ಗಡಿ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ: ಕಾರ್ಯಕರ್ತರಿಂದ ಧರಣಿ


Team Udayavani, May 28, 2023, 3:23 PM IST

ಗಡಿ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ: ಕಾರ್ಯಕರ್ತರಿಂದ ಧರಣಿ

ಯಳಂದೂರು: ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ 4 ಸ್ಥಾನಗಳ ಪೈಕಿ 3 ರಲ್ಲಿ ಜಯಗಳಿಸಿದೆ. ಆದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅನ್ಯಾಯವಾಗಿದ್ದು ಇಲ್ಲಿನ ಜನರ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ ಎಂದು ಪಟ್ಟಣದ ಕಾಂಗ್ರೆಸ್‌ ಕಚೇರಿ ಬಳಿ ಶನಿವಾರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಮಹೇಶ್‌ ಮಾತನಾಡಿ, ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷ ಜಯಗಳಿಸಿದೆ. ಇಲ್ಲಿನ ಅಭ್ಯರ್ಥಿಗಳಲ್ಲಿ ನಾಲ್ಕು ಬಾರಿ ಜಯಗಳಿಸಿರುವ ಚಾಮರಾಜನಗರದ ಶಾಸಕ ಸಿ. ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನವನ್ನು ನೀಡುವ ಭರವಸೆ ಇತ್ತು. ಆದರೆ ಇವರಿಗೆ ಉಪಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಕೊಳ್ಳೇಗಾಲದಲ್ಲಿ ಎ.ಆರ್‌. ಕೃಷ್ಣಮೂರ್ತಿ ಹಾಗೂ ಗುಂಡ್ಲುಪೇಟೆಯಲ್ಲಿ ಗಣೇಶ್‌ ಪ್ರಸಾದ್‌ ಕೂಡ ಜಯಗಳಿಸಿದ್ದಾರೆ. ಇವರನ್ನೂ ಕಡೆಗಣಿಸಲಾಗಿದೆ ಎಂದರು.

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿ, ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮುದಾಯದ ಪ್ರಬಲ ನಾಯಕರಾಗಿದ್ದು, ರಾಜ್ಯದ ಏಕೈಕ ಶಾಸಕರಾಗಿದ್ದಾರೆ. ಈ ಹಿಂದೆ ಪುಟ್ಟರಂಗಶೆಟ್ಟಿ ಸಚಿವರಾಗಿದ್ದರು. ಈ ಬಾರಿಯೂ ಇವರಿಗೆ ಸಚಿವ ಸ್ಥಾನ ಲಭಿಸುವ ಭರವಸೆ ಇತ್ತು. ಆದರೆ ಇದು ಹುಸಿಯಾಗಿದ್ದು ಈ ಬಗ್ಗೆ ಸಂಬಂಧಪಟ್ಟವರು ಕ್ರಮ ವಹಿಸಬೇಕು ಎಂದರು.

ಪಪಂ ಸದಸ್ಯ ವೈ.ಜಿ. ರಂಗನಾಥ ಮಾತನಾಡಿ, ಸಿ.ಪುಟ್ಟರಂಗಶೆಟ್ಟಿರವರ ಹೆಸರು ಸಚಿವರ ಅಂತಿಮ ಪಟ್ಟಿಯಲ್ಲಿತ್ತು. ಆದರೆ ಮಧ್ಯರಾತ್ರಿ ಏಕಾಏಕಿ ಇವರ ಹೆಸರು ತೆಗೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರಿಗೆ ಸಚಿವ ಸ್ಥಾನವನ್ನು ನೀಡಲು ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ರಮ ವಹಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಮತ್ತಷ್ಟು ತೀವೃಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಿಜ್ವಾನ್‌, ಮಾರನಾಯಕ, ಲಿಂಗರಾಜು, ಮಲ್ಲು, ರಾಜಶೇಖರ್‌, ಗ್ರಾಪಂ ಸದಸ್ಯ ಸ್ವಾಮಿ, ಪುಟ್ಟ, ಕೆ. ವೆಂಕಟೇಶ್‌, ಎ. ವೆಂಕಟೇಶ್‌, ಇಬ್ರಾಹಿಂ, ಮಹದೇವ ಶೆಟ್ಟಿ, ಗೋವಿಂದಶೆಟ್ಟಿ, ಕುಮಾರ, ರಂಗಸ್ವಾಮಿ, ನಿಂಗರಾಜು, ರಾಜಶೇಖರ್‌, ಗೋವಿಂದನಾಯಕ, ಕಾಮಶೆಟ್ಟಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.