ಕೊರೊನಾ: ತರಕಾರಿ ಖರೀದಿಸುವವರೇ ಇಲ್ಲ


Team Udayavani, Mar 19, 2020, 3:00 AM IST

corona-tarakari

ಗುಂಡ್ಲುಪೇಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೇರಳದ ವ್ಯಾಪಾರಿಗಳು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆಗಮಿಸದ ಪರಿಣಾಮ, ತರಕಾರಿ ಖರೀದಿಸುವವರೇ ಇಲ್ಲದಂತಾಗಿದೆ. ಅಲ್ಲದೆ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

ಕಳೆದ ವಾರದವರೆಗೂ ಪಟ್ಟಣದ ಮಾರುಕಟ್ಟೆ ಹಾಗೂ ತೆರಕಣಾಂಬಿಯ ಹರಾಜು ಕಟ್ಟೆಗಳಿಂದ ನಿತ್ಯ ನೂರಾರು ಲಾರಿಗಳಲ್ಲಿ ಕೇರಳ ಮತ್ತು ತಮಿಳುನಾಡಿಗೆ ತರಕಾರಿ ಹೋಗುತ್ತಿತ್ತು. ಕೊರೊನಾ ಭೀತಿಯಿಂದ ಎರಡೂ ರಾಜ್ಯಗಳಿಂದ ಖರೀದಿದಾರರು ಆಗಮಿಸದ ಹಿನ್ನೆಲೆಯಲ್ಲಿ ತರಕಾರಿ ಬೆಳೆದಿರುವ ರೈತರು ಹಾಗೂ ರೈತರಿಂದ ಪಡೆದು ಮಾರಾಟ ಮಾಡುವ ದಲ್ಲಾಳಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಬೆರಳೆಣಿಕೆ ಸಂಖ್ಯೆಯಲ್ಲಿ ಖರೀದಿ: ಕಳೆದ ವಾರದವರೆಗೂ ಸಾಮಾನ್ಯವಾಗಿದ್ದ ಮಾರುಕಟ್ಟೆಗೆ ನಿತ್ಯ ನೂರಾರು ವ್ಯಾಪಾರಿಗಳು, ತಮ್ಮ ಟೆಂಪೋಗಳಲ್ಲಿ ಬಂದು ತರಕಾರಿ ಖರೀದಿಸುತ್ತಿದ್ದರು. ಆದರೆ, ಕೇರಳದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಯಾರೂ ಆಗಮಿಸುತ್ತಿಲ್ಲ. ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ಖರೀದಿದಾರರು ಬರುತ್ತಿದ್ದರೆ, ತಮಿಳುನಾಡಿನಲ್ಲಿ ತರಕಾರಿ ಬೆಳೆ ಚೆನ್ನಾಗಿ ಬಂದಿರುವುದರಿಂದ ಅಲ್ಲಿಂದಲೂ ವ್ಯಾಪಾರಿಗಳೂ ಬರುತ್ತಿಲ್ಲ. ಇದರಿಂದ ತರಕಾರಿಗಳ ಬೆಲೆ ಕುಸಿತಕ್ಕೆ ಕಾರಣವಾಗಿದೆ.

ಮಾರಾಟವಾಗುವುದು ಕಷ್ಟ: ಕಳೆದ ವಾರದವರೆಗೂ ಕಿಲೋಗೆ 18 ರೂ. ಇದ್ದ ಬೀನ್ಸ್‌, ಬದನೆ ಹಾಗೂ ಹೂ ಕೋಸು ಈಗ 2 ರೂ.ಗೆ ಇಳಿದಿದೆ. 35 ರೂ. ಇದ್ದ ಮೆಣಸಿಕಾಯಿ 5ಕ್ಕೆ, 15-20ಕ್ಕೆ ಮಾರಾಟವಾಗುತ್ತಿದ್ದ ಟೊಮೆಟೊ 6ಕ್ಕೆ ಮಾರಾಟವಾಗುವುದು ಕಷ್ಟವಾಗಿದೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.

ಉತ್ಪಾದನಾ ವೆಚ್ಚ ಹಾಗೂ ಕಾರ್ಮಿಕರ ಕೂಲಿಯೂ ದೊರಕದ ರೈತರು ತಮ್ಮ ತರಕಾರಿ ಬೆಳೆಯನ್ನು ಅಡ್ಡಾದಿಡ್ಡಿ ಬೆಲೆಗೆ ಮಾರಾಟ ಮಾಡುವಂತಾಗಿದ್ದರೆ, ಇನ್ನೂ ಕೆಲವರು ರಸ್ತೆ ಬದಿಗಳಲ್ಲಿ ಟೊಮೊಟೊ, ಕೋಸು ಮತ್ತಿತರೆ ತರಕಾರಿಯನ್ನು ಜಾನುವಾರುಗಳು ತಿನ್ನಲಿ ಎಂದು ಸುರಿದು ಹೋಗುತ್ತಿದ್ದಾರೆ.

ತರಕಾರಿಗೆ ಬೇಡಿಕೆ ಕಡಿಮೆ: ಕೇರಳದ ಕೋಳಿ ವ್ಯಾಪಾರಿಗಳು ಭಾರೀ ಪ್ರಮಾಣದಲ್ಲಿ ತರಕಾರಿ ಖರೀದಿಸಿ, 1 ಕಿಲೋ ಕೋಳಿ ಮಾಂಸದ ಜತೆಗೆ 2 ಕಿಲೋ ತರಕಾರಿ ಉಚಿತವಾಗಿ ಹಂಚುತ್ತಿದ್ದರು. ಕೊರೊನ ತಡೆಗೆ ಸರ್ಕಾರ ಕೋಳಿ ಮಾಂಸ ಮಾರಾಟದ ಮೇಲೆ ನಿರ್ಬಂಧ ವಿಧಿಸಿದ್ದರಿಂದ ಕೇರಳದಲ್ಲಿಯೂ ವ್ಯಾಪಾರ ನಿಂತಿದೆ. ಇದರಿಂದ ತರಕಾರಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಸುಲ್ತಾನ್‌ ಭತ್ತೇರಿಯ ವ್ಯಾಪಾರಿಗಳು ತಿಳಿಸಿದ್ದಾರೆ.

ಕೇರಳ, ತ.ನಾಡಿನಿಂದ ಖರೀದಿಸುವವರಿಲ್ಲದೆ ಎಲ್ಲಾ ತರಕಾರಿ ಬೆಲೆ ಕುಸಿತವಾಗುತ್ತಿದೆ. ಮುಂದಿನ ದಿನಗಳಲ್ಲಿ ಚೇತರಿಕೆ ಕಾಣಲಿದೆ. ಇದನ್ನು ಕಾದು ನೋಡಬೇಕಾಗಿದೆ.
-ನಾಗೇಂದ್ರ, ಎಪಿಎಂಸಿ ಕಾರ್ಯದರ್ಶಿ

* ಸೋಮಶೇಖರ್‌

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.