ಸಾಯುವ 20 ವರ್ಷ ಮುಂಚೆಯೇ ಸಮಾಧಿ ನಿರ್ಮಿಸಿಕೊಂಡಿದ್ದ ಸ್ವಾಭಿಮಾನಿ

ಸಾವಿನಲ್ಲೂ ಸ್ವಾಭಿಮಾನ ಮೆರೆದ 85 ವರ್ಷದ ಪುಟ್ಟನಂಜಪ್ಪ

Team Udayavani, Jul 25, 2022, 8:18 PM IST

ಸಾಯುವ 20 ವರ್ಷ ಮುಂಚೆಯೇ ಸಮಾಧಿ ನಿರ್ಮಿಸಿಕೊಂಡಿದ್ದ ಸ್ವಾಭಿಮಾನಿ

ಚಾಮರಾಜನಗರ: ಸ್ವಾವಲಂಬಿತನ, ಸ್ವಾಭಿಮಾನ ಮೆರೆಯುವ ಅನೇಕ ನಿದರ್ಶನಗಳಿವೆ. ಆದರೆ ಇಲ್ಲಿ ಅದೆಲ್ಲವನ್ನೂ ಮೀರಿಸುವ ಸ್ವಾವಲಂಬಿತನವನ್ನು ವೃದ್ಧರೊಬ್ಬರು ಮೆರೆದಿದ್ದಾರೆ.

ತಮ್ಮ ಸಾವಿಗೆ 20 ವರ್ಷಗಳ ಹಿಂದೆಯೇ ಸಮಾಧಿ ನಿರ್ಮಿಸಿಕೊಂಡಿದ್ದು, ತಾವು ದುಡಿದ ಹಣದಲ್ಲೇ ತಮ್ಮ ಅಂತ್ಯಕ್ರಿಯೆ ನಡೆಸಬೇಕೆಂದು ಮಕ್ಕಳಿಗೆ ತಿಳಿಸಿದ್ದರು. ಅವರು ಮೃತರಾದ ಹಿನ್ನೆಲೆಯಲ್ಲಿ ಸೋಮವಾರ ಅವರಿಚ್ಛೆಯಂತೆ, ಅವರೇ ನಿರ್ಮಿಸಿದ ಸಮಾಧಿಯಲ್ಲಿ, ಅವರು ಕೂಡಿಟ್ಟಿದ್ದ ಹಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಈ ಘಟನೆ ನಡೆದಿರುವುದು ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ. ಗ್ರಾಮದ ಪುಟ್ಟನಂಜಪ್ಪ (85 ವರ್ಷ) ಭಾನುವಾರ ವಯೋ ಸಹಜ ಅನಾರೋಗ್ಯದಿಂದ ಮೃತಪಟ್ಟರು. ಅವರಿಗೆ ಮೂವರು ಪುತ್ರರಿದ್ದಾರೆ.

ತನ್ನ ಸಾವಿನಿಂದ ಯಾರಿಗೂ ತೊಂದರೆಯಾಗಬಾರದು. ಸತ್ತ ಬಳಿಕ ಸಮಾಧಿ ನಿರ್ಮಿಸಲು ಕಷ್ಟವಾಗಬಾರದು ಎಂದು ನಿರ್ಧರಿಸಿ 20 ವರ್ಷಗಳ ಹಿಂದೆಯೇ ಅಂದರೆ, ಅವರಿಗೆ 65 ವರ್ಷಗಳಾಗಿದ್ದಾಗಲೇ ಸಮಾಧಿ ನಿರ್ಮಾಣ ಮಾಡಿಸಿದ್ದರು.

ಅವರ ಜಮೀನಿನಲ್ಲಿ ಗೋಪುರ ಶೈಲಿಯಲ್ಲಿ ಸಮಾಧಿ ನಿರ್ಮಿಸಿದ್ದರು. ತಾವೇ ಅದರೊಳಗೆ ಕುಳಿತು ಅಳತೆ ಮಾಡಿ ಸಮಾಧಿ ಕಟ್ಟಿದ್ದರು. ಇದಿಷ್ಟೇ ಅಲ್ಲ, ತಾವು ಮೃತರಾದ ಬಳಿಕ ಅಂತ್ಯಕ್ರಿಯೆಯನ್ನು ತಾನು ದುಡಿದ ಹಣದಿಂದಲೇ ಮಾಡಬೇಕಲ್ಲದೇ, 12 ದಿನದ ಕೈಲಾಸ ಗಣಾರಾಧನೆಯನ್ನೂ ತಮ್ಮ ಹಣದಿಂದಲೇ ಮಾಡಬೇಕೆಂದು ಮಕ್ಕಳಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ : ಸಿಎಂ ಹೇಳಿಕೆ : ಜಮೀರ್ ಅಹಮದ್ ಗೆ ಬಿಸಿ ಮುಟ್ಟಿಸಿದ ಹೈಕಮಾಂಡ್

ಪುಟ್ಟನಂಜಪ್ಪ ಅವರ ಪತ್ನಿ ಕಳೆದ ವರ್ಷ ಮೃತಪಟ್ಟಿದ್ದು, ಅವರ ಅಂತ್ಯ ಸಂಸ್ಕಾರವನ್ನು ಮಕ್ಕಳಿಂದ ಹಣ ಪಡೆಯದೇ ತಾವೇ ನೆರವೇರಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ಬೇಕಾದ ಪ್ರತಿಯೊಂದನ್ನು ತಂದಿಟ್ಟಿದ್ದರು. ಕಳೆದ 12 ದಿನಗಳಿಂದ ಅವರ ಆರೋಗ್ಯ ಹದಗೆಟ್ಟು 5 ದಿನಗಳಿಂದ ಮಾತು ನಿಂತು ಹೋಗಿತ್ತು. ಭಾನುವಾರ ಸಂಜೆ ಮೃತಪಟ್ಟರು.

ತಮ್ಮ ತಂದೆಯ ಆಶಯದಂತೆ ಮೂವರು ಪುತ್ರರು ಅವರ ಹಣದಲ್ಲೇ, ಅವರು ಕಟ್ಟಿದ ಸಮಾಧಿಯಲ್ಲೇ ಸೋಮವಾರ ಅಂತ್ಯಕ್ರಿಯೆ ನಡೆಸಿದರು. ಈ ಮೂಲಕ ತಮ್ಮ ತಂದೆಯ ಆಸೆಯನ್ನು ನೆರವೇರಿಸಿದರು.

ನಮ್ಮ ತಂದೆಯವರು ಬಹಳ ಸ್ವಾಭಿಮಾನಿಯಾಗಿದ್ದು, ತಾವೇ ತಮ್ಮ ಸಮಾಧಿ ನಿರ್ಮಿಸಿದ್ದರು. ಅಂತ್ಯಕ್ರಿಯೆಗೆ ಹಣವನ್ನೂ ಇಟ್ಟಿದ್ದರು. ಇಂದು ಅವರಾಸೆಯಂತೆ ಅವರ ಹಣದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ತಮ್ಮ ಸಾವಿನ ನಂತರವೂ ಅವರು ವಿಶಿಷ್ಟವಾಗಿ ನಿಲ್ಲುತ್ತಾರೆ.
– ಗೌಡಿಕೆ ನಾಗೇಶ್, ಮೃತ ಪುಟ್ಟನಂಜಪ್ಪನವರ ಪುತ್ರ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.