ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವಯೋಜಿತ ಸಿದ್ಧತೆ ಇರಲಿ


Team Udayavani, Mar 3, 2021, 2:59 PM IST

ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವಯೋಜಿತ ಸಿದ್ಧತೆ ಇರಲಿ

ಚಾಮರಾಜನಗರ: ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಸ್ವ ಪ್ರಯತ್ನ, ಸಾಮರ್ಥ್ಯ ಪರಿಶ್ರಮದಿಂದ ಅಗಾಧ ಸಾಧನೆ ಮಾಡಬೇಕು. ಅನಗತ್ಯ ಸಂಗತಿಗಳ ಬಗ್ಗೆ ಗಮನ ಹರಿಸಬಾರದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಕಿವಿಮಾತು ಹೇಳಿದರು.

ನಗರದ ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಜಿನಿವಾದ ವಿಶ್ವ ವ್ಯಾಪಾರ ಸಂಘಟನೆಯ ಭಾರತದ ಕಾಯಂ ಪ್ರತಿನಿಧಿಯಾಗಿರುವ ಭಾರತೀಯ ವಿದೇಶಾಂಗ ಸೇವೆಯ ಹಿರಿಯ ಅಧಿಕಾರಿ ಪಿ.ಎಸ್‌. ಗಂಗಾಧರ್‌ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವ ಯೋಜಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಅಧ್ಯಯನದ ಮೇಲೆ ಏಕಾಗ್ರತೆ ಇರಬೇಕು.ಆತ್ಮಸ್ಥೈರ್ಯದಿಂದ ನಿಮ್ಮಲ್ಲಿ ಅಂತರ್ಗತವಾಗಿರುವ ವಿದ್ವತ್ತಿನ ಮೇಲೆ ನಂಬಿಕೆಯಿಟ್ಟು ಮುನ್ನಡೆದರೆಸಾಧನೆ ಮಾಡಬಹುದೆಂದರು.

ಸಾಧಕರ ಸಾಧನೆಗಳು ಅನುಭವಗಳು ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿ ಗಳಿಗೆ ನೆರವಾಗಬೇಕು. ಈ ಉದ್ದೇಶಕ್ಕಾಗಿಯೇಚಾಮರಾಜನಗರ ಜಿಲ್ಲೆಯವರೇ ಆದ ಜಿನಿವಾದವಿಶ್ವ ವ್ಯಾಪಾರ ಸಂಘಟನೆಯ ಭಾರತದ ಉಪಕಾಯಂ ಪ್ರತಿನಿಧಿಯಾಗಿರುವ ಭಾರತೀಯವಿದೇಶಾಂಗ ಸೇವೆಯ ಅಧಿಕಾರಿ ಪಿ.ಎಸ್‌.ಗಂಗಾಧರ್‌ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಅಭ್ಯರ್ಥಿಗಳಿಗೆನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಂದೆಯೂ ನಿರಂತರವಾಗಿ ಸಲಹೆ ಮಾರ್ಗದರ್ಶನ ಅಗತ್ಯವಿದೆ. ಹೀಗಾಗಿ ಆನ್‌ಲೈನ್‌ ಮೂಲಕ ಜಿಲ್ಲೆಯ ಯುವಜನರೊಂದಿಗೆ ಸಂಪರ್ಕ ಸಾಧಿಸಿ ಪರೀಕ್ಷೆಗೆ ಮಾರ್ಗದರ್ಶನ ಮಾಡುವವೆಬ್‌ಸೈಟ್‌ ಪೋರ್ಟಲ್‌ ಸ್ಥಾಪಿಸಿದ್ದಲ್ಲಿ ಜಿಲ್ಲಾಡಳಿತ ದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಜಿನಿವಾದ ವಿಶ್ವವ್ಯಾಪಾರ ಸಂಘಟನೆಯ ಭಾರತದ ಉಪ ಕಾಯಂ ಪ್ರತಿನಿಧಿಯಾಗಿರುವ ಭಾರತೀಯ ವಿದೇಶಾಂಗಸೇವೆಯ ಅಧಿಕಾರಿ ಪಿ.ಎಸ್‌. ಗಂಗಾಧರ್‌,ನಾಗರಿಕ ಸೇವಾ ಪರೀಕ್ಷೆ ಬರೆಯಲು ಯಾವುದೇ ಅಂಜಿಕೆ ಬೇಡ. ನಿಮ್ಮ ಗುರಿ ಉದ್ದೇಶಉನ್ನತವಾಗಿರಲಿ. ನಿಮ್ಮಲ್ಲಿರುವ ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಬಿಟ್ಟು ಮನಸ್ಥಿತಿಯ ಅಡೆತಡೆಗಳನ್ನು ಭೇದಿಸಿ ಹೊರಬಂದರೆ ಉನ್ನತ ಹುದ್ದೆ ಅಲಂಕರಿಸಬಹುದು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೃಷ್ಣಮೂರ್ತಿ ಹನೂರು, ಡಾ.ಬಿ.ಆರ್‌. ಅಂಬೇಡ್ಕರ್‌ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪೊ›. ಶಿವಬಸವಯ್ಯ ಇತರರು ಹಾಜರಿದ್ದರು.

 ಯಶಸ್ಸು ಕೈಗೆ ಸಿಗದ ವಸ್ತುವೇನಲ್ಲ :

ನಾನೂ ಸಹ ಕನ್ನಡ ಮಾಧ್ಯಮದಲ್ಲಿಯೇ ಓದಿದ್ದೇನೆ. ನಿಮ್ಮಂತೆಯೇ ವಿದ್ಯಾರ್ಥಿ ಜೀವನ ಕಳೆದಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸುಕೈಗೆ ಸಿಗದ ವಸ್ತುವೇನಲ್ಲ. ಸರಿಯಾದ ಮಾರ್ಗದರ್ಶನ, ಓದಿನೆಡೆಗೆ ಆಸಕ್ತಿ, ವಿಷಯಗಳಆಯ್ಕೆ, ಕೇಂದ್ರೀಕೃತ ಗಮನವಿದ್ದಲ್ಲಿ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದು ಎಂದು ವಿದೇಶಾಂಗ ಸೇವೆಯ ಅಧಿಕಾರಿ ಪಿ.ಎಸ್‌. ಗಂಗಾಧರ್‌ ಸಲಹೆ ಮಾಡಿದರು. ಇದೇ ವೇಳೆನಾಗರಿಕ ಸೇವಾ ಪರೀಕ್ಷೆಗಾಗಿ ಜಿಲ್ಲೆಯ ಅಭ್ಯರ್ಥಿಗಳಿಗಾಗಿ ಮಾರ್ಗದರ್ಶನ ಮಾಡುವ ಸದುದ್ದೇಶದ ಕಾರ.ಗಳಿಗೆ ತಾವು ಸಕ್ರಿಯವಾಗಿ ತೊಗಿಕೊಳ್ಳಲು ಸಿದ್ಧರಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.