ಪರೀಕ್ಷಾ ಪೇ ಚರ್ಚಾ ವೀಕ್ಷಿಸಿದ ಮಕ್ಕಳು

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಪ್ರಸಾರವನ್ನು ವಿದ್ಯಾರ್ಥಿಗಳು ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು.

Team Udayavani, Apr 2, 2022, 6:06 PM IST

ಪರೀಕ್ಷಾ ಪೇ ಚರ್ಚಾ ವೀಕ್ಷಿಸಿದ ಮಕ್ಕಳು

ಚಾಮರಾಜನಗರ: ನವದೆಹಲಿಯ ತಾಳ್ಕಟೋರ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಪರೀಕ್ಷಾ ಪೇ ಚರ್ಚಾ ನೇರ ಸಂವಾದದ ಪ್ರಸಾರ ಕಾರ್ಯಕ್ರಮವನ್ನು ಜಿಲ್ಲೆಯ ಹೊಂಡರಬಾಳು ಜವಹರ ನವೋದಯ, ಮಾದಾಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಸೇರಿ ಇತರೆಡೆ ವಿದ್ಯಾರ್ಥಿಗಳು ವೀಕ್ಷಿಸಿದರು.

ವಿದ್ಯಾರ್ಥಿಗಳಲ್ಲಿ ಕಲಿಕಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಆತಂಕ ದೂರ ಮಾಡಿ ಒತ್ತಡ ರಹಿತ ವಾತಾವರಣ ನಿರ್ಮಿಸಲು ಪೂರಕವಾದ ನೇರ ಸಂವಾದದ ಪ್ರಸಾರವನ್ನು ಹೊಂಡರಬಾಳುವಿನಲ್ಲಿರುವ ಜವಾಹರ್‌ ನವೋದಯ ವಿದ್ಯಾಲಯದ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸಿದರು.

ಸಂವಾದದ ಪ್ರಸಾರ ವೀಕ್ಷಣೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ನಗರದ ಬಳಿಯಿರುವ ಮಾದಾಪುರದ ಕೇಂದ್ರೀಯ ವಿದ್ಯಾಲಯದಲ್ಲಿಯೂ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಪ್ರಸಾರವನ್ನು ವಿದ್ಯಾರ್ಥಿಗಳು ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು. 6 ರಿಂದ 11ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸೆಮಿನಾರ್‌ ಹಾಲ್‌ನಲ್ಲಿ ಹಾಗೂ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಲ್ಯಾಬ್‌ನಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸಂವಾದ ವೀಕ್ಷಿಸಿದರು.

ಹೊಂಡರಬಾಳು ಜವಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ವಿ.ಪ್ರಸಾದ್‌, ಮಾದಾಪುರದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ನಿರ್ಮಲಾಕುಮಾರಿ, ಶಿಕ್ಷಣ ಅಧಿಕಾರಿಗಳಾದ ಮಂಜುನಾಥ್‌, ಲಕ್ಷ್ಮೀಪತಿ, ಬೋಧಕರಾದ ಯಲ್ಲಪ್ಪ ಬೈಯಾಪುರ, ಕುರಿಯನ್‌ ಥಾಮಸ್‌ ಇತರರು ಹಾಜರಿದ್ದರು.

ಶ್ರೇಯಾಗೆ ನಿರಾಶೆ: ನಗರದ ಕೇಂದ್ರೀಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಅವರನ್ನು ಪ್ರಧಾನಿಗಳ ಜೊತೆ ಪರೀಕ್ಷಾ ಪೇ ಚರ್ಚಾ ವರ್ಚುವಲ್‌ ಸಂವಾದ ನಡೆಸಲು ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಸುದ್ದಿಗೋಷ್ಠಿ ನಡೆಸಿ ಆಕೆಯ ಆಯ್ಕೆಯನ್ನು ಘೋಷಿಸಿದ್ದರು. ಆದರೆ, ಕೊನೆಯ ಹಂತದ ಪಟ್ಟಿಯಲ್ಲಿ ಆಕೆಯ ಹೆಸರನ್ನು ಕೈ ಬಿಡಲಾಗಿತ್ತು. ಹೀಗಾಗಿ ಆಕೆಗೆ ಪ್ರಧಾನಿಯವರ ಜೊತೆ ಸಂವಾದ ನಡೆಸಲು ಅವಕಾಶ
ದೊರಕಲಿಲ್ಲ.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.