ಧ್ರುವ ಹ್ಯಾಟ್ರಿಕ್‌ ಗೆಲುವಿಗೆ ಸಹಕರಿಸಿ


Team Udayavani, Apr 3, 2019, 3:00 AM IST

dhruva

ಕೊಳ್ಳೇಗಾಲ: ನಗರದ ಮುಜರಾಯಿ ಇಲಾಖೆಗೆ ಸೇರಿದ ಮರಳೇಶ್ವರ ದೇವಾಲಯದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಂಸದ ಆರ್‌.ಧ್ರುವನಾರಾಯಣ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್‌ ಕಾರ್ಯಕರ್ತರ ನೇತೃತ್ವದಲ್ಲಿ ಮರಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಕರ್ತರು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಆರ್‌.ಧ್ರುವನಾರಾಯಣ ಹ್ಯಾಟ್ರಿಕ್‌ ಗೆಲುವು ಸಾಧಿಸುವಂತೆ ಜೈಕಾರ ಹಾಕುತ್ತಾ ದೇವಸ್ಥಾನದಿಂದ ಮುಖ್ಯ ರಸ್ತೆಯ ಮೂಲಕ ಮನೆ ಮನೆಗೆ ತೆರಳಿ ಕರ ಪತ್ರವನ್ನು ವಿತರಿಸಿ ಮತಯಾಚನೆ ಮಾಡಿದರು.

ಮೈತ್ರಿ ಅಭ್ಯರ್ಥಿಗೆ ಮತ ನೀಡಿ: ಇದೇ ಸಂದರ್ಭದಲ್ಲಿ ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ಬಿಜೆಪಿಯಂತಹ ಕೋಮುವಾದಿ ಪಕ್ಷ ಮತ್ತು ಸುಳ್ಳಿನ ಸರದಾರ ಪ್ರಧಾನಿ ನರೇಂದ್ರಮೋದಿ ಮಾತಿಗೆ ಮರುಳಾಗದೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತವನ್ನು ದೊರಕಿಸಿಕೊಟ್ಟು ಹ್ಯಾಟ್ರಿಕ್‌ ಗೆಲುವಿಗೆ ಸಹಕಾರಿಯಾಗಬೇಕೆಂದು ಮನವಿ ಮಾಡಿದರು.

ಹಸ್ತಕ್ಕೆ ಮತ ಹಾಕಿ: ಕಾರ್ಯಕರ್ತರು ಈ ಹಿಂದೆ ಕೇಂದ್ರದಲ್ಲಿ ಆಳ್ವಿಕೆ ನಡೆಸಿದ ಯುಪಿಎ ಸರ್ಕಾರದ ಆಡಳಿತ ವೈಖರಿ ಮತ್ತು ರಾಜ್ಯ ಸಂಮಿಶ್ರ ಸರ್ಕಾರದಲ್ಲಿ ಜನಪರ ಕೆಲಸವಾಗುತ್ತಿರುವ ಅಭಿವೃದ್ಧಿಯ ಬಗ್ಗೆ ಮತದಾರರಿಗೆ ತಿಳಿವಳಿಕೆ ನೀಡಬೇಕು ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಕಾಂಗ್ರೆಸ್‌ ಹಸ್ತದ ಗುರುತಿಗೆ ಮತ ದೊರಕಿಸಿಕೊಡಬೇಕು ಎಂದರು.

ಕೋಮುವಾದಿ ಪಕ್ಷಕ್ಕೆ ಸೇರಲ್ಲ: ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧ್ರುವನಾರಾಯಣ, ಚುನಾವಣಾ ಪ್ರಚಾರವನ್ನು ಮಾಜಿ ಸಂಸದರು ಶಾಸಕರು ಮಾಜಿ ಶಾಸಕರು ಜಿಪಂ ತಾಪಂ, ಗ್ರಾಪಂ ಮತ್ತು ನಗರಸಭೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಪಕ್ಷದಿಂದ ಅಸಮಾಧಾನಗೊಂಡಿರುವ ಕಿನಕಹಳ್ಳಿ ರಾಚಯ್ಯ,

ಡಿಎನ್‌ ನಟರಾಜು, ಪಕ್ಷ ತೊರೆದು ಬಿಜೆಪಿಗೆ ಸೇರುತ್ತಾರೆ ಎಂದು ವದಂತಿ ಇದ್ದು ಅವರು ಪಕ್ಷ ಬಿಡದಂತೆ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಮನವೊಲಿಸುವ ಪ್ರಯತ್ನ ಮಾಡಿದ್ದು ಅವರು ಜ್ಯಾತ್ಯತೀತ ಕಾಂಗ್ರೆಸ್‌ಪಕ್ಷ ಬಿಟ್ಟು ಕೋಮುವಾದಿ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮನೆ ಮನೆಗೆ ತೆರಳಿ ಮತಯಾಚನೆ: ನಗರದ 31 ವಾರ್ಡ್‌ಗಳಿದ್ದು ಎಲ್ಲಾ ವಾರ್ಡ್‌ಗಳಲ್ಲಿ ಮಾಜಿ ಶಾಸಕರಾದ ಎಸ್‌.ಜಯಣ್ಣ, ಎಸ್‌.ಬಾಲರಾಜು, ಎ.ಆರ್‌.ಕೃಷ್ಣಮೂರ್ತಿ ನೇತೃತ್ವದಲ್ಲಿ ಪ್ರತಿ ದಿನ 3 ರಿಂದ 4 ವಾರ್ಡ್‌ಗಳಲ್ಲಿ ಮತ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿಪರ ಮತಯಾಚನೆ ಮಾಡುವರು ಎಂದು ಹೇಳಿದರು. ಮರಳೇಶ್ವರ ದೇವಾಲಯದಿಂದ ಸಮಂತಗೆರೆ ಬಡಾವಣೆವರೆಗೆ ಪಾದಯಾತ್ರೆ ಮಾಡಿದ ಸಂಸದರು ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಕಾಂಗ್ರೆಸ್‌ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕರಾದ ಎಸ್‌.ಜಯಣ್ಣ, ಎಸ್‌.ಬಾಲರಾಜು, ಎ.ಆರ್‌.ಕೃಷ್ಣಮೂರ್ತಿ, ನಗರಸಭಾ ಸದಸ್ಯರಾದ ಶಾಂತರಾಜು, ರಾಘವೇಂದ್ರ, ಮಂಜುನಾಥ, ಸುರೇಶ್‌, ಮಾಜಿ ಸದಸ್ಯರಾದ ಹರ್ಷ, ಮಲ್ಲಿಕಾರ್ಜುನ, ಸೆಸ್ಕ್ ಮಾಜಿ ನಿದೇರ್ಶಕ ಡಿ.ಸಿದ್ದರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತೋಟೆಶ್‌, ಮುಖಂಡರಾದ ಕೊಪ್ಪಳಿ ಮಹದೇವನಾಯಕ, ಕರವೇ ಅಧ್ಯಕ್ಷ ಮತೀನ್‌, ಗೌರಾವಾಧ್ಯಕ್ಷ ಪ್ರಭಾಕರ್‌ ಮತ್ತು ಮುಖಂಡರು ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.