ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಡ್ಡಾಯ ಶಿಕ್ಷಣ 


Team Udayavani, Jun 13, 2018, 1:43 PM IST

China-new.jpg

ಚಾಮರಾಜನಗರ: ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪೋಷಕರಲ್ಲಿ ಸ್ವಯಂ ಪ್ರೇರಣೆ ಅತ್ಯಗತ್ಯ ಎಂದು ಜಿಪಂ ಇಒ ಡಾ. ಕೆ.ಹರೀಶ್‌ ಕುಮಾರ್‌ ಹೇಳಿದರು. 

ಜಿಲ್ಲಾಡಳಿತದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಿಂದ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಸಮಾಜದ ಆಸ್ತಿ. ಅವರನ್ನು ಸಮಾಜದ ಸತøಜೆಗಳನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳಿಗೆ ಉತ್ತಮ ಸಮಾಜ ಹಾಗೂ ಪರಿಸರ ಒದಗಿಸುವುದಲ್ಲದೆ ಬೌದ್ಧಿಕತೆಯನ್ನು ತುಂಬಿ ಪ್ರಬುದ್ಧರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಾಲ ಕಾರ್ಮಿಕ ಪದ್ಧತಿ ನಿಯಂತ್ರಣಕ್ಕಾಗಿ ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿವೆ ಎಂದರು.

ಬಾಲ ಕಾರ್ಮಿಕರು ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್‌, ರಸ್ತೆ ಬದಿ ಹಾಗೂ ಇತರೆಡೆಯಲ್ಲಿ ಕಡಿಮೆ ಸಂಬಳಕ್ಕಾಗಿ ದುಡಿಯುತ್ತಿದ್ದು, ಮೊದಲು ಅವರನ್ನು ಗುರುತಿಸಿ ಮುಖ್ಯವಾಹಿನಿಗೆ ತರಬೇಕು. ಮಕ್ಕಳನ್ನು ಚಿಕ್ಕವಯಸ್ಸಿನಲ್ಲಿಯೆ ಕೂಲಿಗಾಗಿ ಕಳುಹಿಸದಂತೆ ಪೊಷಕರಿಗೂ ಅರಿವು ಮೂಡಿಸಬೇಕು. ಬಾಲ ಕಾರ್ಮಿಕ ಪದ್ದತಿ ತಡೆಯಲು ಸಂಘಸಂಸ್ಥೆಗಳು, ನಾಗರಿಕರು, ವಿದ್ಯಾರ್ಥಿಗಳು ಜಾಗೃತರಾಗಬೇಕಿದೆ ಎಂದು ಹರೀಶ್‌ಕುಮಾರ್‌ ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶೆ ವಿಶಾಲಾಕ್ಷಿ  ಮಾತನಾಡಿ, ಬಾಲಕಾರ್ಮಿಕ ಪದ್ದತಿ ತಡೆಯಲು ಇಂದು ವಿಶ್ವದೆಲ್ಲೆಡೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಸ್ವಾರ್ಥ, ದುರಾಸೆ ಹಾಗೂ ದುರುದ್ದೇಶದಿಂದ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಗೆ ದೂಡಲಾಗುತ್ತಿದೆ, ಇದು ಅಪರಾಧ ಎಂದರು.

ಬಾಲಕಾರ್ಮಿಕ ಪದ್ದತಿ ನಿಯಂತ್ರಣಕ್ಕಾಗಿ ಭಾರತ ಸರ್ಕಾರ 1986ರಲ್ಲಿ ಕಾಯ್ದೆ ಜಾರಿಗೊಳಿಸಿದೆ. ಕಾರ್ಖಾನೆ ಹಾಗೂ ಸ್ಫೋಟಕ ವಸ್ತುಗಳ ತಯಾರಿಕಾ ಉದ್ದಿಮೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ನಿಷಿದ್ಧ. ಸ್ವತಂತ್ರವಾಗಿ ಜೀವಿಸುವ ಹಕ್ಕನ್ನು ಮಕ್ಕಳಿಂದ ಬಲವಂತವಾಗಿ ಕಿತ್ತುಕೊಳ್ಳದೆ ಅವರಿಗೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಒದಗಿಸಬೇಕು. ಅವರಿಗೆ ಪುನರ್ವಸತಿ ಕಲ್ಪಿಸಿ ಕಡ್ಡಾಯ ಶಿಕ್ಷಣ ನೀಡಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ 2017ರ ಸಾಲಿನಲ್ಲಿ ಬಾಲಕಾರ್ಮಿಕ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಜಿಲ್ಲೆಯ ಸಿಎಸಿಎಲ್‌ಕೆ ಸಂಸ್ಥೆಯ ಜಿಲ್ಲಾ ಸಂಚಾಲಕ ಬಸವರಾಜು ಹಾಗೂ ಬಾಲಕಾರ್ಮಿಕರ ಪುನರ್ವಸತಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡಿ ಇಂದು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  

ಕಾರ್ಯಕ್ರಮದಲ್ಲಿ ಬಾಲ ನ್ಯಾಯಮಂಡಳಿ ಸದಸ್ಯ ಟಿ.ಜೆ. ಸುರೇಶ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ವನಜಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ‌ ಸತೀಶ್‌, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಇಂದುಶೇಖರ್‌, ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಸೋಮಶೇಖರಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸಿ.ಎನ್‌. ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.