ತಾಲೂಕಿನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ: ಗಣೇಶ್
Team Udayavani, Nov 24, 2020, 3:31 PM IST
ಗುಂಡ್ಲುಪೇಟೆ: ಶಾಸಕ ಸಿ.ಎಸ್.ನಿರಂಜನಕುಮಾರ್ ತಮ್ಮ ವೈಯುಕ್ತಿಕ ಅಭಿವೃದ್ಧಿಯಲ್ಲಿ ತೊಡಗಿ ಕ್ಷೇತ್ರದ ಅಭಿವೃದ್ಧಿ ಮರೆತಿದ್ದಾರೆ ಎಂದುಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಟೀಕಿಸಿದರು.
ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಹಿಂದೆಕ್ಷೇತ್ರವನ್ನು ಮಾದರಿಯನ್ನಾಗಿಸಲು ಮಾಜಿ ಸಚಿವ ದಿ.ಮಹದೇವಪ್ರಸಾದ್ ಹಾಗೂ ಮಾಜಿ ಸಚಿವೆ ಡಾ.ಗೀತಾ ಶ್ರಮಿಸಿದ್ದರು. ಆದರೆ, ಇದೀಗಅಧಿಕಾರಿಗಳ ಮೂಲಕ ಹಣ ವಸೂಲಿಗೆ ಮುಂದಾಗಿರುವ ಶಾಸಕರು ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ್ದಾರೆ. ತಾಲೂಕಿನ ಉದ್ದೇಶಿತ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಳಂಬವಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಹಣ ಕೊಡದೆ ಯಾವುದೇ ಕೆಲಸಗಳೂ ಆಗುತ್ತಿಲ್ಲ ಎಂದು ಸಾರ್ವಜನಿಕರುಬೇಸತ್ತಿದ್ದಾರೆ. ಇಂತಹವರಿಗೆ ಕ್ಷೇತ್ರದ ಜನತೆ ಮುಂಬರುವಚುನಾವಣೆಯಲ್ಲಿ ಜನತೆ ತಕ್ಕ ಪಾಠಕಲಿಸಲಿದ್ದಾರೆ ಎಂದರು.
ಸಭೆಯಲ್ಲಿ ಚಾಮುಲ್ ಅಧ್ಯಕ್ಷ ಎಚ್.ಎಂ.ನಂಜುಂಡ ಪ್ರಸಾದ್, ಜಿಪಂ ಸದಸ್ಯ ಪಿ.ಚನ್ನಪ್ಪ, ತಾಪಂ ಸದಸ್ಯೆ ಕಲಾವತಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಹಾಪ್ಕಾಮ್ಸ್ ಮಾಜಿ ಜಿಲ್ಲಾಧ್ಯಕ್ಷ ಶ್ರೀಕಂಠಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿ ರಾಜು, ಪುರಸಭೆ ಮಾಜಿ ಅಧ್ಯಕ್ಷ ಎಲ್.ಸುರೇಶ್, ಮುಖಂಡ ಮಂಚಹಳ್ಳಿ ಲೋಕೇಶ್ ಸೇರಿದಂತೆ ವಿವಿಧ ಘಟಕಗಳ ಪದಾಧಕಾರಿಗಳು ಮತ್ತುಕಾರ್ಯಕರ್ತರು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ