ಕಾರಿನಿಂದ ಢಿಕ್ಕಿ ಹೊಡೆಸಿ 1.75 ಲಕ್ಷ ದೋಚಿ ಪರಾರಿ
Team Udayavani, Jan 11, 2021, 11:37 AM IST
ಹನೂರು: ವ್ಯಾಪಾರದ ಹಣವನ್ನು ತರುತ್ತಿದ್ದ ವ್ಯಕ್ತಿಗೆ ಕಾರಿನಿಂದ ಢಿಕ್ಕಿ ಹೊಡೆಸಿ, ಹಣ ದೋಚಿರುವ ಘಟನೆ ಪಟ್ಟಣದ ಹೊರ ವಲಯದ ಅರಣ್ಯ ಇಲಾಖೆ ನರ್ಸರಿ ಸಮೀಪ ನಡೆದಿದೆ.
ಹನೂರು ಪಟ್ಟಣದ ನಿತಿನ್ ಎಂಬುವವರೇ ಹಣ ಕಳೆದುಕೊಂಡಿರುವ ವ್ಯಕ್ತಿ. ಇವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದಾರೆ. ಇವರು ಸನ್ಫ್ಯೂರ್ ಎಣ್ಣೆಯ ಏಜೆನ್ಸಿ ಪಡೆದಿದ್ದು, ತಾಲೂಕಿನ ವಿವಿಧ ಗ್ರಾಮಗಳ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಇವರು ಎಂದಿನಂತೆ ವ್ಯಾಪಾರ ಮುಗಿಸಿ ಎಲ್ಲೇಮಾಳ, ಕೌದಳ್ಳಿ, ರಾಮಾಪುರ ಅಂಗಡಿಗಳಿಂದ ಹಣ ಸಂಗ್ರಹಣೆ ಮಾಡಿ, ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು.
ಈ ವೇಳೆ ಪಟ್ಟಣ- ಅಜ್ಜೀಪುರ ಮಾರ್ಗದ ಅರಣ್ಯ ಇಲಾಖೆ ನರ್ಸರಿ ಸಮೀಪ ಆಗಮಿಸುತ್ತಿದ್ದಂತೆ ಅಪರಿಚಿತ ಇಂಡಿಕಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ 5 ಜನ ಅಪರಿಚಿತರು ವಾಹನದಿಂದ ಕೆಳಗಿಳಿದು ಅವರ ಬಳಿಯಿದ್ದ 1.75 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಬಳಿಕ ನಿತಿನ್ ಅವರು ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಕೊಳ್ಳೇಗಾಲ ಉಪವಿಭಾಗ ಡಿವೈಎಸ್ಪಿ ನಾಗರಾಜು ಮತ್ತು ರಾಮಾಪುರ ಪಿಎಸ್ಐ ನಂಜುನಾಥ್ ಪ್ರಸಾದ್ ಹಾಗೂ ಹನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು
ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು
ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ