ಬಿ.ಪಿ.ನಟರಾಜಮೂರ್ತಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಆಗ್ರಹ


Team Udayavani, Mar 19, 2023, 1:17 PM IST

tdy-14

ಚಾಮರಾಜನಗರ: ಮೌಲ್ಯಾಧಾರಿತ ರಾಜಕೀಯ ಇತಿಹಾಸ, ಹಿನ್ನೆಲೆ ಹೊಂದಿರುವ ಪುಟ್ಟಸ್ವಾಮಿ ಅವರ ಪುತ್ರ ಡಾ.ಬಿ.ಪಿ.ನಟರಾಜಮೂರ್ತಿ ಅವರಿಗೆ ಈ ಬಾರಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಬೆಂಗಳೂರಿಗೆ ನಿಯೋಗ ಹೋಗಿ ಕಾಂಗ್ರೆಸ್‌ ವರಿಷ್ಠರಿಗೆ ಮನವಿ ಸಲ್ಲಿಸಲು ಅಭಿಮಾನಿಗಳ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಮಾಜಿ ಶಾಸಕ ದಿ.ಎಸ್‌.ಪುಟ್ಟಸ್ವಾಮಿ ಅಭಿಮಾನಿಗಳ ಬಳಗ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಮಾಜಿ ಶಾಸಕ ಎಸ್‌.ಪುಟ್ಟಸ್ವಾಮಿ ಅವರ ಪುತ್ರ ಬಿ ಪಿ.ನಟರಾಜಮೂರ್ತಿ ಅವರು ಮತ್ತೆ ಮೌಲ್ಯಾಧಾರಿತ ರಾಜಕಾರಣ ಪ್ರವೇಶಿಸಬೇಕು ಎಂದು ಅಭಿಮಾನಿಗಳು ಮತ್ತು ಮುಖಂಡರು ಒತ್ತಾಯಿಸಿದರು. ಯುಗಾದಿಯ ಬಳಿಕ ಕಾಂಗ್ರೆಸ್‌ ವರಿಷ್ಠರ ಬಳಿಗೆ ನಿಯೋಗ ಹೋಗಲು ಸಭೆ ನಿರ್ಧರಿಸಿತು.

ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಇದಕ್ಕೂ ಮೊದಲು, ಮಾಜಿ ಶಾಸಕ ಎಸ್‌.ಪುಟ್ಟಸ್ವಾಮಿ ಅವರ ಪುತ್ರ ಬಿ.ಪಿ. ನಟರಾಜಮೂರ್ತಿ ಮಾತನಾಡಿ, ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದೆ. ಇದರಿಂದ ನಮ್ಮ ತಂದೆಯ ಅಭಿಮಾನಿಗಳಿಗೆ ತೊಂದರೆಯಾಗಿದೆ. ಅದಕ್ಕಾಗಿ ಈ ಮೂಲಕ ಕ್ಷಮೆಯಾಚಿಸುತ್ತೇನೆ. ನಮ್ಮ ಕುಟುಂಬದ ಅಭಿಮಾನಿ ಗಳಿಗೆ, ಕಾರ್ಯಕರ್ತರಿಗೆ ಕೆಲಸಗಳನ್ನು ಮಾಡಿಸಿಕೊಡಲು ಆಗಲಿಲ್ಲ ಎಂದು ಮನನೊಂದು ದೂರ ಉಳಿದಿದ್ದೆ. ಮುಂದಿನ ದಿನಗಳಲ್ಲಿ ಅಭಿಮಾನಿಗಳು ತೆಗೆದು ಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ಸಭೆಯಲ್ಲಿ ಮಾತನಾಡಿದ ಅಭಿಮಾನಿ ಗಳು, ಮುಖಂಡರು, ಚಾನಗರ ಕ್ಷೇತ್ರದ ಉದ್ಧಾರಕ್ಕಾಗಿ ಚಿಂತನೆ ಮಾಡಿದವರು ದಿ. ಪುಟ್ಟಸ್ವಾಮಿ ಯವರು, ಇಂದಿನ ರಾಜಕೀಯ ಕಲುಷಿತವಾಗಿದೆ. ಇಂದಿನ ರಾಜಕಾರಣಕ್ಕೆ ಒಳ್ಳೆಯವರು, ಯೋಗ್ಯರು ಬರಬೇಕಿದ್ದು, ಪುಟ್ಟಸ್ವಾಮಿಯವರ ಕುಟುಂಬ ನಾಯಕನ ಸ್ಥಾನವನ್ನು ತುಂಬಬೇಕು ಎಂದು ಮನವಿ ಮಾಡಿದರು.

ಸಕ್ರಿಯ ರಾಜಕೀಯದಲ್ಲಿರಬೇಕಿತ್ತು: ಪುಟ್ಟಸ್ವಾಮಿ ಯವರ ಕುಟುಂಬ ಇಷ್ಟು ದಿನ ಸಕ್ರೀಯ ರಾಜಕಾರಣದಿಂದ ದೂರ ಇದ್ದು, ಅಭಿಮಾನಿಗಳನ್ನು ಅತಂತ್ರ ಮಾಡಿತ್ತು. ಅವರ ಪುತ್ರಿ ಡಾ.ಬಿ.ಪಿ. ಮಂಜುಳಾ ಅವರಿಗೆ ಟಿಕೆಟ್‌ ನೀಡಿ ಸೋತಾಗ ಸೋಲು ಗೆಲುವುಗಳನ್ನು ಸಮಾನಾಗಿ ಸ್ವೀಕರಿಸಿ. ಸಕ್ರಿ ಯ ರಾಜಕಾರಣದಲ್ಲಿ ಇರಬೇಕಾಗಿತ್ತು, ರಾಜಕಾರಣದಿಂದ ದೂರ ಉಳಿದಿದ್ದು ಸರಿಯಲ್ಲ ಎಂದರು.

ಪಕ್ಷ ಕಟ್ಟಿದ್ದವರು: ಪುಟ್ಟಸ್ವಾಮಿ ಅಭಿಮಾನಿಗಳಾದ ನಾಗಬಸವಣ್ಣ ಮಾತನಾಡಿ, ಕಾಂಗ್ರೆಸ್‌ ಪಕ್ಷವನ್ನು ಕಟ್ಟಿದ್ದ ಮಾಜಿ ಶಾಸಕರಾದ ಪುಟ್ಟಸ್ವಾಮಿ ಅವರ ಪುತ್ರ ಬಿ.ನಟರಾಜಮೂರ್ತಿಗೆ ಈ ಬಾರಿಯ ಚುನಾವಣೆ ಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ ಎಂದು ಕಾಂಗ್ರೆಸ್‌ ವರಿಷ್ಠರಲ್ಲಿ ಒತ್ತಾಯಿಸಿದರು.

ಪುಟ್ಟಸ್ವಾಮಿ ಅಭಿಮಾನಿಗಳಾದ ಕಾಡಹಳ್ಳಿ ಮಹದೇವಪ್ಪ, ಪಿ.ನಾಗ ಬಸವಣ್ಣ, ಸುಂದ್ರಪ್ಪ, ಯು.ಎಂ.ಪ್ರಭುಸ್ವಾಮಿ, ಗುರುಪಾದಪ್ಪ, ವಿ.ಶ್ರೀನಿವಾಸಪ್ರಸಾದ್‌, ವೀರೇಶ್‌, ಕೊಂಗಳಪ್ಪ, ನಾರಾಯಣನಾಯಕ, ಪರಶಿವ ಮೂರ್ತಿ, ಚಾಮುಲ್‌ ನಿರ್ದೇಶಕ ಸದಾಶಿವ ಮೂರ್ತಿ, ಅಂಕಶೆಟ್ಟಿ ವಕೀಲ ಶಿವಾನಂದಸ್ವಾಮಿ, ಕೊಂಗಳಪ್ಪ, ನಾಗರಾಜು, ಕಾಂತರಾಜು ಮಾತನಾಡಿದರು.ಗುರುಸ್ವಾಮಿ, ಜಯಶಂಕರ್‌, ಉಮ್ಮತ್ತೂರು ಬಸವರಾಜು ಭಾಗವಹಿಸಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.