ಚಾಮರಾಜನಗರ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂದನ; 15ಲಕ್ಷ ಮೌಲ್ಯದ ಗಾಂಜಾ ವಶ
Team Udayavani, Oct 20, 2020, 7:35 PM IST
ಹನೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 15ಲಕ್ಷ ಮೌಲ್ಯದ ಗಾಂಜಾ ವಶ ಪಡಿಸಿಕೊಳ್ಳುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮಣಿಕಂಠ(29) ಅಲಿಯಾಸ್ ಗುಂಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿರುವುದಾಗಿ ರಾಮಾಪುರ ಪೊಲೀಸರಿಗೆ ಮಾಹಿತಿ ದೊರೆತಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಪಿಐ ಮನೋಜ್ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಸಿಪಿಐ ಮನೋಜ್ಕುಮಾರ್, ಪಿಎಸ್ಐ ಮಂಜುನಾಥ್ ಪ್ರಸಾದ್, ಕೌದಳ್ಳಿ ವಮಯ ಅರಣ್ಯಾಧಿಕಾರಿ ವಿನಯ್ಕುಮಾರ್, ರಾಮಾಪುರ ವೈದ್ಯಾಧಿಕಾರಿ ಡಾ||ಮನು, ಗ್ರಾಮ ಲೆಕ್ಕಾಧಿಕಾರಿ ದಿನೇಶ್, ಅರಣ್ಯ ರಕ್ಷಕರಾದ ಗಿರೀಶ್, ಮಲ್ಲಿಕಾರ್ಜುನ ಹಂಗರಗಿ, ಸುರೇಶ್, ನೀಲಶೆಟ್ಟಿ, ಪೊಲೀಸ್ ಸಿಬ್ಬಂದಿಗಳಾದ ನಂಜುಂಡ, ಮಾದೇಶ್. ರಘು, ಮನೋಹರ್, ಶೀವಮೂರ್ತಿ, ಸುರೇಶ್, ನಾಗಶೆಟ್ಟಿ, ರಂಗಸ್ವಾಮಿ, ಪರಮೇಶ್, ರವಿಪ್ರಸಾದ್ ಇನ್ನಿತರರು ಭಾಗವಹಿಸಿದ್ದರು.
ಎಸ್ಪಿ ಅವರಿಂದ ನಗುದು ಬಹುಮಾನ ಘೋಷಣೆ: ರಾಮಾಪುರ ಪೊಲೀಸರ ಈ ದಾಳಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ 15 ಸಾವಿರ ರೂಪಾಯಿಗಳ ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ