ಚಾಮರಾಜೇಶ್ವರ ರಥಕ್ಕೆ ಬೆಂಕಿ:ಶಂಕಿತ ಆರೋಪಿ ಸೆರೆ
Team Udayavani, Feb 23, 2017, 11:09 AM IST
ಚಾಮರಾಜನಗರ: ನಗರದ ಐತಿಹಾಸಿಕ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಿಲ್ಲಿಸಿದ್ದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿದ ಆರೋಪಿಯನ್ನು ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಕುಮಾರ್ (30) ಎಂಬಾತನಾಗಿದ್ದು ಈತನಿಗೆ ಬೆಂಕಿ ಹಚ್ಚುವ ವಿಕೃತ ಗೀಳಿದೆ ಎಂದು ಹೇಳಲಾಗಿದೆ. ಈ ಹಿಂದೆ ಆದಿಶಕ್ತಿ ಗೋದಾಮಿಗೆ ಬೆಂಕಿ ಹಚ್ಚಿದ್ದು, ಇನ್ನೊಂದು ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನಿಗೆ ಮಾನಸಿಕ ಸಮಸ್ಯೆ ಇದೆ ಎನ್ನಲಾಗಿದೆ.
ಫೆಬ್ರವರಿ 18 ರಂದು ತಡರಾತ್ರಿ ಬೆಂಕಿ ಹಚ್ಚಿದ್ದ ದೃಶ್ಯವಾಳಿಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದ್ದವು. ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.
ಬೆಂಕಿ ಹಚ್ಚಿರುವುದು ಕಂಡು ಬಂದ ಬಳಿಕ ಭಕ್ತರು ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿ ಕೂಡಲೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ