ಜನರ ಕಾಡಿಸಿದ್ದ ಗಂಡು ಚಿರತೆ ಬೋನ್ನಲ್ಲಿ ಸೆರೆ
Team Udayavani, Mar 11, 2021, 8:08 PM IST
ಎಚ್.ಡಿ.ಕೋಟೆ: ಕಾಡಿನಿಂದ ನಾಡಿಗೆ ಬಂದು ಸಾಕುಪ್ರಾಣಿಗಳನ್ನು ಕೊಂದು ಜನರಲ್ಲಿ ಭಯ ಭೀತಿಗೊಳಿಸಿದ್ದಗಂಡು ಚಿರತೆ ಕಡೆಗೂ ಅರಣ್ಯ ಇಲಾಖೆ ಇರಿಸಿದ್ದಬೋನಿನಲ್ಲಿ ಬಂಧಿಯಾಗಿದೆ.
ತಾಲೂಕಿನ ಮಾದಾಪುರದ ಚಿಕ್ಕರೆಯೂರು ಗ್ರಾಮಕ್ಕೆಸಂಪರ್ಕ ಕಲ್ಪಿಸುವ ಜಮೀನೊಂದರಲ್ಲಿ ಆಶ್ರಯ ಪಡೆದುಕೊಂಡಿದ್ದ ಚಿರತೆ ಆಗಾಗ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುವುದರ ಜೊತೆಗೆ ಗ್ರಾಮದ ಆಸು ಪಾಸಿನಲ್ಲಿ ಗೋಚರಿಸಿ ಜನರಲ್ಲಿ ಆತಂಕ ಸೃಷ್ಟಿಸಿತ್ತು.
ಚಿರತೆ ಸೆರೆಗೆ ಗ್ರಾಮಸ್ಥರು ಎಚ್.ಡಿ.ಕೋಟೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದರು. ಹೀಗಾಗಿ ಜಮೀನಿನೊಂದರಲ್ಲಿ ಬೋನ್ ಅಳವಡಿಸಿ, ಅದರಲ್ಲಿ ಸಾಕು ನಾಯಿಯೊಂದನ್ನು ಇರಿಸಲಾಗಿತ್ತು. ಮಂಗಳವಾರ ತಡರಾತ್ರಿ ನಾಯಿ ಚೀರಾಟ ಆಲಿಸಿದ ಚಿರತೆಯು ಬೇಟೆಗೆಂದು ಬೋನಿನೊಳಗೆ ನುಸುಳುತ್ತಿ ದಂತೆ ಬಂಧಿಯಾಗಿದೆ. ಇದೀಗ ಗ್ರಾಮಸ್ಥರು ನಿಟ್ಟುಸಿರುವ ಬಿಟ್ಟಿದ್ದಾರೆ.
ಸುಮಾರು 4 ವರ್ಷದ ಚಿರತೆ ಬೋನಿಗೆ ಸಿಕ್ಕಿಬಿದ್ದ ವಿಷಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸುತ್ತಿದ್ದಂ ತೆಯೇ, ರಾತ್ರಿಯೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸೆರೆಸಿಕ್ಕ ಚಿರತೆಯನ್ನು ಎಚ್.ಡಿ.ಕೋಟೆ ಅರಣ್ಯ ಇಲಾಖೆ ಕಚೇರಿ ಬಳಿ ಸ್ಥಳಾಂತರಿಸಿದ್ದಾರೆ. ಸೆರೆ ಸಿಕ್ಕ ಚಿರತೆ ಕಣ್ತುಂಬಿಕೊಳ್ಳಲು ನೂರಾರು ಮಂದಿ ಕಚೇರಿಗೆ ಧಾವಿಸಿದ್ದರು. ಇವರನ್ನು ನಿಯಂ ತ್ರಿ ಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾ ಯಿತು. ಚಿರತೆ ಆರೋಗ್ಯವಂತವಾಗಿದ್ದು, ಪಶು ವೈದ್ಯ ರಿಂದ ತಪಾಸಣೆ ನಡೆಸಿದ ಬಳಿಕ ಸೆರೆಯಾದ ಚಿರತೆ ಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವಲಯದಲ್ಲಿ ಬಿಡಲು ಅರಣ್ಯ ಇಲಾಖೆ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ