ತಾಲೂಕು ಕಚೇರಿ ಮುಂದೆ ಅವೈಜ್ಞಾನಿಕ ತಂತಿ ಬೇಲಿ ನಿರ್ಮಾಣ

ಪಾರ್ಕಿಂಗ್‌ ಮಾಡಲು ವಾಹನ ಸವಾರರ ಪರದಾಟ

Team Udayavani, Aug 20, 2021, 6:58 PM IST

ತಾಲೂಕು ಕಚೇರಿ ಮುಂದೆ ಅವೈಜ್ಞಾನಿಕ ತಂತಿ ಬೇಲಿ ನಿರ್ಮಾಣ

ಗುಂಡ್ಲುಪೇಟೆ: ಪಟ್ಟಣದ ಜನನಿಬಿಡ ತಾಲೂಕು ಕಚೇರಿ ಮುಂದೆ ಅವೈಜ್ಞಾನಿಕವಾಗಿ ತಂತಿ ಬೇಲಿ ನಿರ್ಮಾಣದಿಂದ ಸಾರ್ವಜನಿಕರಿಗೆ
ಕಿರಿಕಿರಿ ಉಂಟಾಗಿದೆ.

ಒಂದೇ ಸೂರಿನಡಿ ತಹಶೀಲ್ದಾರ್‌ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪ ನೋಂದಣಿ ಕಚೇರಿ, ಆಹಾರ ಇಲಾಖೆ, ಸರ್ವೆ ಇಲಾಖೆ, ಅಬಕಾರಿ ಇಲಾಖೆ, ಟ್ರಜರಿ ಕಚೇರಿ ಮತ್ತಿತರ ಶಾಖೆಗಳು ಬರುತ್ತವೆ. ಇಲ್ಲಿಗೆ ನಿತ್ಯ ವಿವಿಧ ಕೆಲಸದ ನಿಮಿತ್ತ ನೂರಾರು ಜನರು ಬಂದು ಹೋಗುತ್ತಾರೆ. ಅಧಿಕ ಮಂದಿ ಬೈಕ್‌ಗಳಲ್ಲಿ ಬಂದು ತಹಶೀಲ್ದಾರ್‌ ಕಚೇರಿ ಇಕ್ಕೆಲಗಳಲ್ಲಿ ನಿಲ್ಲಿಸುವು ದರಿಂದ ಓಡಾಡಲು ತೊಂದರೆಯಾಗಿದೆ. ಜೊತೆಗೆ ಪೊಲೀಸ್‌ ವಸತಿ ಗೃಹಗಳಿಗೆ ಈ ಮೂಲಕವೇ ತೆರಳಬೇಕಾಗಿ ರುವ ಹಿನ್ನೆಲೆ ಸಮಸ್ಯೆ ಮತ್ತಷ್ಟು ಹೆಚ್ಚಿದೆ.

ಅಡ್ಡಾದಿಡ್ಡಿ ಪಾರ್ಕಿಂಗ್‌:ನಿತ್ಯ ತಾಲೂಕು ಕಚೇರಿ ಆಗಮಿಸುವ ಅಧಿಕಾರಿ ವರ್ಗದವರು ಸೇರಿದಂತೆ ಸಾರ್ವಜನಿಕರು ಬೈಕ್‌, ಕಾರುಗಳಲ್ಲಿ ಬರು ತ್ತಾರೆ. ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಕಾರಣ ಎಲ್ಲೆಂದ ರಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡುತ್ತಾರೆ. ಇದರಿಂದ ಚಿಕ್ಕದಾಗಿರುವ ಪ್ರವೇಶ ದ್ವಾರಕ್ಕೆ ಸಲೀಸಾಗಿ ತೆರಳಲು ಸಮಸ್ಯೆಯಾಗುತ್ತಿದೆ. ಮಳೆ ಬಂದರೆ ನೀರು ನಿಂತು ಕೆಸರು ಗದ್ದೆಯಂತಾಗುತ್ತದೆ. ಹೀಗಾಗಿ ತಹಶೀಲ್ದಾರ್‌ ಇತ್ತ ಗಮನ ಹರಿಸಿ ವಾಹನ ಸವಾರರಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕೆಂದು ರೈತ ಮುಖಂಡ ಬಾಚಹಳ್ಳಿ ಸ್ವಾಮಿ
ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 1453 ಪ್ರಕರಣ ಪತ್ತೆ| 1408 ಸೋಂಕಿತರು ಗುಣಮುಖ

ತಂತಿಬೇಲಿ ತೆರವಿಗೆ ಒತ್ತಾಯ: ತಾಲೂಕು ಕಚೇರಿ ಒಳಗೆ ಈಗಾಗಲೇ ಸುಂದರ ಪಾರ್ಕ್‌ ನಿರ್ಮಿಸ ಲಾಗಿದೆ. ಅದಾಗ್ಯೂ ಕಚೇರಿ ಇಕ್ಕೆಲಗಳಲ್ಲಿ
ಅವೈ ಜ್ಞಾನಿಕ ತಂತಿ ಬೇಲಿ ನಿರ್ಮಿಸಿರುವುದು ಸಾರ್ವ ಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡು ತ್ತಿದೆ. ಇದನ್ನು ತೆರವುಗೊಳಿಸಿ ಜನರ ಮುಕ್ತ ಓಡಾಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಗಿರೀಶ್‌ ಲಕ್ಕೂರು ಒತ್ತಾಯಿದರು.

ಆಧಾರ್‌ ಕೇಂದ್ರದಲ್ಲಿ ಜನಸಂದಣಿ
ನಿತ್ಯ ನೂರಾರು ಮಂದಿ ಆಧಾರ್‌ಗೆ ಫೋನ್‌ ನಂಬರ್‌ ಜೋಡಣೆ,ಹೆಸರು ತಿದ್ದುಪಡಿಗೆ ಆಗಮಿಸುತ್ತಾರೆ. ದಿನಕ್ಕೆಕೆಲವೇ ಮಂದಿಗೆ ತಿದ್ದುಪಡಿ ಸೀಮಿತಗೊಳಿಸಿರುವ ಹಿನ್ನೆಲೆ ಟೋಕನ್‌ ಪಡೆಯಲು ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಟೋಕನ್‌ ಪಡೆದ ನಂತರವೂ ನೆಟ್‌ವರ್ಕ್‌ ಮತ್ತಿತರ ಸಮಸ್ಯೆಗಳು ತಲೆದೋರುವುದರಿಂದ ಒಬ್ಬ ವ್ಯಕ್ತಿಗೆ ಆಧಾರ್‌ ಮಾಡಲು ಗಂಟೆಗಟ್ಟಲೆ ಸಮಯ ಬೇಕಾಗುತ್ತಿದೆ.
ಇದರಿಂದ ಜನರು ಸಂಯಮಕಳೆದೊಕೊಳ್ಳುವಂತಾಗಿದೆ.

ಮೂಲಭೂತ ಸೌಕರ್ಯ ಕೊರತೆ
ತಾಲೂಕು ಕಚೇರಿಗೆ ಬಂದ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಸೂಕ್ತ ಆಸನಗಳ ವ್ಯವಸ್ಥೆಯಿಲ್ಲ. ಕುಡಿವ ನೀರು, ಶೌಚಾಲಯ ಸಮರ್ಪಕವಾಗಿ
ಇಲ್ಲದ ಕಾರಣ ಜನರು ಬಯಲನ್ನೇ ಅವಲಂಬಿಸಬೇಕಿದೆ. ಮಹಿಳೆಯರ ಪಾಡಂತು ಹೇಳ ತೀರದಾಗಿದೆ. ಇರುವ ಒಂದು ಶೌಚಾಲಯವು ಗಬ್ಬೆದ್ದು ನಾರುತ್ತಿವುದರಿಂದ ಜನರು ಇತ್ತ ಸುಳಿಯುತ್ತಿಲ್ಲ.

ತಾಲೂಕುಕಚೇರಿ ಆವರಣದೊಳಗೆ ಸರ್ಕಾರಿ ವಾಹನ ನಿಲುಗಡೆಗೆ ಸಾಧ್ಯವಾಗದಂತೆ ಸಾರ್ವಜನಿಕರು ಅಡ್ಡಾದಿಡ್ಡಿ ವಾಹನ ನಿಲ್ಲಿಸುತ್ತಿದ್ದರು. ಈ
ಕಾರಣದಿಂದ ತಂತಿ ಬೇಲಿ ನಿರ್ಮಿಸಲಾಗಿದೆ. ಇಕ್ಕೆಲಗಳಲ್ಲಿ ಅಡ್ಡಾದಿಡ್ಡಿಯಾಗಿ ಸವಾರರು ನಿಲ್ಲಿಸದಂತೆ ಮಾಡಲು ಪಕ್ಕದಲ್ಲಿ ಶಲ್ಟರ್‌ ನಿರ್ಮಿಸಿ
ಪಾರ್ಕಿಂಗ್‌ ವ್ಯವಸ್ಥೆಕಲ್ಪಿಸಲಾಗುವುದು.
– ರವಿಶಂಕರ್‌, ತಹಶೀಲ್ದಾರ್‌

-ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.