ಮಾನವೀಯ ಗುಣ ಬೆಳೆಸಿಕೊಳ್ಳಿ


Team Udayavani, Jul 15, 2019, 3:46 PM IST

cn-tdy-3..

ಗುಂಡ್ಲುಪೇಟೆ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪದವೀಧರರಾಗುವುದರೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಚಾಮರಾಜ ನಗರದ ರಾಮಚಂದ್ರ ಶಿಕ್ಷಕರ ತರಬೇತಿ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ ಬಿಸಲ್ವಾಡಿ ಹೇಳಿದರು.

ಪಟ್ಟಣದ ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳನ್ನು ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ಉನ್ನತ ಶಿಕ್ಷಣವೆನ್ನುವುದು ಪದವಿಧರರನ್ನಾಗಿ ಮಾಡುವ ಪ್ರತ್ಯಕ್ಷ ಲಾಭೋದ್ದೇಶಗಳಿಗಿಂತ, ಅವರಲ್ಲಿ ಮಾನವೀ ಯತೆಯ ಗುಣ ಮತ್ತು ನಡವಳಿಕೆಗಳನ್ನು ಬೆಳೆ ಯುವಂತೆ ಮಾಡುವ ಪರೋಕ್ಷ ಲಾಭಗಳಿಗೂ ಆದ್ಯತೆ ನೀಡಬೇಕಿದೆ ಎಂದರು.

ಈ ಹಂತದ ಓದು ಎನ್ನುವುದು ವಿದ್ಯಾರ್ಥಿಗಳು ತಮ್ಮ ಮೇಲೆ ತಾವು ನಿಯಂತ್ರಣವನ್ನು ಸಾಧಿಸಿಕೊಂಡು ತಂದೆ ತಾಯಿಗಳ ಕನಸುಗಳನ್ನು ಸಾಕಾರಗೊಳಿ ಸುವಂತೆ ಸಾಗಬೇಕಿದೆ. ಇಲ್ಲಿ ಶ್ರಮದ ಬೆಲೆ ಅರಿಯುವುದು ಅತ್ಯಗತ್ಯ ಎಂದು ತಿಳಿಸಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಜಿ.ಮಲ್ಲಿಕಾರ್ಜುನ ಮಾತನಾಡಿ, ಕೃಷಿ ಕುಟುಂಬ ಗಳಿಂದ ಬಂದಿರುವ ನಮ್ಮ ವಿದ್ಯಾರ್ಥಿಗಳು ಇಂದು ಓದು ಎನ್ನುವುದು ಕೃಷಿ ವ್ಯವಸ್ಥೆಗೆ ಪೂರಕವಾದ ಕೌಶಲ ಗಳನ್ನು ಕಲಿತುಕೊಂಡು ಜೀವನ ನಿರ್ವಹಿಸುವ ವಿಭಿನ್ನ ಮಾರ್ಗಗಳನ್ನು ಕಲಿಯುವಂತಾಗಬೇಕಿದೆ ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎನ್‌.ಮಹದೇ ವಸ್ವಾಮಿ ಮಾತನಾಡಿ, ಸಾಂಪ್ರದಾಯಿಕ ಶಿಕ್ಷಣದ ಜೊತೆ ಜೊತೆಗೆ ತಾಂತ್ರಿಕ ಮತ್ತು ಸಾಮಾನ್ಯ ಜ್ಞಾನಗಳಿಕೆಗೂ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕಿದೆ. ಇದು ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಹೆಚ್ಚಿಸುವುದರೊಂದಿಗೆ ಮುಂದಿನ ಭವಿಷ್ಯಕ್ಕೆ ಸಹಾಯಕವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಪರಿಸರ ತಜ್ಞ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ರವಿರಾಜ್‌ ಮಾತನಾಡಿ, ವಿದ್ಯೆಯೆನ್ನುವುದು ನಮ್ಮಲ್ಲಿ ಕೊಂಡು ಕೊಳ್ಳುವ ಪ್ರವೃತ್ತಿಗಳನ್ನು ಬೆಳೆಸುವಂತಾಗ ಬಾರದು, ಬದಲಿಗೆ ಸೃಜನಶೀಲ ಕೌಶಲಗಳ ಬೆಳವಣಿಗೆಗೆ ಪ್ರೇರಣೆ ನೀಡುವಂತಾಗಬೇಕೆಂದು ತಿಳಿಸಿದರು.

ವಿದ್ಯಾರ್ಥಿನಿಯರಾದ ಸಹನ ಮತ್ತು ತಂಡದವರು ಪ್ರಾರ್ಥನೆ ನಡೆಸಿಕೊಟ್ಟರು. ಇಂಗ್ಲಿಷ್‌ ವಿಭಾಗದ ಮುಖ್ಯಸ್ಥ ಪ್ರೊ.ಹೊನ್ನೇಗೌಡ ಪ್ರೊ.ಪರಶಿವ, ಕನ್ನಡ ವಿಭಾಗದ ಮುಖ್ಯಸ್ಥೆ ಜಯಶೀಲಾ, ಐಕ್ಯುಎಸ್‌ಸಿ ಸಂಚಾಲಕ ಪ್ರೊ. ಮರಿಸ್ವಾಮಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವೀ.ನಾ. ಚಿದಾನಂದಸ್ವಾಮಿ ಇದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.