದ ಅರ್ಚಕ ರಾಮಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Lok Sabha Poll 2024: ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ

Lok Sabha Poll 2024: ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ

Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.