ಮಹಿಳೆಗೆ ಆಂಬ್ಯುಲೆನ್ಸ್ ನಲ್ಲೇ ಹೆರಿಗೆ : ಮಗು ಸಾವು


Team Udayavani, Dec 7, 2020, 9:26 PM IST

ಮಹಿಳೆಗೆ ಆಂಬ್ಯುಲೆನ್ಸ್ ನಲ್ಲೇ ಹೆರಿಗೆ : ಮಗು ಸಾವು

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಮಹಿಳೆಯೊಬ್ಬರಿಗೆ ಹೆರಿಗೆ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ದೊರಕದೆ, ಮೈಸೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಆಂಬ್ಯುಲೆನ್ಸ್ ನಲ್ಲೇ ಹೆರಿಗೆಯಾಗಿ, ಹುಟ್ಟುವ ಮೊದಲೇ ಮಗು ಮೃತಪಟ್ಟಿರುವ ಘಟನೆ ನಡೆದಿದೆ.

ಕೊಳ್ಳೇಗಾಲ ತಾಲೂಕು ಕಾಡಂಚಿನ ಗ್ರಾಮವಾದ ಪುಟ್ಟೀರಮ್ಮನ ದೊಡ್ಡಿಯ ಗರ್ಭಿಣಿ ಮಹದೇವಮ್ಮ ಅವರಿಗೆ ಶನಿವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿತ್ತು. ತಕ್ಷಣ ಈಕೆಯ ಪತಿ ಸಮೀಪದಲ್ಲೇ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಇದು 24*7 ಹೆರಿಗೆ ಆಸ್ಪತ್ರೆಯಾಗಿದ್ದರೂ ಇಲ್ಲಿ ವೈದ್ಯರೇ ಇಲ್ಲ. ಹಾಗಾಗಿ ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ಮುಚ್ಚಿತ್ತು. ಬೇರೆ ದಾರಿ ಕಾಣದೆ ನಂತರ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಗರ್ಭಿಣಿಯನ್ನು ಪರೀಕ್ಷಿಸಿದ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಈಕೆಯನ್ನು ದಾಖಲು ಮಾಡಿಕೊಳ್ಳದೆ ಜಿಲ್ಲಾಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾರೆ.

ನಂತರ ಗರ್ಭಿಣಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈಕೆಯನ್ನು ಪರೀಕ್ಷಿಸಿದ ಕರ್ತವ್ಯನಿರತ ವೈದ್ಯರು ರಾತ್ರಿ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿಲ್ಲ, ಹಾಗಾಗಿ ಹೊರಗಡೆ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರುವಂತೆ ತಿಳಿಸಿದ್ದಾರೆ. ಮಧ್ಯರಾತ್ರಿ ಆಟೋ ಮಾಡಿಕೊಂಡು ನಗರದ ಎಲ್ಲಾ ಕಡೆ ಹುಡುಕಾಟ ನಡೆಸಿದ ಗರ್ಭಿಣಿ ಮಹಿಳೆಯ ಕಡೆಯವರು ಎಲ್ಲಿಯೂ ಸ್ಕ್ಯಾನಿಂಗ್ ಮಾಡಿಸಲಾಗದೆ ಮತ್ತೆ ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ.

ಹೊಟ್ಟೆಯಲ್ಲಿರುವ ಮಗು ಚಲನೆಯಲ್ಲಿ ಇಲ್ಲದಂತೆ ಕಂಡುಬರುತ್ತಿದೆ. ಹಾಗಾಗಿ ಸ್ಕ್ಯಾನಿಂಗ್ ರಿಪೋರ್ಟ್ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ. ಅಲ್ಲದೆ ಮಾರನೇ ದಿನ ಭಾನುವಾರ ಸ್ಕ್ಯಾನಿಂಗ್ ಮಾಡುವ ರೆಡಿಯಾಲಜಿಸ್‌ಟ್ ಬರುವುದಿಲ್ಲ. ಹಾಗಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ತಿಳಿಸಿದರು. ಈ ವೇಳೆ ಮೈಸೂರಿಗೆ ತೆರಳುತ್ತಿರುವಾಗ ಮಾರ್ಗ ಮಧ್ಯೆದಲ್ಲಿ ಆಂಬ್ಯುಲೆನ್ಸ್ ನಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿತು. ಬೇರೆ ದಾರಿ ಕಾಣದೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆತಂದು ಸೇರಿಸಿದ್ದೇನೆ ಎಂದು ಮಹಿಳೆಯ ಪತಿ ಮಹದೇವ ನೊಂದು ನುಡಿದರು.

ಒಂದು ವೇಳೆ ಜಿಲ್ಲಾಸ್ಪತ್ರೆಯಲ್ಲೇ ಸ್ಕ್ಯಾನಿಂಗ್ ಮಾಡಿ ರಿಪೋರ್ಟ್ ನೀಡಿದ್ದರೆ ಗರ್ಭಿಣಿ ಮಹಿಳೆಯ ಸ್ಥಿತಿಗತಿ ತಿಳಿಯುತ್ತಿತ್ತು. ಆದರೆ ಇಲ್ಲಿ ರಾತ್ರಿ ವೇಳೆ ಸ್ಕ್ಯಾನಿಂಗ್ ಮಾಡುವವರಿಲ್ಲದೆ ಈ ಘಟನೆ ಸಂಭವಿಸಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಡಾ.ಮುರಳಿಕೃಷ್ಣ, ಮಹಿಳೆ ಆಸ್ಪತ್ರೆಗೆ ಬರುವ ಮೊದಲೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿತ್ತು. ಮಹಿಳೆ ಕಡೆಯವರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಅವರೇ ಮೈಸೂರಿಗೆ ಕರೆದೊಯ್ದರು. ಇಲ್ಲೇ ಸೇರ್ಪಡೆಯಾಗಿದ್ದರೆ ಏನೂ ತೊಂದರೆಯಾಗುತ್ತಿರಲಿಲ್ಲ ಎಂದು ತಿಳಿಸಿದರು.

ಆದರೆ ಗರ್ಭಿಣಿ ಮಹಿಳೆಗೆ ಕಾಮಗೆರೆ ಅಥವಾ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಿದ್ದರೆ ಮಗುವನ್ನು ಉಳಿಸಿಕೊಳ್ಳಬಹುದಿತ್ತು ಎಂದು ರೋಗಿಯ ಸಂಬಂಧಿಕರು ದೂರಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ರೆಡಿಯಾಲಜಿಸ್ಟಗಳಿದ್ದು, ಒಬ್ಬರು ಹೆರಿಗೆ ರಜೆಯಲ್ಲಿದ್ದಾರೆ. ಹಾಗಾಗಿ ಹಗಲು ವೇಳೆ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದು ರಾತ್ರಿ ವೇಳೆ ಸ್ಕ್ಯಾನಿಂಗ್ ಸೌಲಭ್ಯ ಕಷ್ಟವಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ

300 ಹಾಸಿಗೆ ಸೌಲಭ್ಯವುಳ್ಳ ಜಿಲ್ಲಾಸ್ಪತ್ರೆಯಲ್ಲಿ ಏಳು ಮಂದಿ ರೆಡಿಯಾಲಜಿಸ್ಟ್ ಗಳು ಇರಬೇಕು. ಆದರೆ ಇಲ್ಲಿರುವುದು ಕೇವಲ ಇಬ್ಬರು ಮಾತ್ರ. ಅದರ‌್ಲಲೂ ಈಗ ಒಬ್ಬರು ರಜೆಯಲ್ಲಿದ್ದು ರೋಗಿಗಳಿಗೆ ಸಮರ್ಪಕವಾದ ಸೇವೆ ಲಭ್ಯವಾಗುತ್ತಿಲ್ಲ ಸರ್ಕಾರ ಈ ಸಮಸ್ಯೆ ಮನಗಂಡು ಅಗತ್ಯ ಸಂಖ್ಯೆಯ ರೆಡಿಯಾಲಜಿಸ್ಟ್ ಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.