![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ 19 : ಗ್ರಾಮಗಳಿಗೆ ದಿಗ್ಬಂಧನ
Team Udayavani, Mar 27, 2020, 3:27 PM IST
![mandya-tdy-1](https://www.udayavani.com/wp-content/uploads/2020/03/mandya-tdy-1-17-620x413.jpg)
ಯಳಂದೂರು: ಕೋವಿಡ್ 19 ಹಿನ್ನೆಲೆಯಲ್ಲಿ ಇಡೀ ರಾಷ್ಟ್ರವೇ ಲಾಕ್ ಔಟ್ ಆಗಿದೆ. ಹೀಗಾಗಿ ಕೆಲ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಅನ್ಯರಿಗೆ ಪ್ರವೇಶವನ್ನು ನಿರ್ಬಂಧಿಸಿ, ದಿಗ್ಬಂಧನ ಹಾಕಿಕೊಂಡಿದ್ದಾರೆ.
ತಾಲೂಕಿನ ವೈ.ಕೆ.ಮೋಳೆ, ಕೃಷ್ಣಾಪುರ, ಯರಿಯೂರು ಗ್ರಾಮಗಳಲ್ಲಿ ಗ್ರಾಮಸ್ಥರು ತಮ್ಮ ಬೀದಿಗಳಿಗೆ ತೆರಳುವ ರಸ್ತೆಗಳಿಗೆ ಯಾರೂ ಬರದಂತೆ ರಸ್ತೆ ಮುಂಭಾಗದಲ್ಲಿ ಮುಳ್ಳು, ಬಿದಿರಿನ ಏಣಿಗಳು, ಮರಗಳನ್ನು ಕಟ್ಟಿ ಬೇರೆಯವರು ಯಾರೂ ಗ್ರಾಮದೊಳಗೆ ಬರಬಾರದು ಎಂದು ನಾಮ ಫಲಕವನ್ನು ಹಾಕಿದ್ದಾರೆ. ಈ ಗ್ರಾಮಗಳಿಂದ ಬೆಂಗಳೂರಿಗೆ ಹೋಗಿ ಕೆಲಸ ಮಾಡಿ, ವಾಪಸ್ಸಾಗುತ್ತಿರುವವರಿಗೂ ಕೆಲ ಗ್ರಾಮಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಗ್ರಾಮಸ್ಥರನ್ನು ಹೊರತುಪಡಿಸಿ ಬೇರೆಯವರು ಯಾರೂ ಬರಬಾರದೆಂದು ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಯರಿಯೂರು ಗ್ರಾಮದ ಕಿರಣ್ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ದೇಶಾ ದ್ಯಂತ ಲಾಕ್ಡೌನ್ ಮಾಡಲಾಗಿದೆ. ನಮ್ಮನ್ನು ನಾವೇ ಮನೆಯಲ್ಲೇ ಉಳಿದುಕೊಂಡು ನಿಷೇಧಿಸಿಕೊಳ್ಳುವ ಪರಿಸ್ಥಿತಿ ಇದೆ.
ಮೈಸೂರು, ಬೆಂಗಳೂರಿ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿಂದ ಬರುವವರಿಗೆ ನೀವು ಇಲ್ಲಿಗೆ ಬರಬಾರದು ಎಂದು ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಅಲ್ಲದೆ, ನಾವು ಕೂಡ ಗ್ರಾಮದಲ್ಲಿ ಮನೆಯೊ ಳಗೆ ಇದ್ದು, ಕೊರೊನಾ ವಿರುದ್ಧ ಸಮರವನ್ನು ಸಾರಿಕೊಂಡಿದ್ದೇವೆ ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.