ಚೆಲುವ ಚಾಮರಾಜನಗರ ಅಭಿಯಾನ

ವಿಧೆಡೆ ಸೆಲ್ಫಿ ಪಾಯಿಂಟ್‌ ತೆರೆಯಲು ಕ್ರಮ: ಜಿಲ್ಲಾಧಿಕಾರಿ ರವಿ

Team Udayavani, Oct 9, 2020, 3:00 PM IST

ಚೆಲುವ ಚಾಮರಾಜನಗರ ಅಭಿಯಾನ

ಚಾಮರಾಜನಗರ: ಚಾಮರಾಜನಗರವು ಕಲೆ, ಸಂಸ್ಕೃತಿ, ವಿಶಿಷ್ಟತೆ ಹೊಂದಿದ್ದು, ಜಿಲ್ಲೆಯನ್ನು ‌ಸ್ವಚ್ಛ ಹಾಗೂ ಸುಂದರಗೊಳಿಸುವ ಸಲುವಾಗಿ ಚೆಲುವ ಚಾಮರಾಜನಗರ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸ‌ಭಾಂಗಣದಲ್ಲಿ ವಿವಿಧ ಇಲಾಖೆಗಳ ‌ ಅಧಿಕಾರಿಗಳೊಂದಿಗೆ ನಡೆದ ಪ್ರಗ‌ತಿ ಪರಿಶೀಲನೆಯಲ್ಲಿ ಮಾತನಾಡಿದ ಅವರು, ಅಭಿಯಾನ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ

ಸಂಘಸಂಸ್ಥೆಗಳ ಸಹಭಾಗಿತ್ವ ಆಯೋಜಿಸಬೇಕಾಗಿದೆ. ಅಭಿಯಾನ ‌ ಒಂದು ಯೋಜನೆಯಾಗಿರದೇ ಸಮುದಾಯಿಕ ಪಾಲ್ಗೊಳ್ಳುವಿಕೆಯ ನಿರಂತರ ‌ ಪ್ರಕ್ರಿಯೆಯಾಗಿರುವುದರಿಂದ ಎಲ್ಲರ ಈ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.

ಸೆಲ್ಫಿ ಪಾಯಿಂಟ್‌: ಜಿಲ್ಲೆಯ ನಗರ ‌, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧೆಡೆ ಸೆಲ್ಫಿ ಪಾಯಿಂಟ್‌ ಗಳನ್ನು ತೆರೆಯಲಾಗುತ್ತಿದೆ. ನ‌ಗರದ ಜಿಲ್ಲಾಡಳಿತ ‌ ಭವನದ ಅಂಬೇಡ್ಕರ್‌ ಪ್ರತಿಮೆ ಬಳಿ, ಜಿಲ್ಲಾಡಳಿತ ಭವನದ ಉದ್ಯಾನವನ, ಸುಲ್ತಾನ್‌ ಷರೀಫ್ ವೃತ್ತದ ಬಳಿ, ಭುವನೇಶ್ವರಿ ‌  ವೃತ್ತದ ‌ ಬಳಿ ಸೆಲ್ಫಿ ಪಾಯಿಂಟ್‌ಗಳನ್ನು ತೆರೆಯಲು ಆಡಳಿತಾತ್ಮಕ ‌ ಅನುಮೋದನೆ ಪಡೆದು ಟೆಂಡರ್‌ ಕರೆಯುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಫ‌ುಡ್‌ಜೋನ್‌: ಸಾರ್ವಜನಿಕರ ಅನುಕೂಲಕ್ಕಾಗಿ ಮಾದರಿ ಆಹಾರ (ಫ‌ುಡ್‌ ಜೋನ್‌) ವಲಯಗಳನ್ನು ತೆರೆಯಲು ಜಾಗ ಗುರುತಿಸುವ‌ ಕಾರ್ಯ ಆಗಬೇಕು. ನಗರದ ವೀರಭದ್ರೇಶ್ವರ ‌ ದೇವಾಲಯದ ಬಳಿ ಈಗಾಗಲೇ ಜಾಗ ‌ ಗುರುತಿಸಲಾಗಿದೆ. ತರಕಾರಿ ಮಾರುಕಟ್ಟೆ ಸ್ಥಳದಲ್ಲಿ ಆಗಬೇಕಾಗಿದೆ ಫ‌ುಡ್‌ ಜೋನ್‌ ವಲಯವನ್ನು ಬೇರೆಡೆ ‌ ಸ್ಥಳಾಂತರಿಸುವ ‌ ಅಗತ್ಯವಿದೆ. ಇದಕ್ಕಾಗಿ ತ್ವರಿತವಾಗಿ ಜಾಗ ಗುರುತಿಸಿ ಎಂದರು.

ಪ್ರವಾಸಿ ತಾಣ ಅಭಿವೃದ್ಧಿ:  ‌ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕ‌ರಿವರದರಾಯನಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯ, ಚಿಕ್ಕಹೊಳೆ, ಸುವರ್ಣಾವತಿ ಜಲಾಶಯಗಳಲ್ಲಿ ಉದ್ಯಾನ ನಿರ್ಮಾಣ, ನಗರದ ಸುಬೇದಾರ್‌ ಕಟೆ rಯ ಬಳಿ ಇರುವ ಪುಷ್ಕರಿಣಿ, ಯಳಂದೂರಿನ ಷಡಕ್ಷರಿದೇವನ ಗದ್ದುಗೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಒಟ್ಟಾರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ವಿಡಿಯೋ ಚಿತ್ರೀಕರಣಗೊಳಿಸಿಡಾಕ್ಯುಮೆಂಟರಿಮಾಡುವಂತೆ ನಿರ್ದೇಶನ ನೀಡಿದರು.

ಬೆಗಾರರಿಗೆ ಸಾಲ ಸೌಲಭ್ಯ: ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರಿಗೆ ಅನುಕೂಲವಾಗುವಂತೆ ಅನುದಾನವನು ಮೂಲಬಂಡವಾಳ, ದುಡಿಮೆ ಬಂಡವಾಳವನ್ನಾಗಿ ಪರಿವರ್ತಿಸಿ ತರಬೇತಿ ನೀಡಲಾಗುವುದು.. ಇದಕ್ಕಾಗಿ ಫಲಾನುಭವಿಗಳನ್ನು ಗುರುತಿಸಿ ಸಾಲ ಒದಗಿಸಲು ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ಕರೆದು ಚರ್ಚಿಸುವಂತೆ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಜವರೇಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ‌ ಯೋಜನಾ ನಿರ್ದೇಶಕ ಕೆ. ಸುರೇಶ್‌, ತ‌ಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ಕೆ. ಕುನಾಲ್‌, ಗಣಿ ಮತ್ತು ಭೂವಿಜ್ಞಾನ ‌ ಇಲಾಖೆಯ ಉಪನಿರ್ದೇಶಕಿ ಲಕ್ಷ್ಮಮ್ಮ ಇತರರಿದ್ದರು.

ಶತಮಾನ ಪೂರೈಸಿರುವ 35 ಶಾಲೆಗಳ ಅಭಿವೃದ್ಧಿಗೆ ಹಣ :  ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ35 ಶಾಲೆಗಳನ್ನು ಈಗಾಗಲೇ ಗುರುತಿಸಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 11, ಗುಂಡ್ಲುಪೇಟೆ 10, ಹನೂರು 2,ಕೊಳ್ಳೇಗಾಲ 10 ಮತ್ತು ಯಳಂದೂರಿನಲ್ಲಿ100 ವರ್ಷಗಳನ್ನು ಕಂಡಿರುವ2ಶಾಲೆಗಳಿಗೆ ಪ್ರತಿಶಾಲೆಗೆ5ಲಕ್ಷ ರೂ. ಮೀಸಲಿಡಲಾಗಿದೆ.ಈಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸಲು ಕ್ರಿಯಾಯೋಜನೆ ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಗ್ರಾನೈಟ್‌ಗೆ ಸಾಕಷ್ಟುಬೇಡಿಕೆ, ಯುವಜನರಿಗೆ ತರಬೇತಿ : ಜಿಲ್ಲೆಯ ಗ್ರಾನೈಟ್‌ಗೆ ಇತರೆಡೆ ತುಂಬಾ ಬೇಡಿಕೆ ಇದ್ದು, ನಿರುದ್ಯೋಗಿ ಯುವಕ, ಯುವತಿಯರಿಗೆ ಕೌಶಲ್ಯಾಭಿವೃದ್ಧಿತರಬೇತಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸ್ವಯಂಉದ್ಯೋಗ ಕಲ್ಪಿಸಬೇಕು. ಗ್ರಾನೈಟ್‌ಕಟಿಂಗ್‌, ಡಿಸೈನ್‌, ಡ್ರಿಲ್ಲಿಂಗ್‌, ಪಾಲಿಶ್‌ ಸೇರಿದಂತೆ 5 ಬಗೆಯ ತರಬೇತಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.