ಕೋವಿಡ್ ತಡೆಗೆ ಸ್ವರಕ್ಷಣೆ ಅಗತ್ಯ
Team Udayavani, Jun 20, 2020, 5:10 AM IST
ಚಾಮರಾಜನಗರ: ಕೋವಿಡ್-19 ತಡೆಗಾಗಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ ನಗರದಲ್ಲಿ ಆಚರಿಸಿದ ಮಾಸ್ಕ್ ದಿನ ಗಮನ ಸೆಳೆಯಿತು. ನಗರದ ಚಾಮರಾಜೆಶ್ವರ ದೇವಾಲಯದ ಮುಂದೆ ಆಯೋಜಿಸಿದ್ದ ಆರೋಗ್ಯ ಜಾಗೃತಿ ಪಾದಯಾತ್ರೆಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಚಾಲನೆ ನೀಡಿದರು.
ಬಳಿಕ ಆರೋಗ್ಯ ಜಾಗೃತಿ ಪಾದಯಾತ್ರೆಯಲ್ಲಿ ಕೋವಿಡ್-19ರ ಮುಂಜಾಗ್ರತಾ ಕ್ರಮಗಳ ಪಾಲನೆ ಕುರಿತು ಭಿತ್ತಿಪತ್ರ ಹಿಡಿದು ಅಧಿಕಾರಿಗಳು ಪಾಲ್ಗೊಂಡಿದ್ದರು. ಶಾಸಕ ನಿರಂಜನಕುಮಾರ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ನಾರಾಯಣರಾವ್, ಎಸ್ಪಿ ಆನಂದಕುಮಾರ್ ಇತರ ಹಿರಿಯ ಅಧಿಕಾರಿಗಳು ಕಾಲ್ನಡಿಗೆಯಲ್ಲಿ ನಗರದ ಮುಖ್ಯರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿದರು.
ಕೋವಿಡ್ ನಿಯಂತ್ರಣಕ್ಕಾಗಿ ಜನರು ಮಾಸ್ಕ್ ಧರಿಸುವುದು, ಆಗಿಂದಾಗ್ಗೆ ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಎಎಸ್ಪಿ ಅನಿತಾ, ಡಿಎಚ್ಒ ಡಾ.ಎಂ.ಸಿ ರವಿ, ತಹಶೀಲ್ದಾರ್ ಮಹೇಶ್, ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್