ಚಾಮರಾಜನಗರ ನಂದು.. ಇಲ್ಲಿ ಯಾರೇ ಬರಬೇಕಾದರೂ ನನ್ನ ಪರ್ಮಿಷನ್ ಪಡೆದೇ ಬರಬೇಕು. . . !

ಚಾಮರಾಜನಗರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್

Team Udayavani, Jun 25, 2022, 7:55 PM IST

ಚಾಮರಾಜನಗರ ನಂದು.. ಇಲ್ಲಿ ಯಾರೇ ಬರಬೇಕಾದರೂ ನನ್ನ ಪರ್ಮಿಷನ್ ಪಡೆದೇ ಬರಬೇಕು. . . !

ಚಾಮರಾಜನಗರ : ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಜೋಗಯ್ಯ ಚಿತ್ರದ ಸಂಭಾಷಣೆಯನ್ನು ಸ್ವಲ್ಪ ಬದಲಾವಣೆ ಮಾಡಿ, ತಮ್ಮ ತವರೂರು ಚಾಮರಾಜನಗರಕ್ಕೆ ಬದಲಿಸಿಕೊಂಡು ಡೈಲಾಗ್ ಹೇಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಜನರು ಹೋ.. ಎಂದು ಹರ್ಷೋದ್ಗಾರ ಮಾಡಿದರು. ಸಿಳ್ಳೆಗಳು ಮೊಳಗಿದವು, ಶಿವಣ್ಣಂಗೆ ಜೈ , ಪುನೀತ್ ಗೆ ಜೈ ಎಂಬ ಜೈಕಾರಗಳು ತಾರಕಕ್ಕೇರಿದವು.

ಭೈರಾಗಿ ಚಿತ್ರದ ಪೂರ್ವಭಾವಿ ಸಮಾರಂಭ (ಪ್ರಿ ಇವೆಂಟ್) ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಕರುನಾಡ ಚಕ್ರವರ್ತಿ, ನಟ ಡಾ. ಶಿವರಾಜ್‌ಕುಮಾರ್ ಅವರು ಚಾಮರಾಜನಗರ ನಂದು ಎಂದು ಹೇಳುವ ಮೂಲಕ ತವರೂರಿನ ಅಭಿಮಾನ ಮೆರೆದರು.

ಶಿವಣ್ಣ ಆಗಮನದ ಹಿನ್ನೆಲೆಯಲ್ಲಿ ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಡಾ.ಶಿವರಾಜ್ ಕುಮಾರ್ ಅಭಿಮಾನಿ ಬಳಗ ಹಾಗೂ ಅವರ ಸಾವಿರಾರು ಅಭಿಮಾನಿಗಳು ಭೈರಾಗಿ ಚಿತ್ರತಂಡವನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಜೆಸಿಬಿ ಮೂಲಕ ಬೃಹತ್ ಗಾತ್ರದ ಸುಮಾರು 200 ಕೆ.ಜಿಯ ಸೇಬಿನ ಹಾರ ಹಾಕಲಾಯಿತು. ಅಲ್ಲದೇ ಅಭಿಮಾನಿಗಳು ನೆಚ್ಚಿನ ನಟನಿಗೆ ಪುಷ್ಪ ವೃಷ್ಟಿ ಮಾಡುವ ಮೂಲಕ ಸಂಭ್ರಮಿಸಿದರು.

ಇದನ್ನೂ ಓದಿ : ವಿಜಯಪುರ ಲೋಕ ಅದಾಲತ್ ನಲ್ಲಿ ಒಂದಾದ ವಕೀಲರ ಕುಟುಂಬ: 10 ಸಾವಿರ ಪ್ರಕರಣ ಇತ್ಯರ್ಥ

ಈ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್ ಕುಮಾರ್, ಪೇಪರ್ ಮ್ಯಾಲ್ ಬರ್ಕೋ ಚಾಮರಾಜನಗರ ನಂದು ಎಂದು ಡೈಲಾಗ್ ಹೇಳುತ್ತಿದ್ದಂತೆ ನೆರೆದಿದ್ದ ನೂರಾರು ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹೊಡೆದರು. ಅಲ್ಲದೇ ಭೈರಾಗಿ ಚಿತ್ರದ ಡೈಲಾಗ್ ಹೇಳಿದರು.

ನಂತರ ನಟ ಡಾಲಿ ಧನಂಜಯ್ ಅವರು ಟಗರು ಚಿತ್ರದ ಅಂಕಲ್‌ನ ಹೊಡಿತೀನಿ ಸುಬ್ಬಿ ಎಂಬ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದರು. ಈ ಸಂದರ್ಭದಲ್ಲಿ ನಟ ಪೃಥ್ವಿ ಅಂಬರ್ ಸಹ ಇದ್ದರು.

ನಂತರ ನಟ ಶಿವರಾಜ್ ಕುಮಾರ್ ಹಾಗೂ ಭೈರಾಗಿ ಚಿತ್ರತಂಡ ಗಾಜನೂರಿನತ್ತ ಪ್ರಯಾಣ ಬೆಳೆಸಿತು.

ಕಿಕ್ಕಿರಿದು ಸೇರಿದ ಜನರು: ಚಾಮರಾಜನಗರಕ್ಕೆ ನಟ ಶಿವರಾಜ್ ಕುಮಾರ್ ಆಗಮನದ ಸುದ್ದಿ ತಿಳಿದಿದ್ದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನಗರದ ಸಂತೇಮರಹಳ್ಳಿ ವೃತ್ತದಲ್ಲಿ ನೆರೆದಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅಭಿಮಾನಿಗಳು ಒಂದು ಗಂಟೆಗೂ ಹೆಚ್ಚು ಕಾಲ ವೃತ್ತದಲ್ಲಿ ಜಮಾಯಿಸಿದ್ದರು. ಇದರಿಂದಾಗಿ ಕೆಲವು ಸಮಯ ವೃತ್ತದ ಮೂಲಕ ವಾಹನಗಳು ಚಲಿಸಲಾಗದೇ, ಟ್ರಾಫಿಕ್ ಜಾಮ್ ಆಯಿತು.

ನಟ ಶಿವರಾಜ್‌ಕುಮಾರ್ ಹಾಗೂ ಡಾಲಿ ಧನಂಜಯ ಬರುತ್ತಿದ್ದಂತೆ ಶಿವರಾಜ್‌ಕುಮಾರ್, ಪುನೀತ್, ಧನಂಜಯ್ ಎಂದು ಜೈಕಾರ ಕೂಗಿದರು. ಪಟಾಕಿ ಸಿಡಿಸಿ ಹಬ್ಬದಂತೆ ಸಂಭ್ರಮಿಸಿದರು. ಈ ವೇಳೆ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರಲ್ಲದೇ, ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.