ಸಾಧನೆಗಾಗಿ ನಿರಂತರ ಚಿಂತನೆ ಅಗತ್ಯ


Team Udayavani, Nov 24, 2019, 3:00 AM IST

sadhanegagi

ಚಾಮರಾಜನಗರ: ವಿದ್ಯಾರ್ಥಿಗಳು ಸಾಧನೆ ಕುರಿತು ನಿರಂತರ ಚಿಂತನೆ ಇಟ್ಟುಕೊಂಡು ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಸಲಹೆ ನೀಡಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಮಾತಂಗ ಪರಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾತಂಗ ಸಮಾನ ಮನಸ್ಕರ ಪ್ರಗತಿಪರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ಸಾಂಸ್ಕೃತಿಕ ಶಿಬಿರ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್‌ ಸಾಧನೆ ನಮಗೆ ಸ್ಫೂರ್ತಿ: ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬಾಲ್ಯದಲ್ಲಿ ಸಾಮಾಜಿಕ ಅಪಮಾನ ಮೆಟ್ಟಿನಿಂತು ವಿಶ್ವಮಟ್ಟದ ಶ್ರೇಷ್ಠ ವ್ಯಕ್ತಿಯಾಗಿ ಬೆಳೆದರು. ಅವರ ಶ್ರೀರಕ್ಷೆ ನಮಗೆ ಇದೆ. ಅವರೇ ನಮಗೆ ಬೆಳಕಾಗಿದ್ದಾರೆ. ಅವರನ್ನು ಸ್ಫೂರ್ತಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಓದಿ ಸಾಧನೆ ಮಾಡಬೇಕು ಎಂದು ಹೇಳಿದರು.

ಋಣ ತೀರಿಸುವ ಕೆಲಸ ಮಾಡಿ: ಮಾತಂಗ ಪರಿವಾರ ಸಮುದಾಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಂಸ್ಕೃತಿಕ ಮಾರ್ಗದರ್ಶ ಕೊಡಲು ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಶತಶತಮಾನಗಳಿಂದ ದೌರ್ಜನ್ಯಕ್ಕೊಳಗಾಗಿ ಕಣ್ಣೀರಿಟ್ಟು ಹೋರಾಟ ನಡೆಸಿದ್ದರಿಂದ ಮೀಸಲಾತಿ ದೊರೆತಿದೆ. ಅಂಬೇಡ್ಕರ್‌ ಅವರು ಸಂವಿಧಾನ ಬದ್ಧವಾಗಿ ನೀಡಿರುವ ಸೌಲಭ್ಯಗಳಿಂದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರಿ ಅಧಿಕಾರಿಗಳು, ಅತ್ಯುತ್ತಮ ವ್ಯಕ್ತಿಗಳಾದ ಮೇಲೆ ಸಮಾಜದ ಹಿತದೃಷ್ಠಿಯಿಂದ ಕೆಲಸ ಮಾಡುವ ಮನಸ್ಸು ಬೆಳಸಿಕೊಳ್ಳಬೇಕು . ಅ ಮೂಲಕ ಅಂಬೇಡ್ಕರ್‌ ಅವರ ಋಣತೀರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಕೆಟ್ಟ ಪರಿಸ್ಥಿತಿ ತೊಲಗಲಿ: ಜಿಲ್ಲೆಯಲ್ಲಿ ಇನ್ನೂ ಅಸ್ಪೃಶ್ಯತೆ ಆಚರಣೆಯಲ್ಲಿದೆ. ಅನೇಕ ದೇವಾಲಯಗಳಲ್ಲಿ ದಲಿತರಿಗೆ ಪ್ರವೇಶವಿಲ್ಲದಿರುವುದು ಕಾಣಿಸುತ್ತದೆ. ದೇವಾಲಯ ಪ್ರವೇಶ ಸಂದರ್ಭಗಳಲ್ಲಿ ದೌರ್ಜನ್ಯ ನಡೆದಿರುವ ನಿದರ್ಶನಗಳಿವೆ. ಇಂತಹ ಕೆಟ್ಟ ಪರಿಸ್ಥಿತಿ ತೊಲಗಬೇಕಿದೆ. ನಿಮಗೆ ಮಾರ್ಗದರ್ಶನ ನೀಡಲು ನಾವು ಸಿದ್ಧರಿದ್ದೇವೆ. ವಿದ್ಯಾರ್ಥಿಗಳು ನಮ್ಮ ಕಚೇರಿಗೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳು ಕುರಿತು ಮಾರ್ಗದರ್ಶನವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಶಿಕ್ಷಣದ ಗುಣಮಟ್ಟ ಕುಸಿತ: ಮಾತಂಗ ಪರಿವಾರ ಕಾರ್ಯಾಧ್ಯಕ್ಷ ಅರಕಲವಾಡಿ ನಾಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ತಳವರ್ಗದ ಸಮುದಾಯಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳುವುದು ದುಸ್ತರವಾಗಿದೆ. ವಿದ್ಯಾರ್ಥಿಗಳ ನಿರಂತರ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಮಾಡುವ ಉದ್ದೇಶದಿಂದ ಶೈಕ್ಷಣಿಕ, ಸಾಂಸ್ಕೃತಿಕ ಕುರಿತು ಅರಿವು ಮೂಡಿಸುವ ಸಲುವಾಗಿ ಮಾತಂಗ ಪರಿವಾರದ ವತಿಯಿಂದ 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಕೆ.ಸುರೇಶ್‌, ರಾಜ್ಯ ಲೆಕ್ಕಪತ್ರ ಇಲಾಖೆ ಜಂಟಿ ನಿರ್ದೇಶಕ ಡಾ.ಪಿ.ಎಲ್‌.ವೆಂಕಟೇಶ್‌ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ತಿರುಮಲೇಶ್‌, ಸಿಟಿಒ ಬಸವರಾಜು, ನಗರಸಭಾ ಸದಸ್ಯ ಮಹದೇವಯ್ಯ, ಮಾತಂಗ ಪರಿವಾರ ರಾಜ್ಯಾಧ್ಯಕ್ಷ ಜಿ.ಜಿ.ಬಸಪ್ಪ, ಉಪಾಧ್ಯಕ್ಷ ಡಾ.ಮುದ್ದಬಸವಯ್ಯ, ಖಜಾಂಚಿ ದೊಡ್ಡರಂಗಯ್ಯ ಇತರರು ಹಾಜರಿದ್ದರು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಇಲ್ಲ. ಅವರಲ್ಲಿ ಮಾನವೀಯತೆ ಕಡಿಮೆಯಾಗುತ್ತಿದೆ. ಇಂತಹ ಸಮಯದಲ್ಲಿ ಏನು ಮಾಡುವುದು ಎಂಬ ಆತಂಕ ಸೃಷ್ಠಿಯಾಗಿದೆ. ಆದರಿಂದ ಪಿಯುಸಿ ವಿದ್ಯಾರ್ಥಿಗಳು ಪದವಿಯ ತನಕ ಎಲ್ಲೂ ದಾರಿ ತಪ್ಪದೇ ಎಚ್ಚರಿಕೆಯಿಂದ ಓದುವ ಪ್ರವೃತ್ತಿ ಬೆಳಸಿಕೊಳ್ಳಬೇಕು.
-ಮಲ್ಲಿಕಾರ್ಜುನ ಸ್ವಾಮಿ, ಮೈಸೂರು ರಂಗಯಣ ಜಂಟಿ ನಿರ್ದೇಶಕ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.