ನರ್ಸಿಂಗ್‌ ಸ್ಕೂಲ್‌ನ 15 ವಿದ್ಯಾರ್ಥಿನಿಯರಿಗೆ ಕೋವಿಡ್


Team Udayavani, Dec 24, 2020, 1:19 PM IST

ನರ್ಸಿಂಗ್‌ ಸ್ಕೂಲ್‌ನ 15 ವಿದ್ಯಾರ್ಥಿನಿಯರಿಗೆ ಕೋವಿಡ್

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಕಡಿಮೆಯಾಗು ತ್ತಿರುವ ಬೆನ್ನಲ್ಲೇ ಕೊಳ್ಳೇಗಾಲತಾಲೂಕಿನ ಕಾಮಗೆರೆಯ ಹೋಲಿಕ್ರಾಸ್‌ ಆಸ್ಪತ್ರೆಯ ನರ್ಸಿಂಗ್‌ ಸ್ಕೂಲ್‌ನ 15 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ತಗುಲಿದೆ.

ಹೋಲಿ ಕ್ರಾಸ್‌ ಆಸ್ಪತ್ರೆಯ ಕಾಂಪೌಂಡ್‌ನೊಳಗೆ, ಆಸ್ಪತ್ರೆಯ ಹಿಂಬದಿ ನರ್ಸಿಂಗ್‌ ಸ್ಕೂಲ್‌ ಇದೆ. ಕೋವಿಡ್‌ ಹಿನ್ನೆಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ ಕ್ಲಾಸ್‌ ನಡೆಯುತ್ತಿವೆ. 130 ವಿದ್ಯಾರ್ಥಿನಿಯರುಹಾಸ್ಟೆಲ್‌ನಲ್ಲಿದ್ದಾರೆ.ಇಲ್ಲಿಕೇರಳ,ಮಣಿಪುರ, ಛತ್ತಿಸ್‌ಗಢ, ಜಾರ್ಖಂಡ್‌ ಹಾಗೂ ಕರ್ನಾಟಕದ ವಿದ್ಯಾರ್ಥಿಗಳಿದ್ದಾರೆ.

ಹಾಸ್ಟೆಲ್‌ನ ವಿದ್ಯಾರ್ಥಿನಿಯರಲ್ಲಿ ಕೆಲವರಿಗೆ ನೆಗಡಿ, ತಲೆನೋವು, ಕೆಮ್ಮು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಕೂಲ್‌ನ ಪ್ರಿನ್ಸಿಪಾಲ್‌ ಅವರು ಕಾಮಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರ ಕೋವಿಡ್‌ ಪರೀಕ್ಷೆಗೆ ಮನವಿಮಾಡಿದ್ದರು. ಸೋಮವಾರ ವಿದ್ಯಾರ್ಥಿನಿಯರಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಯಿತು.ಅದರ ಫ‌ಲಿತಾಂಶ ಮಂಗಳವಾರ ಬಂದಿದ್ದು, 15 ವಿದ್ಯಾರ್ಥಿನಿಯರಿಗೆ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಮಂಗಳವಾರ ಜಿಲ್ಲೆಯಲ್ಲಿ ಒಟ್ಟು 26 ಪ್ರಕರಣಗಳು ಪತ್ತೆಯಾಗಿವೆ. ಇವುಗಳಲ್ಲಿ 15 ಕೇಸ್‌ಗಳು ನರ್ಸಿಂಗ್‌ ಶಾಲೆಯದೇ ಆಗಿದ್ದವು! ಈ 15 ಪಾಸಿಟಿವ್‌ ಪ್ರಕರಣಗಳಲ್ಲಿ ಮೂವರು ಕೊಳ್ಳೇಗಾಲದವರು ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯರಿಗೆ ಕೋವಿಡ್‌ ಹೇಗೆ ಹರಡಿರಬಹುದೆಂದು ತಿಳಿದುಬಂದಿಲ್ಲ. 10 ದಿನಗಳ ಹಿಂದೆ ನರ್ಸಿಂಗ್‌ ತರಗತಿಯ ವಾರ್ಷಿಕ ಪರೀಕ್ಷೆಗಳುಇಲ್ಲಿ ನಡೆದಿದ್ದವು. ಇದು ಪರೀಕ್ಷಾ ಸೆಂಟರ್‌ ಆಗಿರುವುದರಿಂದ ಬೇರೆ ಕಾಲೇಜುಗಳಿಂದಲೂ ವಿದ್ಯಾರ್ಥಿಗಳು ಬರೆದಿದ್ದರು. ಈ ವೇಳೆ ಹೊರಗಿನಿಂದ ಬಂದವರಿಂದ ಕೋವಿಡ್‌ ಹರಡಿರಬಹುದು.ಹಾಸ್ಟೆಲ್‌ ಆದ್ದರಿಂದ ಒಬ್ಬರಿಂದೊಬ್ಬರಿಗೆ ಸೋಂಕುತಗುಲಿರಬಹುದೆಂದು ಶಂಕಿಸಲಾಗಿದೆ. ಅಲ್ಲದೇವಿದ್ಯಾರ್ಥಿನಿಯರನ್ನು ನೋಡಲು ಪೋಷಕರು ಹೊರಗಿನಿಂದ ಬರುತ್ತಾರೆ. ಜೊತೆಗೆ ವಾರಂತ್ಯದಲ್ಲಿವಿದ್ಯಾರ್ಥಿನಿಯರು ಶಾಪಿಂಗ್‌ಗಾಗಿ ಕೊಳ್ಳೇಗಾಲ, ಮೈಸೂರಿಗೂ ಹೋಗುತ್ತಾರೆ. ಆಗ ಹರಡಿರಬಹುದೆಂದು ಹೇಳಲಾಗುತ್ತಿದೆ.

ಸೋಮವಾರ 48 ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗಿತ್ತು.ಮತ್ತೆಮಂಗಳವಾರ25ವಿದ್ಯಾರ್ಥಿನಿಯರ ಪರೀಕ್ಷೆ ನಡೆಸಿದ್ದು, ಎಲ್ಲರಲ್ಲೂ ನೆಗೆಟಿವ್‌ ಬಂದಿದೆ. ಸೋಂಕಿತ ವಿದ್ಯಾರ್ಥಿನಿಯರನ್ನು ಹೋಲಿ ಕ್ರಾಸ್‌ಆಸ್ಪತ್ರೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಐಸೋಲೇಷನ್‌ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆಯಲ್ಲಿ ನೆಗೆಟಿವ್‌ ಫ‌ಲಿತಾಂಶ ಬಂದವಿದ್ಯಾರ್ಥಿನಿಯರನ್ನು ಒಂದು ವಿಭಾಗದಲ್ಲಿ, ಇನ್ನೂ ಪರೀಕ್ಷೆ ನಡೆಸದ ವಿದ್ಯಾರ್ಥಿನಿಯರನ್ನು ಇನ್ನೊಂದು ವಿಭಾಗದಲ್ಲಿ ಇರಿಸಲಾಗಿದೆ.

ಈ ನರ್ಸಿಂಗ್‌ ಸ್ಕೂಲ್‌ನ ವಿದ್ಯಾರ್ಥಿನಿಯರು ಹೋಲಿಕ್ರಾಸ್‌ ಆಸ್ಪತ್ರೆಗೆ ಬಂದಿಲ್ಲ. ಆಸ್ಪತ್ರೆ, ನರ್ಸಿಂಗ್‌ಸ್ಕೂಲ್‌ ಪ್ರತ್ಯೇಕವಾಗಿವೆ. ಹೀಗಾಗಿ ರೋಗಿಗಳು,ಸಾರ್ವಜನಿಕರು ಆತಂಕಪಡಬೇಕಾಗಿಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

 

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.