ಚಾಮರಾಜನಗರ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂದನ; 15ಲಕ್ಷ ಮೌಲ್ಯದ ಗಾಂಜಾ ವಶ
Team Udayavani, Oct 20, 2020, 7:35 PM IST
ಹನೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 15ಲಕ್ಷ ಮೌಲ್ಯದ ಗಾಂಜಾ ವಶ ಪಡಿಸಿಕೊಳ್ಳುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮಣಿಕಂಠ(29) ಅಲಿಯಾಸ್ ಗುಂಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿರುವುದಾಗಿ ರಾಮಾಪುರ ಪೊಲೀಸರಿಗೆ ಮಾಹಿತಿ ದೊರೆತಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಪಿಐ ಮನೋಜ್ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಸಿಪಿಐ ಮನೋಜ್ಕುಮಾರ್, ಪಿಎಸ್ಐ ಮಂಜುನಾಥ್ ಪ್ರಸಾದ್, ಕೌದಳ್ಳಿ ವಮಯ ಅರಣ್ಯಾಧಿಕಾರಿ ವಿನಯ್ಕುಮಾರ್, ರಾಮಾಪುರ ವೈದ್ಯಾಧಿಕಾರಿ ಡಾ||ಮನು, ಗ್ರಾಮ ಲೆಕ್ಕಾಧಿಕಾರಿ ದಿನೇಶ್, ಅರಣ್ಯ ರಕ್ಷಕರಾದ ಗಿರೀಶ್, ಮಲ್ಲಿಕಾರ್ಜುನ ಹಂಗರಗಿ, ಸುರೇಶ್, ನೀಲಶೆಟ್ಟಿ, ಪೊಲೀಸ್ ಸಿಬ್ಬಂದಿಗಳಾದ ನಂಜುಂಡ, ಮಾದೇಶ್. ರಘು, ಮನೋಹರ್, ಶೀವಮೂರ್ತಿ, ಸುರೇಶ್, ನಾಗಶೆಟ್ಟಿ, ರಂಗಸ್ವಾಮಿ, ಪರಮೇಶ್, ರವಿಪ್ರಸಾದ್ ಇನ್ನಿತರರು ಭಾಗವಹಿಸಿದ್ದರು.
ಎಸ್ಪಿ ಅವರಿಂದ ನಗುದು ಬಹುಮಾನ ಘೋಷಣೆ: ರಾಮಾಪುರ ಪೊಲೀಸರ ಈ ದಾಳಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ 15 ಸಾವಿರ ರೂಪಾಯಿಗಳ ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್ ಟಿಕೆಟ್?
Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು
Lok Sabha Poll 2024: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ
Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ