ಸದಸ್ಯತ್ವ ಅಭಿಯಾನದ ಯಶಸ್ಸಿಗೆ ಸಹಕರಿಸಿ


Team Udayavani, Jul 8, 2019, 3:00 AM IST

sadasyatva

ಚಾಮರಾಜನಗರ: ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಯಶಸ್ಸಿಗೆ ಎಲ್ಲ ಹಂತದ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಆರ್‌.ಮಲ್ಲಿಕಾರ್ಜುನಪ್ಪ ಹೇಳಿದರು.

ನಗರದ ನಂದಿ ಭವನದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರು ರಾಷ್ಟ್ರಮಟ್ಟದಲ್ಲಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇಡೀ ದೇಶಾದ್ಯಂತ ಬಿಜೆಪಿ ಸಂಘಟನಾ ಪರ್ವ ಆರಂಭಗೊಂಡಿದ್ದು, ಜಿಲ್ಲೆಯಲ್ಲೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಸದಸ್ಯತ್ವ ಪಡೆಯಿರಿ: ಈಗ ಚಾಲನೆಗೊಂಡಿರುವ ಸದಸ್ಯತ್ವ ಅಭಿಯಾನವು ಮುಂದಿನ ತಿಂಗಳ 11 ರಂದು ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ 1.33 ಲಕ್ಷ ಜನರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ. ಕಳೆದ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆಯಲ್ಲಿ 33 ಸಾವಿರ ಸದಸ್ಯತ್ವ ಮಾಡಲಾಗಿತ್ತು.

ಈ ಸಾಲಿನ ಸದಸ್ಯತ್ವ ಅಭಿಯಾನದಲ್ಲಿ 33 ಸಾವಿರ ಸದಸ್ಯತ್ವ ಜತೆಯಲ್ಲಿ ಮತ್ತೆ 1 ಲಕ್ಷ ಸದಸ್ಯತ್ವ ಮಾಡಿ ಒಟ್ಟು 1.33 ಲಕ್ಷ ಸದಸ್ಯತ್ವ ನೋಂದಾಯಿಸುವ ಗುರಿ ಹೊಂದಲಾಗಿದೆ. ಆದ್ದರಿಂದ ಹಳೆಯ ಸದಸ್ಯತ್ವ ಪಡೆದಿರುವವರು ಹಾಗೂ ಹೊಸ ಸದಸ್ಯತ್ವ ಪಡೆಯುವವರು 8980808080ಗೆ ಮಿಸ್‌ ಕಾಲ್‌ ಮಾಡಿ ತಮ್ಮ ವಿಳಾಸವನ್ನು ಸಂಪೂರ್ಣವಾಗಿ ಬರೆಯುವ ಮೂಲಕ ಸದಸ್ಯತ್ವ ಪಡೆದುಕೊಳ್ಳಬೇಕಿದೆ ಎಂದರು.

ಅಭಿವೃದ್ಧಿಪರ ಬಜೆಟ್‌: ಪ್ರಧಾನಿ ನರೇಂದ್ರಮೋದಿ ಅವರು ಕಳೆದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಜನಪರ ಯೋಜನೆಗಳು, ಸಾಧನೆಗಳಿಂದ 2019ರ ಲೋಕಸಭಾ ಚುನಾವಣೆಯಲ್ಲಿ 303 ಸ್ಥಾನಗಳನ್ನು ಗೆದ್ದು ಬಹುಮತದೊಂದಿಗೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಬಂದಿದೆ. ಪ್ರಧಾನಿ ನರೇಂದ್ರಮೋದಿ ಅವರು ಆರ್ಥಿಕತೆ ಸಾಧಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಅಭಿ ವೃ ದ್ಧಿಪರ ಬಜೆಟ್‌ ಮಂಡಿಸಿದ್ದಾರೆ ಎಂದು ಹೇಳಿದರು.

3 ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ: ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್‌.ಎಂ.ಬಸವಣ್ಣ ಮಾತನಾಡಿ, ಬಿಜೆಪಿ ಸಂಘಟನಾ ದೃಷ್ಟಿಯಿಂದ ಪ್ರತಿ 3 ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ನಡೆಯುತ್ತದೆ. ಚಾಮರಾಜನಗರ ಗ್ರಾಮಾಂತರ ಮಂಡಲದಲ್ಲಿ 184 ಬೂತ್‌ಗಳಿದ್ದು, ಪ್ರತಿಬೂತ್‌ನಲ್ಲಿ 300 ಜನರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದರು.

ಮಾಜಿ ಶಾಸಕ ಸಿ.ಗುರುಸ್ವಾಮಿ ಮಾತನಾಡಿ, ಪಕ್ಷದ ಎಲ್ಲ ಮುಖಂಡರು ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸೋಣ. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಶ್ರಮಿಸೋಣ ಎಂದು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಜಿಪಂ ಸದಸ್ಯ ಬಾಲರಾಜ್‌, ತಾಪಂ ಉಪಾಧ್ಯಕ್ಷ ಬಸವಣ್ಣ, ಅಭಿಯಾನ ಜಿಲ್ಲಾ ಸಂಚಾಲಕ ಪಿ.ಬಿ. ಶಾಂತಮೂರ್ತಿ, ಸಹ ಸಂಚಾಲಕ ಎಂ.ಎಸ್‌.ಫ‌ೃಥ್ವಿರಾಜ್‌, ನಗರ ಘಟಕ ಅಧ್ಯಕ್ಷ ಸುಂದರ್‌ರಾಜ್‌, ಚಾಮರಾಜನಗರ ಗ್ರಾಮಾಂತರ ಮಂಡಲ ಅಭಿಯಾನ ಸಂಚಾಲಕ ಪುರುಷೋತ್ತಮ, ಸಹಸಂಚಾಲಕ ಮಹದೇವಸ್ವಾಮಿ, ಮಂಡಲ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್‌, ಮುಖಂಡರಾದ ಡಾ.ಎ.ಆರ್‌.ಬಾಬು, ವಕೀಲ ಚಿನ್ನಸ್ವಾಮಿ, ಉಡಿಗಾಲ ಕುಮಾರಸ್ವಾಮಿ, ಸ್ಲಂ ಮೋರ್ಚಾದ ಅಧ್ಯಕ್ಷ ರಾಜು ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.