ಹನೂರು: ಚಿರತೆ ದಾಳಿಗೆ ದನಗಾಹಿ ವೃದ್ಧ, ಕರು ಬಲಿ
Team Udayavani, Sep 23, 2022, 1:26 PM IST
ಹನೂರು: ಚಿರತೆ ದಾಳಿಗೆ ದನಗಾಹಿ ವೃದ್ಧ ಮತ್ತು ಒಂದು ಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಹನೂರು ತಾಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ನಿವಾಸಿ ಗೋವಿಂದಯ್ಯ (65) ಮೃತಪಟ್ಟ ದನಗಾಹಿ ವೃದ್ಧ ಎಂದು ತಿಳಿದು ಬಂದಿದೆ. ಈತ ದನಗಳನ್ನು ಮೇಯಿಸಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಗೋವಿಂದಯ್ಯ ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಆತನ ಕುಟುಂಬಸ್ಥರು ಆತನನ್ನು ಹುಡುಕಿಕೊಂಡು ಹೋದಾಗ ಆತನ ಮೃತ ದೇಹ ಪತ್ತೆಯಾಗಿದೆ. ಆತನ ಮೃತ ದೇಹವನ್ನು ನೋಡಲು ಸಾರ್ವಜನಿಕರು ತೆರಳುತ್ತಿದ್ದ ಅದೇ ವೇಳೆಗೆ ಚಿರತೆ ಮತ್ತೊಂದು ಕರುವನ್ನೂ ಸಹ ಹೊತ್ತೊಯ್ದಿದೆ.
ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ