ಈ ಬಾರಿಯೂ ನಡೆಯದ ಚಾಮರಾಜೇಶ್ವರ ರಥೋತ್ಸವ


Team Udayavani, Jul 13, 2019, 3:00 AM IST

ee-bariyu

ಚಾಮರಾಜನಗರ: ಪ್ರತಿವರ್ಷ ಆಷಾಢ ಮಾಸದ ಪೂರ್ವಾಷಾಢ ನಕ್ಷತ್ರದ ದಿನ ನಗರದ ಐತಿಹಾಸಿಕ ಚಾಮರಾಜೇಶ್ವರ ರಥೋತ್ಸವ ನಡೆಯುತ್ತಿತ್ತು. ಅದರಂತೆ ಗುರುವಾರ (ಜು.26) ದಂದು ಈ ಬಾರಿಯ ರಥೋತ್ಸವ ನಡೆಯಬೇಕಿತ್ತು. ನೂತನ ರಥ ನಿರ್ಮಾಣವಾಗದ ಕಾರಣ ಸತತ ಎರಡನೇ ವರ್ಷ ರಥೋತ್ಸವ ನಡೆಯುತ್ತಿಲ್ಲ. ಇದು ಭಕ್ತಾದಿಗಳಿಗೆ ಹಾಗೂ ನವದಂಪತಿಗೆ ನಿರಾಸೆ ಮೂಡಿಸಿದೆ.

ಹೊಸ ರಥ ನಿರ್ಮಿಸಲು ಮನಸ್ಸು ಮಾಡಿರಲಿಲ್ಲ: 2017ರ ಫೆ.19ರ ನಡುರಾತ್ರಿ ಸಮಯದಲ್ಲಿ ಕಿಡಿಗೇಡಿಯೊಬ್ಬ ನಗರದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿ ರಥ ಭಾಗಶಃ ಸುಟ್ಟುಹೋಗಿತ್ತು. ಸುಟ್ಟುಹೋಗುವ ಮುಂಚೆ 180 ವರ್ಷಗಳಷ್ಟು ಹಳೆಯದಾದ ರಥ ಶಿಥಿಲವಾಗಿತ್ತು. ಹೊಸ ರಥ ನಿರ್ಮಾಣ ಮಾಡಬೇಕೆಂದು ಭಕ್ತಾದಿಗಳು ಒತ್ತಾಯಿಸುತ್ತಲೇ ಇದ್ದರು. ಆದರೂ ಜನಪ್ರತಿನಿಧಿಗಳು ಅಧಿಕಾರಿಗಳು ಹೊರ ರಥ ನಿರ್ಮಿಸಲು ಮನಸ್ಸು ಮಾಡಿರಲಿಲ್ಲ.

ನೂತನ ರಥಕ್ಕೆ ಒತ್ತಾಯ: ರಥ ಭಾಗಶಃ ಸುಟ್ಟು ಹೋದ ಬಳಿಕ, ಸುಟ್ಟಿರುವ ರಥವನ್ನು ಬಳಸುವುದು ಅಪಶಕುನ ಎಂದು ಅರ್ಚಕ ವೃಂದ ತಿಳಿಸಿತು. ಮೊದಲೇ ರಥ ಶಿಥಿಲವಾಗಿತ್ತು. ನೂತನ ರಥ ನಿರ್ಮಾಣಕ್ಕೆ ಭಕ್ತಾದಿಗಳು ಒತ್ತಾಯಿಸಿದ್ದರು. ರಥವಿಲ್ಲದ ಕಾರಣ 2017ರ ಆಷಾಢ ರಥ ನಡೆಯಲಿಲ್ಲ. ಆ ಸಂದರ್ಭದಲ್ಲಿ ಮುಂದಿನ ವರ್ಷವಾದರೂ ಹೊಸ ರಥ ನಿರ್ಮಾಣವಾಗಿ ರಥೋತ್ಸವ ನಡೆಯಬಹುದೆಂದು ಜನರು ನಿರೀಕ್ಷಿಸಿದ್ದರು.

ಜನತೆ ನಿರೀಕ್ಷೆ ಹುಸಿ: ಆದರೆ, ಜನತೆಯ ನಿರೀಕ್ಷೆ ಹುಸಿಯಾಗಿದೆ. ಈ ಬಾರಿಯೂ ರಥೋತ್ಸವ ನಡೆಯದಂತಾಗಿದೆ. ನೂತನ ರಥ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅಷ್ಟಾಗಿ ಆಸಕ್ತಿ ವಹಿಸದ್ದೇ ಕಾರಣ ಎಂದು ಭಕ್ತಾದಿಗಳು ದೂರುತ್ತಿದ್ದಾರೆ. ಆದರೆ ದೇವಾಲಯದ ಆಡಳಿತ ನಿರ್ವಹಿಸುವ ಅಧಿಕಾರಿಗಳು ಇನ್ನೊಂದು ಕಾರಣ ನೀಡುತ್ತಿದ್ದಾರೆ.

ಪ್ರಸ್ತುತ ಚಾಮರಾಜೇಶ್ವರ ದೇವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು, ದೇವಾಲಯಕ್ಕೆ ಸಂಪ್ರೋಕ್ಷಣೆಯಾಗದೇ ರಥೋತ್ಸವ ನಡೆಸುವಂತಿಲ್ಲ. ಸಂಪ್ರೋಕ್ಷಣೆಯಾಗಿದ್ದರೆ ಚಿಕ್ಕರಥವನ್ನು ಬಳಸಿಕೊಂಡಾದರೂ ರಥೋತ್ಸವ ನಡೆಸಬಹುದಿತ್ತು ಎಂಬುದು ಅವರ ಅಭಿಪ್ರಾಯ. ಆದರೆ ಸಂಪ್ರೋಕ್ಷಣೆ ನಡೆಯದಿದ್ದರೂ ದೇವಾಲಯದಲ್ಲಿ ದೈನಿಕ ಪೂಜಾ ವಿಧಿ ವಿಧಾನಗಳು ಅದೇ ಗುಡಿಯೊಳಗೆ ನಡೆಯುತ್ತಲೇ ಇವೆ. ಹಾಗಾಗಿ ರಥೋತ್ಸವ ಮಾಡದಿರಲು ಇದು ಕಾರಣವಲ್ಲ ಎನ್ನುತ್ತಾರೆ ಭಕ್ತಾದಿಗಳು.

ಕಾರಣಾಂತರಗಳಿಂದ ಟೆಂಡರ್‌ ರದ್ದು: ಕಳೆದ ವರ್ಷವೇ ನೂತನ ರಥ ನಿರ್ಮಾಣಕ್ಕೆ 1.20 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿತ್ತು. ಜಿಲ್ಲಾಡಳಿತ ಈ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಿತು. ಲೋಕೋಪಯೋಗಿ ಇಲಾಖೆ ನೂತನ ರಥ ನಿರ್ಮಾಣ ಮಾಡಲು ಟೆಂಡರ್‌ ಕರೆದಿತ್ತು. ಆದರೆ ಕಾರಣಾಂತರಗಳಿಂದ ಟೆಂಡರ್‌ ರದ್ದಾಗಿತ್ತು. ಅದಾದ ನಂತರ ಮರುಟೆಂಡರ್‌ ಕರೆದು ನೂತನ ರಥ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆ ಕೆಲಸವಿನ್ನೂ ಆಗಿಲ್ಲ.

ನವ ದಂಪತಿಗಳಿಗೆ, ಭಕ್ತಾದಿಗಳಿಗೆ ನಿರಾಸೆ: ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನವ ದಂಪತಿಗಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ವಿರಳಾತಿ ವಿರಳ. ಆದರೆ ಈ ಜಾತ್ರೆ ಆಷಾಢ ಮಾಸದ ಪೂರ್ವಾಷಾಢ ನಕ್ಷತ್ರದಂದೇ ನಡೆಯುತ್ತದೆ. ಹೀಗಾಗಿ, ಮದುವೆಯಾದ ಬಳಿಕ ಆಷಾಢದಲ್ಲಿ ಬೇರ್ಪಟ್ಟ ನವದಂಪತಿಗಳು ಈ ಜಾತ್ರೆಗೆ ಆಗಮಿಸಿ, ರಥಕ್ಕೆ ಹಣ್ಣು ಜವನ ಎಸೆಯುತ್ತಾರೆ. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸುತ್ತಾರೆ.

ಹಳೆ ಮೈಸೂರು ಭಾಗ ಮಾತ್ರವಲ್ಲದೇ ಪಕ್ಕದ ತಮಿಳುನಾಡಿನಿಂದಲೂ ಈ ಜಾತ್ರೆಗೆ ಭಕ್ತಾದಿಗಳು, ನವದಂಪತಿಗಳು ಭಾಗವಹಿಸುತ್ತಾರೆ. ಆಷಾಢ ಮಾಸದಲ್ಲಿ ತವರಿಗೆ ಬಂದ ಪತ್ನಿಯನ್ನು ಜಾತ್ರೆಯಲ್ಲಿ ಭೇಟಿಯಾಗುವ ಅವಕಾಶ ಪತಿಗೆ ದೊರೆಯುತ್ತದೆ. ಹೀಗಾಗಿ ಜಾತ್ರೆಯಲ್ಲಿ ಈ ಭಾಗದ ನೂತನ ದಂಪತಿಗಳು ಭೇಟಿಯಾಗಿ ಸಂಭ್ರಮಿಸುತ್ತಾರೆ.

ಸತತ 2ನೇ ವರ್ಷವೂ ರಥೋತ್ಸವವಿಲ್ಲ: ಆದರೆ ರಥ ನಿರ್ಮಾಣವಾಗದೇ ರಥೋತ್ಸವ ರದ್ದಾಗಿರುವುದು ನವದಂಪತಿಗಳ ನಿರಾಸೆಗೆ ಕಾರಣವಾಗಿದೆ. ಅಲ್ಲದೇ ಚಾಮರಾಜೇಶ್ವರನ ಭಕ್ತಾದಿಗಳು, ನಗರದ ಜನತೆ ವರ್ಷಕ್ಕೊಮ್ಮೆ ನಡೆಯುತ್ತಿದ್ದ ಸಂಭ್ರಮದ ಜಾತ್ರೆ ಸತತ ಎರಡನೇ ವರ್ಷವೂ ಇಲ್ಲದಿರುವುದರಿಂದ ಬೇಸರಗೊಂಡಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿ ಅಣೆಕಟ್ಟುಗಳು ಭರ್ತಿಯಾಗಿ ಸಮೃದ್ಧಿ ನೆಲೆಸಿರುವುದರಿಂದ ರಥೋತ್ಸವ ನಡೆದಿದ್ದರೆ ಚೆನ್ನಾಗಿರುತ್ತಿತ್ತು ಎಂಬುದು ಜನತೆಯ ಅನಿಸಿಕೆಯಾಗಿದೆ.

ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿದೆ. ದೇವಾಲಯಕ್ಕೆ ಸಂಪ್ರೋಕ್ಷಣೆ ನಡೆಯಬೇಕಾಗಿದೆ. ಹಾಗಾಗಿ ರಥೋತ್ಸವ ನಡೆಯುತ್ತಿಲ್ಲ. ನೂತನ ರಥ ನಿರ್ಮಾಣಕ್ಕೆ ಇನ್ನೊಂದು ವಾರದಲ್ಲಿ ಮತ್ತೆ ಟೆಂಡರ್‌ ಕರೆಯಲಾಗುತ್ತದೆ.
-ಮಂಜೇಶ್‌, ಕಾರ್ಯನಿರ್ವಾಹಕ ಅಧಿಕಾರಿ, ಚಾಮರಾಜೇಶ್ವರ ದೇವಾಲಯ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.