ಸ್ವಚ್ಛತೆ ಸೇವೆಗಾಗಿಯೇ ಕಾರ್ಮಿಕರ ಜೀವನ ಮುಡಿಪು


Team Udayavani, Oct 19, 2019, 3:00 AM IST

swachchate

ಚಾಮರಾಜನಗರ: ಭಾರತ್‌ ವಿಕಾಸ ಪರಿಷತ್‌ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಗರದ ಪೌರ ಕಾರ್ಮಿಕರ ಕಾಲೋನಿಗೆ ತೆರಳಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಅರ್ಥಪೂರ್ಣವಾಗಿ ವಿಶ್ವ ಪೌರ ಕಾರ್ಮಿಕರ ದಿನವನ್ನು ಆಚರಿಸಲಾಯಿತು. ವಿಶ್ವ ಪೌರಕಾರ್ಮಿಕರ ದಿನದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ತಮ್ಮ ಬಡಾವಣೆ ಸ್ವಚ್ಛಗೊಳಿಸಿಕೊಂಡು, ರಂಗೋಲಿ ಹಾಗೂ ಹೂವುಗಳಿಂದ ಶೃಂಗರಿಸಿದ್ದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯ ಸ್ಥಳೀಯ ಶಾಖೆ ಮುಖ್ಯಸ್ಥೆ ಬಿ.ಕೆ.ದಾನೇಶ್ವರೀಜಿ. ಕ್ರೈ ಧರ್ಮದ ಸಿಸ್ಟರ್‌ ನಕ್ಷತ್ರ, ಮುಸ್ಲಿಂ ಧರ್ಮ ಗುರು ಮಹಮದ್‌ ಸೇರಿದಂತೆ ನಗರಸಭಾ ಸದಸ್ಯ ಮಹೇಶ್‌ ಅವರನ್ನು ಬಡಾವಣೆಯ ಮಕ್ಕಳು ಪುಷ್ಪವೃಷ್ಟಿಯೊಂದಿಗೆ ಮೆರವಣಿಗೆಯಲ್ಲಿ ಬರ ಮಾಡಿಕೊಂಡರು.

ಬಳಿಕ ನಡೆದ ಕಾರ್ಯಕ್ರಮದಲ್ಲಿ ಐವರು ನಿವೃತ್ತ ಪೌರ ಕಾರ್ಮಿಕರಾದ ನಂಜಮ್ಮ, ನಾಗಮ್ಮ, ಪಳನಿಸ್ವಾಮಿ, ಸುಖಮ್ಮ, ಕುಪ್ಪಮ್ಮ ಅವರನ್ನು ರಾಜಯೋಗಿನಿ ಬಿ.ಕೆ. ದಾನೇಶ್ವರೀಜಿ ಹಾಗೂ ಯುವಶಕ್ತಿ ಪರಿಷತ್‌ನ ಅಧ್ಯಕ್ಷ ಎಲ್‌. ಸುರೇಶ್‌ ಸೀರೆ, ಕುಪ್ಪಸ, ಪಂಚೆ ಬಟ್ಟೆಯನ್ನು ನೀಡಿ, ಹೂವಿನ ಹಾರ ಹಾಕಿ, ಫ‌ಲತಾಂಬೂಲ ನೀಡಿ, ಅಭಿನಂದಿಸಿದರು. ಬಳಿಕ ಎಲ್‌. ಸುರೇಶ್‌ ಪೌರಕಾರ್ಮಿಕರ ಕಾಲಿಗೆ ಪುಷ್ಪ ನಮನ ಸಲ್ಲಿಸಿ, ಅಭಿನಂದನೆ ವ್ಯಕ್ತಪಡಿಸಿದರು.

ರಾಜಯೋಗಿನಿ ಬಿ.ಕೆ. ದಾನೇಶ್ವರೀಜಿ ಮಾತನಾಡಿ, ನಗರ ಸ್ವಚ್ಛವಾಗಿಡಲು ತಮ್ಮ ಜೀವನಮಾನವಿಡಿ ಶ್ರಮ ವಹಿಸಿದ, ಪೌರ ಕಾರ್ಮಿಕರು ನಿಜವಾದ ಬಂಧುಗಳು. ಬೀದಿಯ ಸ್ವಚ್ಛತೆ ಜೊತೆಗೆ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಬೇಕು. ವಿಶ್ವ ಪೌರ ಕಾರ್ಮಿಕರ ದಿನದಂದು ಅವರ ಕಾಲೋನಿಯಲ್ಲಿಯೇ ಹಿರಿಯನ್ನು ಸನ್ಮಾನಿಸಿರುವುದು ಹೆಮ್ಮೆ ಎನ್ನಿಸಿದೆ.

ಇಂಥ ಕಾರ್ಯಕ್ರಮಗಳ ಮೂಲಕ ಪೌರ ಕಾರ್ಮಿಕರ ಕೆಲಸವನ್ನು ಗೌರವಿಸುವ ಮೂಲಕ ಅವರ ವೃತ್ತಿ ಪಾವಿತ್ರ್ಯತೆಯನ್ನು ಮೆರೆಯಬೇಕಾಗಿದೆ. ಪೌರ ಕಾರ್ಮಿಕರು ಸಹ ಕೀಳರಿಮೆಯನ್ನು ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರಬೇಕು. ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸುವ ಮೂಲಕ ಅವರನ್ನು ಸಮಾಜದ ಅಸ್ತಿಯನ್ನಾಗಿ ಮಾಡಬೇಕು. ಯಾವುದೇ ಕೆಲಸವು ಸಹ ಕೀಳಲ್ಲ. ಮಾಡುವ ಕೆಲಸವನ್ನು ಅಚ್ಚುಕ‌ಟ್ಟಾಗಿ ನಿರ್ವಹಿಸಿದರೆ, ಅದೇ ಕೈಲಾಸವಾಗುತ್ತದೆ ಎಂದರು.

ಭಾರತ್‌ ವಿಕಾಸ ಪರಿಷತ್‌ ಅಧ್ಯಕ್ಷ ಎಲ್‌. ಸುರೇಶ್‌ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಬಡಾವಣೆಯನ್ನು ಸ್ವಚ್ಛವಾಗಿಡುವ ಮೂಲಕ ನಮ್ಮ ಆರೋಗ್ಯ ವೃದ್ಧಿಸಲು ಶ್ರಮಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ಇಲ್ಲಿನ ಪೌರಕಾರ್ಮಿಕರ ಕಾಯಕವನ್ನು ನೋಡಿಕೊಂಡು ಬಂದಿದ್ದೇನೆ. ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೇ ತಮ್ಮ ಕೆಲಸವನ್ನು ಮಾಡಿ, ಮಾದರಿಯಾಗಿದ್ದಾರೆ.

ಇಂಥವರನ್ನು ಸನ್ಮಾನಿಸುವ ಭಾಗ್ಯ ನಮ್ಮದಾಗಿದೆ. ಅವರು ತಮ್ಮ ಜೀವಿತಾವಧಿಯಲ್ಲಿ ಮಾಡಿರುವ ಸೇವೆಯನ್ನು ಯಾರು ಸಹ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಚೆಲುವ ಇತರರು ಇದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.