ಹಾವು ಕಡಿದು ರೈತ ಮಹಿಳೆ ಸಾವು
Team Udayavani, Aug 29, 2021, 5:40 PM IST
ಗುಂಡ್ಲುಪೇಟೆ: ಜಮೀನಿನಲ್ಲಿ ಹುಲ್ಲು ಕೀಳುತ್ತಿದ್ದ ವೇಳೆ ನಾಗರಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೆಳ್ಳಮ್ಮ(65) ಮೃತ ಮಹಿಳೆ. ಈಕೆ ಜಮೀನಿನಲ್ಲಿ ಜಾನುವಾರುಗಳಿಗೆ ಹಾಕಲೆಂದು ಹುಲ್ಲು ಕೀಳುತ್ತಿದ್ದ ಸಂದರ್ಭ ಹಾವು ಕಡಿದಿದ್ದು, ರಕ್ಷಣೆಗೆ ಕೂಗಿಕೊಂಡಿದ್ದಾರೆ. ಪಕ್ಕದ ಜಮೀನಿನಲ್ಲಿದ್ದವರು ಬೈಕ್ನಲ್ಲಿ ಕೂರಿಸಿಕೊಂಡು ಊರಿಗೆ ಕರೆತಂದರು. ನಂತರ ತುರ್ತು ಚಿಕಿತ್ಸಾ ವಾಹನದಲ್ಲಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೋಯ್ಯಲಾಯಿತು. ವೈದ್ಯರು ಚಿಕಿತ್ಸೆ ನೀಡಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಇದನ್ನೂ ಓದಿ:ಹೆಣ್ಣು ಶಿಶುವನ್ನು ಬೀದಿಗೆ ಎಸೆದು ಹೋದ ನೀಚರು: ಕಂದಮ್ಮ ಸಾವು
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಂತರ ಪೊಲೀಸರು ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದರು. ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಘಟನೆ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ