ಕೊರೊನಾ: ತುರ್ತು ಚಿಕಿತ್ಸೆಗೆ ಸಕಲ ಸಿದ್ಧತೆ


Team Udayavani, Mar 11, 2020, 3:00 AM IST

corona-turtu

ಕೊಳ್ಳೇಗಾಲ: ಕೊರೊನಾ ವೈರಸ್‌, ಕೊರೊನಾ ವೈರಸ್‌ ಎಲ್ಲೆಲ್ಲೂ ವೈರಸ್‌ ಸದ್ದು ಮಾಡುತ್ತಿದೆ. ಜನರಲ್ಲಿ ಹೃದಯ ನಡುಕ ಉಂಟು ಮಾಡಿದ್ದು, ಮಹಾಮಾರಿ ಕೊರೊನಾ ವೈರಸ್‌ ಕೊಲ್ಲುವ ಔಷಧಿ ಯಾವುದು? ಇದರಿಂದ ಮುಕ್ತಿ ಯಾವಾಗ ಎಂದು ಸಾರ್ವಜನಿಕರು ಎಲ್ಲೆಡೆ ಪ್ರಶ್ನಿಸುವುದರ ಜೊತೆಗೆ ಭಯಭೀತರಾಗಿದ್ದಾರೆ.

ಕೊರೊನಾ ವೈರಸ್‌ ವಿಶ್ವದಾದ್ಯಂತ ಹರಡಿ ಬಳಿಕ ರಾಜ್ಯಕ್ಕೂ ಕಾಲಿಟ್ಟಿರುವ ವೈರಸ್‌ನಿಂದಾಗಿ ಮತ್ತಷ್ಟು ಭಯಕ್ಕೆ ಒಳಗಾಗಿರುವ ಸಾರ್ವಜನಿಕರು ಇದಕ್ಕೆ ಔಷಧಿ ಇಲ್ಲವೆ ಇದನ್ನು ಕೊಲ್ಲುವ ಶಕ್ತಿ ಯಾವ ದೇಶಕ್ಕೆ ಇದೆ. ಇದರ ಔಷಧಿ ಶೀಘ್ರದಲ್ಲೇ ಮಾರುಕಟ್ಟೆಗೆ ಬಂದು ವೈರಸ್‌ ಒಳಗಾಗದವರಿಗೆ ಸೂಕ್ತ ಚಿಕಿತ್ಸೆ ಲಭ್ಯಗೊಂಡು ಪ್ರಾಣ ಭಯದಿಂದ ಪಾರಾಗಲು ಸಾಧ್ಯವೇ ಎಂದು ಎಲ್ಲೆಡೆ ಚರ್ಚೆ ಭರಾಟೆಯಾಗಿ ನಡೆಯುತ್ತಿದೆ.

ಬೇಸಿಗೆ ಬಿಸಿಲು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಬಿಸಿಲಿನ ತಾಪಕ್ಕೆ ಕೊರೊನಾ ವೈರಸ್‌ ಹರಡಲು ಸಾಧ್ಯವಿಲ್ಲ ಎಂದು ಕೆಲವರು ನಿಟ್ಟುಸಿರು ಬಿಟ್ಟರೆ, ಮತ್ತೆ ಕೆಲವರು ಯಾವುದೆ ಬಿಸಿಲಿನ ತಾಪವಿದ್ದರೂ ಅಲ್ಲೊಮ್ಮೆ, ಇಲ್ಲೊಮ್ಮೆ ಹರಡುವುದರಿಂದ ಪ್ರಾಣ ಹೋಗುವುದಂತೂ ಶತಸಿದ್ಧವಾಗಿದೆ. ಈ ವೈರಸ್‌ ಯಾರಿಗೂ ತಗಲುದಂತೆ ಆದರೆ ಸಾಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡುವಲ್ಲಿ ಮುಂದಾಗಿದ್ದಾರೆ.

ತುರ್ತು ಚಿಕಿತ್ಸೆಗೆ ಸಿದ್ಧ: ಕೊರೊನಾ ವೈರಸ್‌ ಎಲ್ಲಾದರೂ ಕಾಣಿಸಿಕೊಂಡ ಕೂಡಲೇ ಅಂತಹವರಿಗೆ ಕೂಡಲೇ ತುರ್ತು ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಐದು ಗಂಡಸರ ಹಾಸಿಗೆ, ಐದು ಹೆಂಗಸರ ಹಾಸಿಗೆಯನ್ನು ಸಿದ್ಧಪಡಿಸಿ, ಅಲ್ಲಿ ನೀಡಬೇಕಾಗಿರುವ ಎಲ್ಲಾ ತುರ್ತು ಚಿಕಿತ್ಸಾ ಯಂತ್ರಗಳನ್ನು ಅಳವಡಿಸಲಾಗಿದೆ.

ಎಲ್ಲೆಡೆ ಕಟ್ಟೆಚ್ಚರ: ಸರ್ಕಾರಕೊರೊನಾ ವೈರಸ್‌ ಪತ್ತೆಯಾದಲ್ಲಿ ಕೂಡಲೇ ಅಂತಹವರ ಮೇಲೆ ನಿಗಾವಹಿಸಿ, ಅದು ಎಲ್ಲೂ ಮತ್ತೂಬ್ಬರಿಗೆ ಹರಡದಂತೆ ತಡೆಗಟ್ಟಬೇಕು ಎಂದು ಸೂಚನೆ ನೀಡಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳನ್ನು ನಾಲ್ಕು ದಿಕ್ಕುಗಳಲ್ಲಿ ಇಬ್ಬರನ್ನು ನೇಮಕ ಮಾಡಿ, ತಮಿಳುನಾಡಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವವರ ತಪಾಸಣೆ ಒಂದೆಡೆಯಾದರೆ, ಮತ್ತೂಂದೆಡೆ ಬೆಂಗಳೂರಿನಿಂದ ಬರುವವರ ತಪಾಸಣೆ ಹೀಗೆ ಹೊರಗಡೆ ಹಾಗೂ ಹೊರ ರಾಜ್ಯಗಳಿಂದ ಬರುವವರ ತಪಾಸಣೆ ಮಾಡುತ್ತಿದ್ದಾರೆ. ಎಲ್ಲೆಡೆ ಕಟ್ಟೆಚ್ಚರ ವಹಿಸಿ ತಪಾಸಣಾ ಕಾರ್ಯ ನಡೆಯುತ್ತಿದೆ.

ಔಷಧಿ ಅಂಗಡಿಗಳ ಮೇಲೆ ನಿಗಾ ಅಗತ್ಯ: ಕೊರೊನಾ ವೈರಸ್‌ನಿಂದ ಭಯಭೀತರಾಗಿರುವ ಸಾರ್ವಜನಿಕರು, ವೈರಸ್‌ನಿಂದ ತಪ್ಪಿಸಿಕೊಳ್ಳಲು ಔಷಧಿ ಅಂಗಡಿಗಳಲ್ಲಿ ಮಾರಾಟ ಮಾಡುವ ಮಾಸ್ಕ್ (ಮುಖಗವಸು), ಹ್ಯಾಂಡ್‌ ಸ್ಯಾನಿಟೈಜರ್‌ಗೆ ಬೇಡಿಕೆ ಹೆಚ್ಚಾಗಿದೆ. ಕೇವಲ ಔಷಧಿ ಅಂಗಡಿಗಳಲ್ಲಿ ನಿಗದಿ ಬೆಲೆಗಿಂತ ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಔಷಧಿ ಅಂಗಡಿಗಳ ಮೇಲೂ ನಿಗಾ ಇಟ್ಟು ಹೆಚ್ಚಿನ ಬೆಲೆಗೆ ಕಾಳಸಂತೆ ಮಾರಾಟ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

ನಿಗದಿಪಡಿಸಿದ ಬೆಲೆಗೆ ಮಾರಾಟ: ಕೊರೊನಾವೈರಸ್‌ ಹರಡದಂತೆ ಸಾರ್ವಜನಿಕರು ಮತ್ತು ಮಕ್ಕಳು ಮಾಸ್ಕ್ ಮತ್ತು ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಬಳಕೆ ಮಾಡಬೇಕು. ಸಾಮಗ್ರಿಗಳ ಮೇಲೆ ನಿಗದಿಪಡಿಸಿದ ಬೆಲೆಗೆ ಮಾರಾಟವಾಗುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ ಎಂದು ಕೇವಲ ಔಷಧಿ ಅಂಗಡಿಗಳ ಮೇಲೆ ವದಂತಿಗಳು ಹರಡಿದೆ ಎಂದು ಸಪ್ತಗಿರಿ ಮೆಡಿಕಲ್‌ ಮಾಲೀಕ ಸುದರ್ಶನ್‌ ಕುಮಾರ್‌ ಹೇಳಿದ್ದಾರೆ.

ನಗರಸಭೆಗೆ ಸೇರಿದ 31 ವಾರ್ಡ್‌ಗಳಲ್ಲಿ ಕೊರೊನಾ ವೈರಸ್‌ ಬಗ್ಗೆ ಆಟೋಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ಸ್ವತ್ಛತೆಗೆ ಹೆಚ್ಚು ಮಹತ್ವ ನೀಡಬೇಕು. ನಗರಸಭೆ ಕೈಗೊಳ್ಳುವ ಎಲ್ಲಾ ಸ್ವತ್ಛತೆಯ ಕಾರ್ಯಗಳಲ್ಲಿ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಮಹಾಮಾರಿ ಕೊರೊನಾ ವೈರಸ್‌ ಹರಡದಂತೆ ತಡೆಯಲು ಸಾಧ್ಯ.
-ನಾಗಶೆಟ್ಟಿ, ನಗರಸಭೆ ಪೌರಾಯುಕ್ತ

ಕೊರೊನಾ ವೈರಸ್‌ ಹರಡದಂತೆ ಎಲ್ಲೆಡೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ವೈರಸ್‌ ಯಾರಿಗಾದರೂ ತಗುಲಿದ ಪಕ್ಷದಲ್ಲಿ ಅಂತಹವರಿಗೆ ತುರ್ತು ಚಿಕಿತ್ಸೆಗಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಔಷಧಿ ಅಂಗಡಿಗಳಲ್ಲಿ ಮಾಸ್ಕ್ ಮತ್ತು ಇನ್ನಿತರ ಉಪಕರಣಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ದೂರು ನೀಡಿದ ಕೂಡಲೇ ಅಂತಹ ಔಷಧಿ ಅಂಗಡಿಗಳ ಮಾಲೀಕರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.
-ಡಾ.ಗೋಪಾಲ್‌, ತಾಲೂಕು ಆರೋಗ್ಯಾಧಿಕಾರಿ

* ಡಿ.ನಟರಾಜು

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.