ಕೆರೆ, ಕಟ್ಟೆ, ಕಲ್ಯಾಣಿಗಳ ಸಂರಕ್ಷಣೆ ಅತ್ಯಗತ್ಯ


Team Udayavani, Apr 24, 2019, 3:08 AM IST

kere-katte

ಚಾಮರಾಜನಗರ: ಸಾಂಪ್ರದಾಯಿಕ ನೀರಿನ ವ್ಯವಸ್ಥೆಗಳಾದ ಕೆರೆ, ಬಾವಿ, ಕಲ್ಯಾಣಿ ಕುಂಟೆ, ಗೋಕಟ್ಟೆ ಕಟ್ಟೆಗಳು ಬಹಳ ವಿಶೇಷವಾದ ಜಲ ಮೂಲಗಳಾಗಿದ್ದು ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಬೇಕಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ, ಗ್ರಾಮೀಣಾಭಿವೃದ್ದಿ, ಪಂಚಾಯತ್‌ರಾಜ್‌ ಇಲಾಖೆ, ಜಿಪಂ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಪ್ರದಾಯಿಕ ನೀರು ಸಂಗ್ರಹಣಾ ವ್ಯವಸ್ಥೆಗಳ ಪುನಶ್ಚೇತನ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬೇಸರದ ಸಂಗತಿ: ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ನೀರಿನ ಮೂಲಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ನೀರಿನ ಮೂಲಗಳ ಪ್ರದೇಶಗಳು ಅಲ್ಲಲ್ಲಿ ಒತ್ತುವರಿಯಾಗುತ್ತಿರುವುದು ಸಹ ಕಂಡುಬರುತ್ತಿವೆ. ಸಾಂಪ್ರದಾಯಿಕ ನೀರಿನ ಮೂಲಗಳನ್ನು ಅತ್ಯಗತ್ಯವಾಗಿ ಉಳಿಸಿಕೊಳ್ಳಬೇಕಿದೆ ಎಂದರು.

ಪೂರ್ವಜರಿಗೆ ವೈಜ್ಞಾನಿಕ ತಿಳಿವಳಿ ಇತ್ತು: ಭಾರತ ವಿಶೇಷ ಪರಂಪರೆಯುಳ್ಳ ದೇಶ. ನಮ್ಮ ಪೂರ್ವಿಕರು ಆ ಕಾಲದಲ್ಲೇ ಸಾಂಪ್ರದಾಯಿಕ ನೀರು ಸಂಗ್ರಹಣಾ ವ್ಯವಸ್ಥೆಗಳಾದ ಕೆರೆ, ಕಲ್ಯಾಣಿ, ಕುಂಟೆ, ಗೋಕಟ್ಟೆ, ಕಟ್ಟೆಗಳನ್ನು ನಿರ್ಮಾಣ ಮಾಡುವ ಮೂಲಕ ದಿನನಿತ್ಯದ ದೈನಂದಿನ ಚಟುವಟಿಕೆಗಳಿಗೆ ಬಳಸುತ್ತಿದ್ದರು. ಅವರು ಆ ಕಾಲದಲ್ಲೇ ಎಷ್ಟು ವೈಜ್ಞಾನಿಕವಾದ ತಿಳಿವಳಿಕೆ ಹೊಂದಿದ್ದರು ಎಂಬುದಕ್ಕೆ ಇದು ನಿದರ್ಶನವಾಗಿ ಎಂದು ಅಭಿಪ್ರಾಯಪಟ್ಟರು.

ನೀರಿನ ಸಂಗ್ರಹಣೆ ಮುಖ್ಯ: ಇಂದು ಮಳೆಯ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ. ಹರಿದು ಹೋಗುವ ನೀರನ್ನು ನಿಲ್ಲಿಸಿ, ಅದನ್ನು ಬಳಕೆ ಮಾಡಬೇಕಿದೆ. ಇದರಿಂದ ಅಂತರ್ಜಲ ಕೂಡ ಹೆಚ್ಚಲಿದೆ. ಸಾಂಪ್ರದಾಯಿಕ ನೀರಿ ಮೂಲಗಳನ್ನು ಉಳಿಸಿ ಬೆಳೆಸಬೇಕಿದೆ. ಕಲ್ಯಾಣಿಗಳು ಅಂತರ್ಜಲ ಮೂಲಗಳಾಗಿವೆ. ಮಳೆಗಾಲದಲ್ಲಿ ನೀರಿನ ಸಂಗ್ರಹಣೆ ಬಹಳ ಮುಖ್ಯವಾದ್ದರಿಂದ ಸಾಂಪ್ರದಾಯಿಕ ನೀರಿನ ಮೂಲಗಳನ್ನು ಪುನಶ್ಚೇತನ ಮಾಡಬೇಕು ಎಂದರು.

ಕಾಲುವೆ ನಿರ್ಮಾಣ: ಮೈಸೂರು ರಾಜರ ಕಾಲದಲ್ಲಿ ದಿವಾನರಾಗಿದ್ದ ದಿವಾನ್‌ ಪೂರ್ಣಯ್ಯ ಅವರ ಅವಧಿಯಲ್ಲಿ ಯಳಂದೂರು ಗ್ರಾಮದ ಸುತ್ತ ಮುತ್ತಲೂ ಅನೇಕ ಕೆರೆ, ಕಟ್ಟೆ, ಕಾಲುವೆಗಳನ್ನು ನಿರ್ಮಾಣ ಮಾಡಲಾಗಿದೆ. ನೀರಾವರಿ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ಮರುಪೂರಣ ಸೇರಿದಂತೆ ಸಮುದಾಯದ ಎಲ್ಲಾ ಅಗತ್ಯತೆಗಳನ್ನು ಇದರಿಂದ ನಿರ್ವಹಿಸಲಾಗುತ್ತಿದೆ ಎಂದರು.

ನೀರಿನ ಸಂರಕ್ಷಣೆ ನಮ್ಮ ಕರ್ತವ್ಯ: ಇತ್ತೀಚಿನ ದಿನಗಳಲ್ಲಿ ಸಂಪ್ರಾದಾಯಿಕ ನೀರಿನ ವ್ಯವಸ್ಥೆಗಳು ನಶಿಸಿ ಹೋಗುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಇಂತಹ ನೀರಿನ ಮೂಲಗಳನ್ನು ಉಳಿಸಿಕೊಂಡು ದುರಸ್ತಿ ಮಾಡುವ ಮೂಲಕ ಮುಂದಿನ ಪೀಳಿಗೆಗೆ ನೀರಿನ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ತೋಟಗಾರಿಕೆ, ಕೃಷಿ, ಅರಣ್ಯ, ಶಿಕ್ಷಣ ಇಲಾಖೆ, ನರೇಗಾ ಯೋಜನೆ, ಗ್ರಾಮ ಪಂಚಾಯಿತಿ ಸಂಪನ್ಮೂಲಗಳನ್ನು ಬಳಸಿ ನೀರಿನ ಸಂಗ್ರಹಣೆ ಹಾಗೂ ಸಂರಕ್ಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಲ ಮೂಲ ಉಳಿಸಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮುಖ್ಯ ವೈಜ್ಞಾನಿಕ ಅಧಿಕಾರಿ ಎ.ಆರ್‌. ಶಶಿಕುಮಾರ್‌ ಮಾತನಾಡಿ, ಮಳೆ ನೀರು ಜಲದ ಮೂಲವಾಗಿದೆ. ಕಲ್ಯಾಣಿ, ಕೆರೆ, ಕುಂಟೆ, ಗೋಕಟ್ಟೆ, ಕಟ್ಟೆಗಳಲ್ಲಿ ಮಳೆಗಾಲದಲ್ಲಿ ಹೆಚ್ಚಿನ ನೀರು ಶೇಖರಣೆಯಾಗುತ್ತದೆ. ಹಾಗಾಗಿ ಅವುಗಳನ್ನು ನಾವು ಸಂರಕ್ಷಿಸಬೇಕು ಎಂದರು.

ಮಳೆ ನೀರು ಕೊಯ್ಲು ಪದ್ಧತಿ: ಸ್ವಾಭಾವಿಕವಾಗಿ ಮತ್ತು ಸುಲಭವಾಗಿ ನೀರನ್ನು ಪಡೆಯಲು ಮಳೆ ನೀರಿನ ಸಂರಕ್ಷಣೆ ಅತಿ ಮುಖ್ಯ. ಮಳೆ ನೀರನ್ನು ಸಂರಕ್ಷಣೆ ಮಾಡಿ ಬಳಸುವುದರಿಂದ ನೀರಿನ ಸಮಸ್ಯೆಯನ್ನು ನಾವು ತಡೆಯಬಹುದು. ಮಳೆಗಾಲದಲ್ಲಿ ಮನೆ ಮೇಲಿನ ಮೇಲ್ಛಾವಣಿಗೆ ಬಿದ್ದ ನೀರನ್ನು, ಮಳೆ ನೀರು ಕೊಯ್ಲು ಪದ್ಧತಿಯ ಮೂಲಕ ಶೇಖರಿಸಿ ಉಪಯೋಗಿಸಿದರೆ ನೀರಿನ ಸಮಸ್ಯೆ ನೀಗಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿಯೊಂದು ಜಿಲ್ಲೆಗಳಲ್ಲಿ ಮಳೆ ನೀರು ಸಂರಕ್ಷಣೆ ಮಾಡುವ ವಿಧಾನವನ್ನು ಅನುಸರಿಸಬೇಕು. ಈ ವಿಧಾನ ಕುರಿತು ಮಾಹಿತಿಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಆರ್‌.ಡಬ್ಲ್ಯು.ಎಚ್‌. ವೆಬ್‌ಸೈಟ್‌ ಲಿಂಕ್‌ನಲ್ಲಿ ದೊರೆಯುತ್ತದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಪ್ರಧಾನ ವೈಜ್ಞಾನಿಕ ಅಧಿಕಾರಿ‌ ಡಾ. ಯು.ಟಿ ವಿಜಯ್‌ ಅವರು ಮಾತನಾಡಿ, ಸಾಂಪ್ರಾದಾಯಿಕ ನೀರು ಸಂಗ್ರಹಣಾ ವ್ಯವಸ್ಥೆಗಳ ಸ್ಥಿತಿಗತಿ ಅಧ್ಯಯನ ಮತ್ತು ಅವುಗಳ ಪುನರುಜ್ಜೀವನದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹನುಮನರಸಯ್ಯ ಇತರರು ಇದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.