ಬಜೆಟ್‌ನಲ್ಲಿ ಚಾ.ನಗರ ರೈಲ್ವೆ ನಿರೀಕ್ಷೆ ಹುಸಿ


Team Udayavani, Feb 2, 2020, 3:00 AM IST

bajetnali

ಚಾಮರಾಜನಗರ: ಪ್ರತಿ ಬಾರಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಖಾತೆಯಿಂದ ಚಾಮರಾಜನಗರಕ್ಕೆ ಯಾವುದಾದರೂ ಹೊಸ ರೈಲು ಅಥವಾ ರೈಲ್ವೆ ಸ್ವಚ್ಛತಾ ಕಾರ್ಯಾಗಾರ ದೊರೆಯಬಹುದೆಂಬ ನಿರೀಕ್ಷೆ ಜಿಲ್ಲೆಯ ಜನರಲ್ಲಿರುತ್ತದೆ. ಆ ನಿರೀಕ್ಷೆ ಎಂದಿನಂತೆ ಈ ಬಾರಿಯೂ ಹುಸಿಯಾಗಿದೆ.

ಬೆಂಗಳೂರಿನ ಹೆಜ್ಜಾಲದಿಂದ, ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರ ತಲುಪುವ 129 ಕಿ.ಮೀ. ಉದ್ದದ, 1330 ಕೋಟಿ ರೂ. ವೆಚ್ಚದ ನೂತನ ರೈಲ್ವೆ ಮಾರ್ಗವನ್ನು ಕಳೆದ ಯುಪಿಎ ಸರ್ಕಾರದ ಅವಧಿಯಲ್ಲಿ, ಅಂದಿನ ರೈಲ್ವೆ ಸಚಿವ ಮಲ್ಲಿಕಾರ್ಜುನಖರ್ಗೆ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದರು. ಅದಕ್ಕಾಗಿ ಪ್ರಥಮ ಹಂತವಾಗಿ 10 ಕೋಟಿ ರೂ.ಗಳನ್ನೂ ನೀಡಿದ್ದರು. ಅದಾದ ಬಳಿಕ ಇದಕ್ಕೆ ಕೇಂದ್ರ ಅನುದಾನ ನೀಡಿರಲಿಲ್ಲ. ಈ ಬಾರಿ ಒಂದಷ್ಟು ಅನುದಾನದ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆಯ ಬಲೂನಿಗೆ ಕೇಂದ್ರ ಬಜೆಟ್‌ ಮುಳ್ಳು ಚುಚ್ಚಿದೆ.

ಈ ರೈಲ್ವೆ ಮಾರ್ಗ ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. ಹೀಗಾಗಿ ಮಂಡ್ಯ ಸಂಸದೆ ಸುಮಲತಾ ಕೂಡ ಕೆಲ ತಿಂಗಳ ಹಿಂದೆ ಈ ಯೋಜನೆ ಪುನಶ್ಚೇತನ ಕುರಿತು ರೈಲ್ವೆ ಅಧಿಕಾರಿಗಳ ಸಭೆ ನಡೆಸಿದ್ದರು. ಹೀಗಾಗಿ ಈ ಯೋಜನೆ ಪುನರ್‌ಚಾಲನೆಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಅನುದಾನ ದೊರೆಕಬಹುದೆಂಬ ನಿರೀಕ್ಷೆಗಳಿತ್ತು.

ಹೊಸ ರೈಲು ಇಲ್ಲ: ಚಾಮರಾಜನಗರವು ರಾಜ್ಯದ ಕೊನೆಯ ರೈಲ್ವೆ ನಿಲ್ದಾಣವಾಗಿದೆ. ಮೈಸೂರಿಗೆ ಬರುವ ಅನೇಕ ರೈಲುಗಳನ್ನು ಚಾಮರಾಜನಗರಕ್ಕೆ ವಿಸ್ತರಿಸಿದರೆ ಪ್ರಯಾಣಿಕರಿಗೆ ಬಹಳ ಅನುಕೂಲವಾಗುತ್ತಿತ್ತು. ಮುಖ್ಯವಾಗಿ ಹುಬ್ಬಳ್ಳಿ-ಧಾರವಾಡದಿಂದ ಮೈಸೂರಿಗೆ ಬರುವ, ಹಾಗೂ ಶಿವಮೊಗ್ಗದಿಂದ ಮೈಸೂರಿಗೆ ಬರುವ ರೈಲನ್ನು ಚಾಮರಾಜನಗರಕ್ಕೆ ವಿಸ್ತರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಸಹ ಮನವಿ ಸಲ್ಲಿಸಿದ್ದರು. ಈ ಬಜೆಟ್‌ನಲ್ಲಿ ಆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ.

ಮನವಿಗೆ ಕೇಂದ್ರ ಸ್ಪಂದಿಸಿಲ್ಲ: ಚಾಮರಾಜನಗರದಿಂದ ನಂಜನಗೂಡಿಗೆ 35 ಕಿ.ಮೀ. ಅಂತರವಿದೆ. ಈ ಮಾರ್ಗದಲ್ಲಿ ಯಾವುದೇ ಕ್ರಾಸಿಂಗ್‌ ಪಾಯಿಂಟ್‌ ಇಲ್ಲ. ಹೀಗಾಗಿ ರೈಲು ತಡವಾಗಿ ಹೊರಟಾಗ, ರೈಲ್ವೆ ವ್ಯಾಗನ್‌ಗಳು ಸಂಚರಿಸಿದಾಗ ರೈಲುಗಳು ನಂಜನಗೂಡು ಅಥವಾ ನಗರದಲ್ಲೇ ತಡವಾಗಿ ಹೊರಡಬೇಕಾಗಿದೆ. ಕವಲಂದೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ,

ರೈಲ್ವೆ ಕ್ರಾಸಿಂಗ್‌ ಪಾಯಿಂಟ್‌ ಮಾಡಿದರೆ ಬಹಳ ಅನುಕೂಲವಾಗಲಿದೆ ಎಂದು ಹಿಂದಿನ ಸಂಸದ ಧ್ರುವನಾರಾಯಣ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಅದು ಸಹ ಈಡೇರಿಲ್ಲ. ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ 10.30ರ ನಂತರ ಮಧ್ಯಾಹ್ನ 3 ಗಂಟೆಯವರೆಗೆ ರೈಲು ಸಂಚಾರ ಇಲ್ಲ. ಈ ಅವಧಿಯಲ್ಲಿ ಇನ್ನೊಂದು ಹೆಚ್ಚುವರಿ ರೈಲನ್ನು ಓಡಿಸಬೇಕೆಂಬ ಬೇಡಿಕೆಗೂ ಕಿಮ್ಮತ್ತು ಸಿಕ್ಕಿಲ್ಲ.

ಸ್ವಚ್ಛತಾ ಘಟಕ ಸಹ ಇಲ್ಲ: ಮೈಸೂರಿನಲ್ಲಿರುವ ಸ್ವಚ್ಛತಾ ಘಟಕದಲ್ಲಿ ಈಗ ಹೆಚ್ಚು ಒತ್ತಡವಿದೆ. ಅನೇಕ ರೈಲುಗಳು ಅಲ್ಲೇ ನಿಲ್ಲಬೇಕಾಗಿದೆ. ಅದಕ್ಕೆ ಸ್ಥಳಾವಕಾಶವೂ ಇಲ್ಲದಂತಾಗಿದೆ. ಚಾ.ನಗರದಲ್ಲಿ ಸ್ವಚ್ಛತಾ ಘಟಕ ಸ್ಥಾಪಿಸಿದರೆ ಮೈಸೂರಿನಲ್ಲಿ ನಿಲ್ಲುವ ರೈಲುಗಳು ಚಾ.ನಗರಕ್ಕೆ ಬರುತ್ತವೆ. ಪ್ರಯಾಣಿಕರಿಗೂ ಇದರಿಂದ ಬಹಳ ಅನುಕೂಲವಾಗುತ್ತದೆ. ಅಲ್ಲದೇ ಇಲ್ಲಿನ ನಿಲ್ದಾಣದಲ್ಲಿ ರೈಲುಗಳೂ ತಂಗಲು ಅವಕಾಶವಾಗುತ್ತದೆ ಎಂಬ ಕಾರಣದಿಂದ ಚಾಮರಾಜನಗರದಲ್ಲಿ ರೈಲುಗಳ ಸ್ವಚ್ಛತಾ ಘಟಕ ಸ್ಥಾಪಿಸಬೇಕೆಂಬ ಬೇಡಿಕೆ ಇತ್ತು. ಅದು ಸಹ ಈಡೇರಿಲ್ಲ.

ನೈಪರ್‌ ಬರಲಿಲ್ಲ: ಚಾಮರಾಜನಗರದಲ್ಲಿ ರಾಷ್ಟ್ರೀಯ ಔಷಧ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು (ನೈಪರ್‌) ಬಜೆಟ್‌ನಲ್ಲಿ ಮಂಜೂರು ಮಾಡಿಕೊಡುವಂತೆ ಹಿಂದಿನ ಸಂಸದ ಆರ್‌. ಧ್ರುವನಾರಾಯಣ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಈ ಸಂಸ್ಥೆ ದೇಶದ 7 ರಾಜ್ಯಗಳಲ್ಲಿ ಸ್ಥಾಪಿತವಾಗಿದೆ. ಕರ್ನಾಟಕ ರಾಜ್ಯದಲ್ಲಿ ಮಾತ್ರ ಇಲ್ಲ. ಅಭಿವೃದ್ಧಿ ಹೊಂದುತ್ತಿರುವ ಚಾಮರಾಜನಗರ ಜಿಲ್ಲೆಗೆ ಈ ಸಂಸ್ಥೆಯನ್ನು ಕೇಂದ್ರ ಮಂಜೂರು ಮಾಡುವ ಆಸಕ್ತಿ ತೋರಿಲ್ಲ.

ಕವಲಂದೆ ಲೆವೆಲ್‌ ಕ್ರಾಸಿಂಗ್‌ ಮಿಸ್‌: ಚಾಮರಾಜನಗರದಿಂದ ನಂಜನಗೂಡಿಗೆ 35 ಕಿ.ಮೀ. ಅಂತರವಿದ್ದು, ಯಾವುದೇ ಕ್ರಾಸಿಂಗ್‌ ಪಾಯಿಂಟ್‌ ಇಲ್ಲ. ಹೀಗಾಗಿ ರೈಲು ತಡವಾಗಿ ಹೊರಟಾಗ, ರೈಲ್ವೆ ವ್ಯಾಗನ್‌ಗಳು ಸಂಚರಿಸಿದಾಗ ರೈಲುಗಳು ನಂಜನಗೂಡು ಅಥವಾ ನಗರದಲ್ಲೇ ತಡವಾಗಿ ಹೊರಡಬೇಕಾಗಿದೆ. ಕವಲಂದೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ರೈಲ್ವೆ ಕ್ರಾಸಿಂಗ್‌ ಪಾಯಿಂಟ್‌ ಮಾಡಿದರೆ ಬಹಳ ಅನುಕೂಲವಾಗುತ್ತಿತ್ತು.

ಚಾಮರಾಜನಗರದಿಂದ ಬೆಂಗಳೂರಿಗೆ ಸೀಮಿತವಾಗಿ ಎಕ್ಸ್‌ಪ್ರೆಸ್‌ ರೈಲೊಂದನ್ನು ಮಂಜೂರು ಮಾಡಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ರೈಲ್ವೆಯ ಈ ಬೇಡಿಕೆಗಳಲ್ಲಿ ಕೆಲವಾದರೂ ಜಾರಿಗೊಳ್ಳಬಹುದೆಂದು ಜಿಲ್ಲೆಯ ಸಾರ್ವಜನಿಕರು ಆಶಾಭಾವನೆ ಹೊಂದಿದ್ದರು. ಅದಾವುದೂ ಈಡೇರಿಲ್ಲ.

ಜಿಲ್ಲೆಯ ರೈಲ್ವೆಯನ್ನು ಬಿಜೆಪಿ ಸರ್ಕಾರ ಕಳೆದ ಅವಧಿಯಿಂದಲೂ ತೀವ್ರವಾಗಿ ಕಡೆಗಣಿಸಿದೆ. ಈ ಬಾರಿ ಅದರ ಮುಂದುವರಿಕೆಯಾಗಿದೆ ಅಷ್ಟೇ. ರಾಜ್ಯಕ್ಕೇ ಹೆಚ್ಚಿನ ಯೋಜನೆಗಳನ್ನು ನೀಡಿಲ್ಲ. ಇನ್ನು ಚಾಮರಾಜನಗರಕ್ಕೆ ಏನಾದರೂ ಅನುದಾನ ದೊರಕಬಹುದು ಎಂದು ನಿರೀಕ್ಷಿಸುವುದು ತಪ್ಪು.
-ಬಿ.ಕೆ. ರವಿಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ

ಇದೊಂದು ಸಮತೋಲನದ ಬಜೆಟ್‌ ಕೃಷಿಗೆ ಒತ್ತು ನೀಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಎಲ್ಲರಿಗೂ ಆದ್ಯತೆ ನೀಡುವ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ ಸ್ವಾಗತಾರ್ಹ.
-ಎನ್‌. ಜಿ. ಪ್ರಶಾಂತ್‌, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.